Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಮದು ಬೆಲೆ ಏರಿಕೆಯಿಂದ ವಿದೇಶಿ ಅಡಿಕೆಗೆ...

ಆಮದು ಬೆಲೆ ಏರಿಕೆಯಿಂದ ವಿದೇಶಿ ಅಡಿಕೆಗೆ ಹೊಡೆತ: ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ

ದೇಶಿಯ ಅಡಿಕೆಗೆ ಭಾರೀ ಬೇಡಿಕೆ ನಿರೀಕ್ಷೆ

15 Feb 2023 3:44 PM IST
share
ಆಮದು ಬೆಲೆ ಏರಿಕೆಯಿಂದ ವಿದೇಶಿ ಅಡಿಕೆಗೆ ಹೊಡೆತ: ಕ್ಯಾಂಪ್ಕೊ ಅಧ್ಯಕ್ಷ  ಕಿಶೋರ್ ಕುಮಾರ್ ಕೊಡ್ಗಿ
ದೇಶಿಯ ಅಡಿಕೆಗೆ ಭಾರೀ ಬೇಡಿಕೆ ನಿರೀಕ್ಷೆ

ಮಂಗಳೂರು, ಫೆ.15: ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ ಆಮದಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ.

ಕ್ಯಾಂಪ್ಕೊ ಸಂಸ್ಥೆಯ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಅಡಿಕೆ ಆಮದಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಕೆಲವು ತಿಂಗಳುಗಳಿಂದ ಮಾರುಕಟ್ಟೆಯಲ್ಲಿ ಧಾರಣೆ ಏರಿಳಿತದ ಮೂಲಕ ಅಡಿಕೆಯ ದರ ಅನಿಶ್ಚಿತತೆಯಿಂದ ಕೂಡಿತ್ತು. ಇದರಿಂದ ರೈತರಲ್ಲಿ ಹತಾಶೆಯ ಭಾವನೆಯನ್ನು ಮೂಡಿಸಿತ್ತು ಎಂದರು.

ಕೇಂದ್ರ ಸರಕಾರದ ಕ್ರಮದಿಂದಾಗಿ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಯ ಆಮದಿನ ಮೇಲೆ ಭಾರಿ ಹೊಡೆತ ಬೀಳಲಿದ್ದು, ಉತ್ತಮ ಗುಣಮಟ್ಟದ ದೇಶೀ ಅಡಿಕೆಗೆ ಬೇಡಿಕೆ ಬರಲಿದೆ ಮತ್ತು ದರದಲ್ಲಿ ಸ್ಥಿರತೆ ಕಾಣಲಿದ್ದು, ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರರ ನೇತೃತ್ವದಲ್ಲಿ ಕ್ಯಾಂಪ್ಕೊ, ಮ್ಯಾಮ್ಕಾಸ್, ಟಿಎಸ್ಎಸ್, ತುಮ್ಕೋಸ್ , ಅಡಿಕೆ ಮಾರಾಟ ಮಹಾಮಂಡಳಿ ಮತ್ತು ಸಹಕಾರಿ ರಂಗದ ಹಿರಿಯರಾದ ಮಂಜಪ್ಪ ಹೊಸಬಾಳೆ ಹಾಗೂ ಸಹಕಾರ ಭಾರತೀಯ ರಾಷ್ಟ್ರೀಯ ನಾಯಕ ರಮೇಶ್ ವೈದ್ಯ ಇವರನ್ನೊಳಗೊಂಡ ನಿಯೋಗವು ದಿಲ್ಲಿಗೆ ತೆರಳಿ ಅಡಿಕೆ ಆಮದು ಕನಿಷ್ಠ ಬೆಲೆಯನ್ನು ಹೆಚ್ಚಿಸುವಂತೆ ಕೃಷಿ ಮತ್ತು ವಾಣಿಜ್ಯ ಸಚಿವರಲ್ಲಿ ಮನವಿಯನ್ನು ಮಾಡಿತ್ತು. ನಂತರದ ದಿನಗಳಲ್ಲಿ ಕ್ಯಾಂಪ್ಕೊದ ನಿರಂತರ ಸಂಪರ್ಕ ಮತ್ತು ಒತ್ತಡದ ಪರಿಣಾಮ ಕೇಂದ್ರ ಸರಕಾರ ಸ್ಪಂದಿಸಿ ಆದೇಶ ಹೊರಡಿಸಿದೆ ಎಂದು ಹೇಳಿದರು.

ಅಡಿಕೆಯ ಆಮದು ಬೆಲೆಯನ್ನು ಹೆಚ್ಚಿಸಿ ಅಡಿಕೆ ಬೆಳೆಗಾರನಿಗೆ ಬೆಂಬಲ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮತ್ತು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭ ಕರಂದ್ಲಾಜೆ ಮತ್ತು ರಾಜ್ಯ ಗೃಹ ಸಚಿವರಾದ ಮಾನ್ಯ ಆರಗ ಜ್ಞಾನೇಂದ್ರ ಅವರಿಗೆ ಅಡಿಕೆ ಬೆಳೆಗಾರರ ಹಿತ ರಕ್ಷಕ ಕ್ಯಾಂಪ್ಕೊ ಸಂಸ್ಥೆಯ ಆಡಳಿತ ಮಂಡಳಿ ಕೇಂದ್ರ ಸರಕಾರದ ಕ್ರಮಕ್ಕೆ ಕೃತಜ್ಞತೆ ಸಲ್ಲಿಸಿದೆ ಎಂದು ನುಡಿದರು.

ಅಡಿಕೆಯ ಕನಿಷ್ಠ ಆಮದು ಬೆಲೆಯ ಹೆಚ್ಚಳದಿಂದ ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದ್ದು, ರೈತರು ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಅಗತ್ಯಕ್ಕೆ ತಕ್ಕಂತೆ ಮಾರಾಟ ಮಾಡಿ ಅಡಿಕೆ ಧಾರಣೆಯ ಸ್ಥಿರತೆಗೆ ಸಹಕಾರ ನೀಡುವಂತೆ ಕ್ಯಾಂಪ್ಕೊ ಆಡಳಿತ ಮಂಡಳಿ ಮನವಿ ಮಾಡುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕ್ಯಾಂಪ್ಕೊ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ, ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣ ಕುಮಾರ್, ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲ, ರಾಘವೇಂದ್ರ ಭಟ್ ಕೆದಿಲ, ಜಯಪ್ರಕಾಶ್ ಟಿ.ಕೆ, ಜನರಲ್ ಮ್ಯಾನೇಜರ್ ರೇಷ್ಮಾ ಮಲ್ಯ, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಗೋವಿಂದ ಭಟ್ ಉಪಸ್ಥಿತರಿದ್ದರು.

share
Next Story
X