Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಹಿಳಾ ಟ್ವೆಂಟಿ-20 ವಿಶ್ವಕಪ್:...

ಮಹಿಳಾ ಟ್ವೆಂಟಿ-20 ವಿಶ್ವಕಪ್: ವೆಸ್ಟ್‌ಇಂಡೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್ ಜಯ

ದೀಪ್ತಿ ಶರ್ಮಾ ಸ್ಪಿನ್ ಮೋಡಿ, ಮತ್ತೆ ಮಿಂಚಿದ ರಿಚಾ ಘೋಷ್

15 Feb 2023 10:13 PM IST
share
ಮಹಿಳಾ ಟ್ವೆಂಟಿ-20 ವಿಶ್ವಕಪ್: ವೆಸ್ಟ್‌ಇಂಡೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್ ಜಯ
ದೀಪ್ತಿ ಶರ್ಮಾ ಸ್ಪಿನ್ ಮೋಡಿ, ಮತ್ತೆ ಮಿಂಚಿದ ರಿಚಾ ಘೋಷ್

 ಕೇಪ್‌ಟೌನ್, ಫೆ.15: ದೀಪ್ತಿ ಶರ್ಮಾ ಅವರ ಅತ್ಯುತ್ತಮ ಬೌಲಿಂಗ್(3-15), ವಿಕೆಟ್‌ಕೀಪರ್-ಬ್ಯಾಟರ್ ರಿಚಾ ಘೋಷ್(ಔಟಾಗದೆ 44 ರನ್, 32 ಎಸೆತ, 5 ಬೌಂಡರಿ)ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್(33 ರನ್, 42 ಎಸೆತ, 3 ಬೌಂಡರಿ)ಸಾಂದರ್ಭಿಕ ಬ್ಯಾಟಿಂಗ್ ಬಲದಿಂದ ಭಾರತ ಕ್ರಿಕೆಟ್ ತಂಡ ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್‌ಇಂಡೀಸ್ ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಈ ಮೂಲಕ 11 ಎಸೆತಗಳು ಬಾಕಿ ಇರುವಾಗಲೇ ಟೂರ್ನಮೆಂಟ್‌ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

 ನ್ಯೂಲ್ಯಾಂಡ್ಸ್ ಸ್ಟೇಡಿಯಮ್‌ನಲ್ಲಿ ಬುಧವಾರ ನಡೆದ ‘ಬಿ’ ಗುಂಪಿನ ಪಂದ್ಯದಲ್ಲಿ ಟಾಸ್ ಜಯಿಸಿದ ವಿಂಡೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಬಲಗೈ ಸ್ಪಿನ್ನರ್ ದೀಪ್ತಿ ಶರ್ಮಾ ದಾಳಿಗೆ ತತ್ತರಿಸಿದ ವಿಂಡೀಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಲಷ್ಟೇ ಶಕ್ತವಾಯಿತು. ವಿಂಡೀಸ್ ಪರ ಆರಂಭಿಕ ಆಟಗಾರ್ತಿ ಸ್ಟೆಫಾನಿ ಟೇಲರ್ (42 ರನ್)ಸರ್ವಾಧಿಕ ಸ್ಕೋರ್ ಗಳಿಸಿದರು. ಕ್ಯಾಂಪ್‌ಬೆಲ್(30 ರನ್) ಹಾಗೂ ಚೆಡಿಯನ್ ನೇಶನ್(ಔಟಾಗದೆ 21)ಎರಡಂಕೆಯ ಸ್ಕೋರ್ ಗಳಿಸಿದರು.

ಭಾರತದ ಬೌಲಿಂಗ್‌ನಲ್ಲಿ ಪೂಜಾ ವಸ್ತ್ರಕರ್(1-21) ಹಾಗೂ ರೇಣುಕಾ ಸಿಂಗ್(1-22) ತಲಾ ಒಂದು ವಿಕೆಟ್‌ಗಳನ್ನು ಪಡೆದರು.

ಗೆಲ್ಲಲು ಸುಲಭ ಸವಾಲು ಪಡೆದ ಭಾರತಕ್ಕೆ ಶೆಫಾಲಿ ವರ್ಮಾ(28 ರನ್, 23 ಎಸೆತ) ಹಾಗೂ ಸ್ಮತಿ ಮಂಧಾನ(10 ರನ್, 7 ಎಸೆತ)ಮೊದಲ ವಿಕೆಟಿಗೆ 32 ರನ್ ಸೇರಿಸಿ ಬಿರುಸಿನ ಆರಂಭ ನೀಡಿದ್ದರು. ಆದರೆ ಭಾರತವು 43 ರನ್ ಗಳಿಸುವಷ್ಟರಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಸ್ಮತಿ ಮಂಧಾನ ಹಾಗೂ ಜೆಮಿಮಾ ರೋಡ್ರಿಗಸ್(1)ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

ಆಗ ಜೊತೆಯಾದ ಕೌರ್ ಹಾಗೂ ರಿಚಾ ಘೋಷ್ 4ನೇ ವಿಕೆಟಿಗೆ 72 ರನ್ ಜೊತೆಯಾಟ ನಡೆಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಪಾಕ್ ವಿರುದ್ಧ ಪಂದ್ಯದಲ್ಲಿ ತಂಡವನ್ನು ಆಧರಿಸಿದ್ದ ರಿಚಾ ಘೋಷ್ ಮತ್ತೊಮ್ಮೆ ಗಮನಾರ್ಹ ಪ್ರದರ್ಶನ ನೀಡಿದರು.

ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ದೀಪ್ತಿ ಶರ್ಮಾ ಪಂದ್ಯಶ್ರೇಷ್ಠ ಗೌರವ ಪಡೆದರು.
 

share
Next Story
X