Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟೀಕಿಸುವ ಮಾಧ್ಯಮಗಳನ್ನು ಬೆದರಿಸುವ...

ಟೀಕಿಸುವ ಮಾಧ್ಯಮಗಳನ್ನು ಬೆದರಿಸುವ ತಂತ್ರದ ಭಾಗ: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್‌ ಗಿಲ್ಡ್‌ ಕಳವಳ

14 Feb 2023 5:40 PM IST
share
ಟೀಕಿಸುವ ಮಾಧ್ಯಮಗಳನ್ನು ಬೆದರಿಸುವ ತಂತ್ರದ ಭಾಗ: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್‌ ಗಿಲ್ಡ್‌ ಕಳವಳ

ಹೊಸದಿಲ್ಲಿ: ಬಿಬಿಸಿ ಇಂಡಿಯಾದ ಕಛೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವುದು ಕಳವಳಕಾರಿ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿದೆ.

ಈ ದಾಳಿಯು, ಸರ್ಕಾರವನ್ನು ಟೀಕಿಸುವ ಮಾಧ್ಯಮಗಳನ್ನು ʼಬೆದರಿಸಲು ಮತ್ತು ಕಿರುಕುಳʼ ನೀಡಲು ಸರ್ಕಾರಿ ಏಜೆನ್ಸಿಗಳನ್ನು ಬಳಸಿಕೊಳ್ಳುವ ʼಪ್ರವೃತ್ತಿʼಯ ಮುಂದುವರಿದ ಭಾಗವಾಗಿದೆ ಎಂದು ಅದು ಹೇಳಿದೆ.

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಹಕ್ಕುಗಳನ್ನು ದುರ್ಬಲಗೊಳಿಸದಂತೆ ಇಂತಹ ಎಲ್ಲಾ ತನಿಖೆಗಳಲ್ಲಿ ಹೆಚ್ಚಿನ ಕಾಳಜಿ ಮತ್ತು ಸೂಕ್ಷ್ಮತೆಯನ್ನು ತೋರಿಸಬೇಕೆಂದು ಗಿಲ್ಡ್ ತನ್ನ ಹೇಳಿಕೆಯಲ್ಲಿ ಒತ್ತಾಯಿಸಿದೆ.

ತೆರಿಗೆ ವಂಚನೆ ಆರೋಪದ ತನಿಖೆಯ ಭಾಗವಾಗಿ ಆದಾಯ ತೆರಿಗೆ ಅಧಿಕಾರಿಗಳು ದಿಲ್ಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆ ಕಾರ್ಯಾಚರಣೆ ನಡೆಸಿದ ನಂತರ ಈ ಹೇಳಿಕೆ ಹೊರಬಿದ್ದಿದೆ.

"ಐಟಿ ಇಲಾಖೆಯ ಸಮೀಕ್ಷೆಯು ಸರ್ಕಾರಿ ನೀತಿಗಳು ಅಥವಾ ಆಡಳಿತ ಸ್ಥಾಪನೆಯನ್ನು ಟೀಕಿಸುವ ಪತ್ರಿಕಾ ಸಂಸ್ಥೆಗಳನ್ನು ಬೆದರಿಸುವ ಮತ್ತು ಕಿರುಕುಳ ನೀಡಲು ಸರ್ಕಾರಿ ಏಜೆನ್ಸಿಗಳನ್ನು ಬಳಸುವ ಪ್ರವೃತ್ತಿಯ ಮುಂದುವರಿಕೆಯಾಗಿದೆ" ಎಂದು ಗಿಲ್ಡ್ ಇಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ಗುಜರಾತಿನಲ್ಲಿ 2002 ರ ಹಿಂಸಾಚಾರ ಮತ್ತು ಭಾರತದಲ್ಲಿನ ಅಲ್ಪಸಂಖ್ಯಾತರ ಪ್ರಸ್ತುತ ಸ್ಥಿತಿಯ ಕುರಿತು ಬಿಬಿಸಿ ಎರಡು ಸಾಕ್ಷ್ಯಚಿತ್ರಗಳನ್ನು ಬಿಡುಗಡೆ ಮಾಡಿದ ನಂತರ ಬಿಬಿಸಿ ಕಛೇರಿಗಳ ಮೇಲೆ ಐಟಿ ದಾಳಿ ನಡೆದಿದೆ.

 ಈ ಹಿಂದೆ, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಕಚೇರಿಗಳಲ್ಲಿ 2021 ರಲ್ಲಿ ಐಟಿ ದಾಳಿಗಳನ್ನು ನಡೆಸಲಾಗಿದೆ ಎಂದು ಎಡಿಟರ್ಸ್‌ ಗಿಲ್ಡ್ ನೆನಪಿಸಿಕೊಂಡಿದೆ.

"ಪ್ರತಿಯೊಂದು ಪ್ರಕರಣದಲ್ಲಿ, ಸುದ್ದಿ ಸಂಸ್ಥೆಗಳು ಸರ್ಕಾರಿ ಸ್ಥಾಪನೆಯ ವಿಮರ್ಶಿಸಿದ ಬೆನ್ನಲ್ಲೇ ಐಟಿ ದಾಳಿಗಳು ನಡೆದಿದೆ. ಇದು ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರವೃತ್ತಿ" ಎಂದು ಗಿಲ್ಡ್ ಹೇಳಿದೆ.

share
Next Story
X