ಫೆ.18-19 ರಂದು 'ಮಂಗಳೂರು ಲಿಟ್ ಫೆಸ್ಟ್'
ಮಂಗಳೂರು: ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟನ್ಯಾಷನಲ್ ಕನ್ವೆನ್ಸನ್ ಸೆಂಟರ್ನಲ್ಲಿ ಮಂಗಳೂರು ಲಿಟ್ ಫೆಸ್ಟ್ನ ಐದನೇ ಆವೃತ್ತಿಯು ದಿ ಐಡಿಯಾ ಆಫ್ ಭಾರತ್ ('The Idea of Bharath')ಎಂಬ ಥೀಮ್ನಡಿಯಲ್ಲಿ ಜರುಗಲಿದೆ ಎಂದು ಭಾರತ್ ಫೌಂಡೇಶನ್ ಟ್ರಸ್ಟಿ ಸುನಿಲ್ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಒಟ್ಟು 25 ಸೆಷನ್ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ. ಲಿಟ್ ಫೆಸ್ಟ್ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷರಾದ ತುಕಾರಾಮ್ ಪೂಜಾರಿ ಇವರಿಗೆ ಈ ಬಾರಿಯ ಪ್ರಶಸ್ತಿ ನಿಡಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಲೇಖಕರೊಂದಿಗೆ ಸಂವಾದ - (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್ನ ವಿಶೇಷತೆಯಾಗಿದೆ. ಅಮೃತ ಕಾಲದಲ್ಲಿ ಭಾರತದ ಬಗೆಗಿನ ಚಿಂತನೆ-ಪರಿಕಲ್ಪನೆಯ ಅಡಿ ಲಿಟ್ ಫೆಸ್ಟ್ ಜರುಗಲಿದ್ದು, ಆರ್. ಜಗನಾಥ್, ವಿನಯ್ ಹೆಗ್ಡೆ, ವಿ. ನಾಗರಾಜ್ ಅವರು ಭಾಗಿಯಾಗಲಿದ್ದಾರೆ.
ರಿಷಬ್ ಶೆಟ್ಟಿ, ಪ್ರಕಾಶ್ ಬೆಳವಾಡಿ, ಸ್ಮಿತಾ ಪ್ರಕಾಶ್, ಶಿವ್ ಅರೂರ್, ಅಜಿತ್ ಹನಮಕ್ಕನವರ್, ಅಡ್ಡಂಡ ಕಾರ್ಯಪ್ಪ, ಬಾಸುಮ ಕೊಡಗು, ದಕ್ಕುಲ ಮುನಿಸ್ವಾಮಿ ಸೇರಿದಂತೆ ಅನೇಕ ವಾಗ್ಮಿಗಳು, ಸಾಹಿತಿಗಳು, ಸಂಸೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರಲಿದ್ದಾರೆ. (ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳ ವಿವರಗಳನ್ನು ಈ ಲಿಂಕ್ನಲ್ಲಿ-https://mirlitfest.org/event-schedule-2023/ ಪಡೆಯಬಹುದು) ಎಂದು ಸುನಿಲ್ ಕುಲಕರ್ಣಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ಬ್ರಿಜೇಶ್ ಚೌಟ (ಟ್ರಸ್ಟಿ)ಶ್ರೀ ಧರ್ ಗುಡಿ, ಸಂಜಯ ಪ್ರಭು, ಸುಚಿತ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು







