Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ:...

ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

16 Feb 2023 10:26 AM IST
share
ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ಗುವಾಹತಿ: ಬಾಲ್ಯವಿವಾಹ ವಿರುದ್ಧದ ಕಾರ್ಯಾಚರಣೆ ನೆಪದಲ್ಲಿ ಸಾವಿರಾರು ಮಂದಿಯನ್ನು ಬಂಧಿಸಿರುವ ಅಸ್ಸಾಂ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಗುವಾಹತಿ ಹೈಕೋರ್ಟ್, "ಈ ಬಂಧನ ಕಾರ್ಯಾಚರಣೆ ಜನರ ಖಾಸಗಿ ಬದುಕಿನ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ" ಎಂದು ಹೇಳಿದೆ. ಈ ಸಂಬಂಧ ಒಂಬತ್ತು ಮಂದಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್, "ಇವು ಕಸ್ಟಡಿಯಲ್ಲಿ ವಿಚಾರಣೆ ನಡೆಸುವ ಪ್ರಕರಣಗಳಲ್ಲ" ಎಂದು ಸ್ಪಷ್ಟಪಡಿಸಿದೆ.

ಬಾಲ್ಯವಿವಾಹ ಸಂಬಂಧ ಪೋಕ್ಸೋ ಕಾಯ್ದೆಯಡಿ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸುವುದು ನಿಸ್ಸಂದೇಹವಾಗಿ ವಿಲಕ್ಷಣ ಕ್ರಮ" ಎಂದು ನ್ಯಾಯಮೂರ್ತಿ ಸುಮನ್ ಶ್ಯಾಮ್ ಮೌಖಿಕವಾಗಿ ಅಭಿಪ್ರಾಯಪಟ್ಟರು. "ಆರೋಪಿಗಳಲ್ಲಿ ಮಕ್ಕಳಿದ್ದಾರೆ; ಕುಟುಂಬದ ಸದಸ್ಯರಿದ್ದಾರೆ... ವೃದ್ಧರಿದ್ದಾರೆ... ಖಂಡಿತವಾಗಿಯೂ ಇದು ಕೆಟ್ಟ ಯೋಚನೆ" ಎಂದು ಅವರು ಸ್ಪಷ್ಟಪಡಿಸಿದರು.

"ನಾವು ಕಾನೂನಿನ ಪ್ರಕಾರ ಮುಂದುವರಿಯುತ್ತೇವೆ. ನಾವು ಹೇಳುವುದು ಏನೂ ಇಲ್ಲ. ತಪ್ಪಿತಸ್ಥರೆಂದು ನಿಮಗೆ ಕಂಡುಬಂದಲ್ಲಿ ಆರೋಪಪಟ್ಟಿ ಸಲ್ಲಿಸಿ. ಅತ ಅಥವಾ ಆಕೆ ವಿಚಾರಣೆ ಎದುರಿಸಲಿ. ಅವರು ಅಪರಾಧಿಗಳಾದಲ್ಲಿ ಶಿಕ್ಷೆ ಅನುಭವಿಸಲಿ" ಎಂದು ನ್ಯಾಯಮೂರ್ತಿ ನುಡಿದರು.

ನ್ಯಾಯಾಲಯದ ಮೊರೆ ಹೋದ ಒಂಬತ್ತು ಮಂದಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಅವರ, "ಕಾನೂನು ಉಲ್ಲಂಘಿಸಿ ವಿವಾಹ ನೆರವೇರಿಸಿದರೆ ಕಾನೂನು ತನ್ನದೇ ಕ್ರಮ ಕೈಗೊಳ್ಳುತ್ತದೆ..ನಾವು ಪರಿಗಣಿಸುವುದು ಕೇವಲ ತಕ್ಷಣಕ್ಕೆ ಕಸ್ಟಡಿಯಲ್ಲಿ ವಿಚಾರಣೆ ಅಗತ್ಯವೇ ಅಥವಾ ಇಲ್ಲವೇ ಎನ್ನುವ ಅಂಶವನ್ನು ಮಾತ್ರ. ಸದ್ಯಕ್ಕೆ ಇದು ಕಸ್ಟಡಿ ವಿಚಾರಣೆಯ ಪ್ರಕರಣವಲ್ಲ ಎನ್ನುವುದು ನ್ಯಾಯಾಲಯದ ಭಾವನೆ. ಅವರು ವಿಚಾರಣೆಗೆ ಹಾಜರಾಗುವಂತೆ ಹಾಗೂ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ಸೂಚಿಸುತ್ತೇವೆ. ಇವು ಎನ್‌ಡಿಪಿಎಸ್, ಸ್ಮಗ್ಲಿಂಗ್, ಅಸ್ತಿ ಕಳ್ಳತನದ ಪ್ರಕರಣಗಳಲ್ಲ" ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

share
Next Story
X