Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ | ಹೆದ್ದಾರಿ ದರೋಡೆ, ಕೊಲೆ...

ದಾವಣಗೆರೆ | ಹೆದ್ದಾರಿ ದರೋಡೆ, ಕೊಲೆ ಪ್ರಕರಣಕ್ಕೆ ತಿರುವು: ಚಾಲಕ ಸೇರಿ ನಾಲ್ವರು ಆರೋಪಿಗಳ ಬಂಧನ

15 Feb 2023 2:11 PM IST
share
ದಾವಣಗೆರೆ | ಹೆದ್ದಾರಿ ದರೋಡೆ, ಕೊಲೆ ಪ್ರಕರಣಕ್ಕೆ ತಿರುವು: ಚಾಲಕ ಸೇರಿ ನಾಲ್ವರು ಆರೋಪಿಗಳ ಬಂಧನ

ದಾವಣಗೆರೆ: ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದ್ದು, ಚಾಲಕ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ದರೋಡೆಕೊರರ ಮೇಲೆ ಲಾರಿ ಹತ್ತಿಸಿಕೊಂಡು ಹೋಗಿದ್ದ ಲಾರಿಯನ್ನು ಚೆನ್ನೈ ನಲ್ಲಿ ಪತ್ತೆ ಮಾಡಿದ್ದು, ಆರೋಪಿ ಉತ್ತರಪ್ರದೇಶದ ಚಾಲಕ ಭೋಲೆ ಯಾದವ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯ ಶ್ರೀರಾಮನಗರದ ಪರಶುರಾಮ್, ಶಿವುಕುಮಾರ್, ಸಂದೇಶ್ ಎಂಬವರು ಕಾಟಿಹಳ್ಳಿಯಲ್ಲಿ ಜಾತ್ರೆ ಮುಗಿಸಿಕೊಂಡು ಬೈಕ್‌ನಲ್ಲಿ ಬರುವಾಗ ಆನಗೋಡು ಬಳಿ ಲಾರಿ ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಆದರೆ, ಪರಶುರಾಮ, ನಾಗರಾಜ, ಸಂದೇಶ, ಗಣೇಶ, ರಾಹುಲ್ ಮತ್ತು ಶಿವುಕುಮಾರ್ ಎಂಬವರು ಕಳೆದ ಫೆ.೧೧ರಂದು ಬೆಳಗಿನ ಜಾವ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆನಗೋಡು ಗ್ರಾಮದ ಸಮೀಪದ ರಾಪ್ಟ್ರೀಯ ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಲಾರಿ ಚಾಲಕನನ್ನು ಹೆದರಿಸಿ ಹಲ್ಲೆ ಮಾಡಿದ್ದಾರೆ. ಬಳಿಕ  ಚಾಲಕನಿಂದ ೮ ಸಾವಿರ ನಗದು, ಮೊಬೈಲ್ ಹಾಗೂ ಇತರ ವಸ್ತು ದರೋಡೆ ಮಾಡಿ ಪರಾರಿ ಆಗುವ ಸಂದರ್ಭದಲ್ಲಿ ಲಾರಿ ಚಾಲಕ ದರೋಡೆ ಮಾಡಿ ಬೈಕ್‌ನಲ್ಲಿ ಹೋಗುತ್ತಿದ್ದ ಅವರ ಮೇಲೆ ಲಾರಿ ಹತ್ತಿಸಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್‌ನಲ್ಲಿದ್ದ ಪರಶುರಾಮ, ಶಿವುಕುಮಾರ್ ಮತ್ತು ಸಂದೇಶ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇನ್ನುಳಿದ ನಾಗರಾಜ, ಗಣೇಶ ಮತ್ತು ರಾಹುಲ್‌ಗೆ ಗಾಯಗಳಾಗಿದ್ದು, ಘಟನಾ ಸ್ಥಳದಿಂದ ತಪ್ಪಿಸಿಕೊಂಡು ಹೋಗಿದ್ದರು ಎಂದು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ತಪ್ಪಿಸಿಕೊಂಡು ಹೋಗಿದ್ದ ಮೂವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಐಬಿ ವಿಭಾಗದ ತಂಡ, ದರೋಡೆಕೊರರ ಮೇಲೆ ಲಾರಿ ಹತ್ತಿಸಿಕೊಂಡು ಹೋಗಿದ್ದ ಲಾರಿಯನ್ನು ಚೆನ್ನೈ ನಲ್ಲಿ ಪತ್ತೆ ಮಾಡಿದ್ದು, ಆರೋಪಿ ಉತ್ತರಪ್ರದೇಶದ ಭೋಲೆ ಯಾದವ್‌ನನ್ನು ಬಂಧಿಸಿದೆ. ಈಗ ಮೂವರು ದರೋಡೆಕೋರರು ಹಾಗೂ ಲಾರಿ ಚಾಲಕನನ್ನು ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೆಚ್ಚುವರಿ ಎಸ್ಪಿ ರಾಮಗೊಂಡ ಬಿ.ಬಸರಗಿ, ಎಎಸ್ಪಿ ಕನ್ನೀಕಾ ಸಿಕ್ರೀವಾಲಾ ಮಾರ್ಗದರ್ಶನದಲ್ಲಿ ಪಿಐ ಲಿಂಗನಗೌಡ ನೆಗಳೂರು, ಎಚ್.ಪಿ.ನಾರಪ್ಪ, ಜಗದೀಶ, ದೇವೇಂದ್ರನಾಯ್ಕ, ಅಣ್ಣಯ್ಯ, ಮಂಜುನಾಥ್, ಮಹಮ್ಮದ್ ಯೂಸಫ್ ಅತ್ತಾರ್, ನಾಗರಾಜಯ್ಯ ಮತ್ತು ಡಿಸಿಐಬಿ ವಿಭಾಗದ ಸಿಬ್ಬಂದಿ ಮಜೀದ್, ಆಂಜನೇಯ, ರಾಘವೇಂದ್ರ, ಮಾರುತಿ, ಅಶೋಕ, ಸುರೇಶ, ಮಲ್ಲಿಕಾರ್ಜುನ, ರಮೇಶನಾಯ್ಕ, ನಟರಾಜ, ಚಾಲಕ ನೂರುಲ್ಲಾ ಶರೀಫ್ ಹಾಗೂ ಎಸ್ಪಿ ಕಚೇರಿಯ ರಾಘವೇಂದ್ರ, ಶಾಂತರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಎಸ್ಪಿ ಸಿ.ಬಿ.ರಿಷ್ಯಂತ್, ಹೆಚ್ಚುವರಿ ಎಸ್ಪಿ  ರಾಮಗೊಂಡ ಬಿ.ಬಸರಗಿ ಅಭಿನಂದನೆ ಸಲ್ಲಿಸಿದ್ದಾರೆ.

share
Next Story
X