Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಢಾಬಾದ ಫ್ರಿಜ್‌ನಲ್ಲಿ ಮಹಿಳೆಯ ಮೃತದೇಹ...

ಢಾಬಾದ ಫ್ರಿಜ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ: ಪ್ರಿಯಕರ ಪೊಲೀಸ್‌ ವಶಕ್ಕೆ

14 Feb 2023 8:26 PM IST
share
ಢಾಬಾದ ಫ್ರಿಜ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ: ಪ್ರಿಯಕರ ಪೊಲೀಸ್‌ ವಶಕ್ಕೆ

ಹೊಸದಿಲ್ಲಿ: ನೈಋತ್ಯ ದಿಲ್ಲಿಯ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಢಾಬಾವೊಂದರಲ್ಲಿ ಯುವತಿಯ ಶವವು ರೆಫ್ರಿಜರೇಟರ್‌ನಲ್ಲಿ ಪತ್ತೆಯಾಗಿದೆ.  ಪೊಲೀಸರು ಆಕೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಗ್ರಾಮದ ಹೊರವಲಯದಲ್ಲಿರುವ ಢಾಬಾದಲ್ಲಿ ಯುವತಿಯೊಬ್ಬಳನ್ನು ಕೊಲೆ ಮಾಡಿ ಶವವನ್ನು ಬಚ್ಚಿಟ್ಟಿರುವ ಬಗ್ಗೆ ಮಂಗಳವಾರ ಬೆಳಗ್ಗೆ ಮಾಹಿತಿ ಲಭಿಸಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ದ್ವಾರಕಾ) ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಹೊರತೆಗೆದಿದ್ದಾರೆ. ಮಿತ್ರಾನ್ ಗ್ರಾಮದ ನಿವಾಸಿ ಸಾಹಿಲ್ ಗೆಹ್ಲೋಟ್ ಎಂಬಾತನನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.

 ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಾಹಿಲ್ ಮತ್ತು ಮೃತ ಯುವತಿ ಪರಸ್ಪರ ಸಂಬಂಧ ಹೊಂದಿದ್ದರು. ಮಿತ್ರಾನ್ ಗ್ರಾಮದ ನಿವಾಸಿಯಾದ ಸಾಹಿಲ್, ಹರಿಯಾಣದ ಜಜ್ಜರ್ ನಿವಾಸಿ ನಿಕ್ಕಿಯನ್ನು 2018 ರಲ್ಲಿ ಉತ್ತಮ್ ನಗರ ಪ್ರದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾಗ ಭೇಟಿಯಾಗಿದ್ದನು. ಬಳಿಕ ಅವರು ಗ್ರೇಟರ್ ನೋಯ್ಡಾದಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದರು. ‌

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ, ಅವರು ತಮ್ಮ ಮನೆಗಳಿಗೆ ಮರಳಿದ್ದರು. ಲಾಕ್‌ಡೌನ್ ಮುಗಿದ ನಂತರ, ಅವರು ಮತ್ತೆ ದ್ವಾರಕಾ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದಾರೆ.

ಆರೋಪಿ ತನ್ನ ಸಂಬಂಧದ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿರಲಿಲ್ಲ. ಸಾಹಿಲ್‌ನ ಮನೆಯವರು ಬೇರೊಬ್ಬ ಮಹಿಳೆಯನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದರು. ಅದರಂತೆ ಫೆಬ್ರವರಿ 10 ಕ್ಕೆ ಆತನ ಮದುವೆಯ ದಿನಾಂಕವನ್ನು ನಿಗದಿ ಪಡಿಸಿದ್ದು, ಇದಕ್ಕೆ ಯುವತಿ ಆಕ್ಷೇಪವೆತ್ತಿದ್ದಳು. ಇಬ್ಬರ ನಡುವಿನ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ಪೊಲೀಸರ ಪ್ರಕಾರ, ಸಾಹಿಲ್ ತನ್ನ ಕಾರಿನಲ್ಲಿದ್ದ ಮೊಬೈಲ್ ಫೋನ್‌ನ ಡೇಟಾ ಕೇಬಲ್ ಸಹಾಯದಿಂದ ಯುವತಿಯ ಕತ್ತು ಹಿಸುಕಿ ಕೊಂದಿದ್ದಾನೆ.

  ಬಳಿಕ ಆತನ ಮಾಲೀಕತ್ವದಲ್ಲಿರುವ ಢಾಬಾಕ್ಕೆ ತೆರಳಿ ಆಕೆಯ ಮೃತದೇಹವನ್ನು ಫ್ರಿಜ್‌ ನಲ್ಲಿ ಇಟ್ಟು, ತನ್ನೂರಿಗೆ ತೆರಳಿ ಬೇರೊಬ್ಬ ಯುವತಿಯನ್ನು ಮದುವೆಯಾಗಿದ್ದಾನೆ ಎಂದು indiatoday.in ವರದಿ ಮಾಡಿದೆ.

share
Next Story
X