Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಾನವೀಯತೆಯ ಪಾಠ ಕಲಿಸಿದ 9 ವರ್ಷದ ಬಾಲಕ!

ಮಾನವೀಯತೆಯ ಪಾಠ ಕಲಿಸಿದ 9 ವರ್ಷದ ಬಾಲಕ!

ಬಿಂಬಗಳು

ಎಚ್.ಎಚ್.ಬೇಪಾರಿಎಚ್.ಎಚ್.ಬೇಪಾರಿ15 Feb 2023 12:57 PM IST
share
ಮಾನವೀಯತೆಯ ಪಾಠ ಕಲಿಸಿದ 9 ವರ್ಷದ ಬಾಲಕ!
ಬಿಂಬಗಳು

ಆಧುನಿಕತೆಯ ಭರಾಟೆಯಲ್ಲಿ ಮಾನವೀಯತೆ ಮರೆಯಾಗುತ್ತಿರುವ ದಿನಮಾನಗಳಲ್ಲಿ ಭೂಕಂಪ ಸಂತ್ರಸ್ತರ ನೆರವಿಗೆ ಪಿಗ್ಗಿ ಬ್ಯಾಂಕ್ ಹಣವನ್ನು ಕೊಟ್ಟ ಬಾಲಕನ ಸೇವೆ ಮಾನವೀಯತೆಗೆ ಸಾಕ್ಷಿಯಾಗಿದೆ.

ಹೌದು, ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಿಂದ ಲಕ್ಷಾಂತರ ಜನ ನೆಲೆ ಕಳೆದುಕೊಂಡು ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿರುವ ಟರ್ಕಿ ಹಾಗೂ ಸಿರಿಯಾಗೆ ಭಾರತ ಸೇರಿದಂತೆ ಜಗತ್ತಿನ ಹಲವಾರು ರಾಷ್ಟ್ರಗಳು ಸೇವೆಗೆ ಮುಂದಾಗಿ ಸಂಕಷ್ಟಕ್ಕೆ ನೆರವು ನೀಡುವ ಮೂಲಕ ಅವರಿಗೆ ಶಕ್ತಿ ತುಂಬುವಂತಹ ಕೆಲಸ ಮಾಡುತ್ತಿವೆ.

ಇದರ ನಡುವೆ ಕಳೆದ ವರ್ಷ ನವೆಂಬರ್‌ನಲ್ಲಿ ಉಂಟಾದ ಭೂಕಂಪನದಲ್ಲಿ ಬದುಕುಳಿದ ಆಲ್ಪರ್ಸ್ಲಾನ್ ಎಫೆ ಡೆಮಿರ್ ಎಂಬ ಬಾಲಕ ಪಿಗ್ಗಿ ಬ್ಯಾಂಕ್‌ನಲ್ಲಿ ಉಳಿಸಿಟ್ಟ ಹಣವನ್ನು ಭೂಕಂಪನ ಸಂತಸ್ತರ ನೆರವಿಗೆ ನೀಡಿದ್ದಾನೆ. ಅಷ್ಟೇ ಅಲ್ಲದೆ ‘‘ನಾನು ಚಾಕಲೇಟ್ ಖರೀದಿಸದಿದ್ದರೂ ಪರವಾಗಿಲ್ಲ ಭೂಕಂಪವಾಗಿರುವ ಪ್ರದೇಶದಲ್ಲಿರುವ ಮಕ್ಕಳಿಗೆ ಚಳಿ, ಹಸಿವು ಇರಬಾರದು. ನನ್ನ ಬಟ್ಟೆ ಮತ್ತು ಆಟಿಕೆಗಳನ್ನು ಭೂಕಂಪವಾಗಿರುವ ಸ್ಥಳಕ್ಕೆ ಕಳುಹಿಸುತ್ತೇನೆ’’ ಎಂದು ಪತ್ರ ಬರೆದಿದ್ದಾನೆ ಸದ್ಯ ಡೆಮಿರ್ ಪತ್ರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆತನ ಮಾನವೀಯತೆ ಗುಣ ಕಂಡು ಎಲ್ಲರೂ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನುಷ್ಯನಿಗೆ ಮಾನವೀಯತೆ ಇದ್ದರೆ ಮಾತ್ರ ಅವನ ಬದುಕು ಸಾರ್ಥಕ ಪಡೆದುಕೊಳ್ಳಲು ಸಾಧ್ಯ ಎಂಬುದು ಪ್ರತಿಯೊಬ್ಬರೂ ಬಾಲಕ ಡೆಮಿರ್‌ನ ಸೇವೆಯಿಂದ ಅರ್ಥಮಾಡಿಕೊಳ್ಳಬೇಕಾಗಿದೆ. ಸೇವೆ, ಪ್ರೀತಿ, ಸೌಹಾರ್ದ, ಅಹಿಂಸೆ ಮತ್ತಿತರ ಸದ್ಗುಣಗಳೇ ಮಾನವೀಯ ಮೌಲ್ಯಗಳು.ಇವುಗಳನ್ನು ಅರಿತು ಆಚರಣೆ ತಂದಿದ್ದೇ ಆದರೆ ಆರೋಗ್ಯ ಪೂರ್ಣ ಸಮಾಜ ನಮ್ಮದಾಗುತ್ತದೆ. ಅದು ಡೆಮಿರ್ ಎಂಬ ಬಾಲಕನ ಸೇವೆಯಲ್ಲಿ ಕಾಣಬಹುದು. ಚಿಕ್ಕ ವಯಸ್ಸಿನಲ್ಲಿ  ಹಿರಿಯರು ನೀಡಿದ ಹಣ ಸಂಗ್ರಹಣೆ ಮಾಡಿ ಇನ್ನೊಬ್ಬರ ನೋವು ಅರ್ಥಮಾಡಿಕೊಂಡು ಸಹಾಯಕ್ಕೆ ಮುಂದಾಗಿದ್ದು ಶ್ಲಾಘನೀಯ ಕಾರ್ಯ.

ಸಂಕಷ್ಟದಲ್ಲಿ ಸಹಾಯ,ಸಹಕಾರಕ್ಕೆ ಮುಂದಾಗಬೇಕು ಎಂಬ ಉತ್ತಮವಾದ ಉದ್ದೇಶದಿಂದ ಭೂಕಂಪ ಸಂತ್ರಸ್ತರ ನೋವುಗಳನ್ನು ಅರ್ಥ ಮಾಡಿಕೊಂಡು 9 ವರ್ಷದ ಬಾಲಕ ಸೇವೆಗೆ ಮುಂದಾಗಿರುವುದು ಮಾದರಿ ಕಾರ್ಯ.

ಇತರರ ಕುರಿತು ಉತ್ತಮವಾದ ಅಭಿಪ್ರಾಯ ಹೊಂದಿ ಕಾಳಜಿಯ ಮನೋಭಾವ,ವಿನಯ,ನಮ್ರತೆಯನ್ನು ಅಳವಡಿಸಿಕೊಂಡು ಸಹಾಯ, ಸಹಕಾರಕ್ಕೆ ಮುಂದಾಗಿ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಉತ್ತಮ ಸಂದೇಶವನ್ನು ನೀಡಿದ ಬಾಲಕನ ಸೇವೆ ನಮ್ಮೆಲ್ಲರ ಬದುಕಿಗೆ ಸ್ಫೂರ್ತಿಯಾಗಬೇಕು.

share
ಎಚ್.ಎಚ್.ಬೇಪಾರಿ
ಎಚ್.ಎಚ್.ಬೇಪಾರಿ
Next Story
X