Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣೆ, ಪ್ರಜಾಪ್ರಭುತ್ವವನ್ನು ತಿರುಚುವ...

ಚುನಾವಣೆ, ಪ್ರಜಾಪ್ರಭುತ್ವವನ್ನು ತಿರುಚುವ ಇಸ್ರೇಲಿ ಕಂಪೆನಿ ಭಾರತದಲ್ಲಿ ಕಾರ್ಯಾಚರಣೆ: ವರದಿ

16 Feb 2023 3:02 PM IST
share
ಚುನಾವಣೆ, ಪ್ರಜಾಪ್ರಭುತ್ವವನ್ನು ತಿರುಚುವ ಇಸ್ರೇಲಿ ಕಂಪೆನಿ ಭಾರತದಲ್ಲಿ ಕಾರ್ಯಾಚರಣೆ: ವರದಿ

ಹೊಸದಿಲ್ಲಿ: ಹೊಸ ರಹಸ್ಯ ತನಿಖೆಯೊಂದು "ಟೀಮ್ ಜಾರ್ಜ್" ಎಂಬ ಕೋಡ್-ಹೆಸರಿನ ಇಸ್ರೇಲಿ ಗುತ್ತಿಗೆದಾರರ ತಂಡವನ್ನು ಬಹಿರಂಗಪಡಿಸಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಹ್ಯಾಕಿಂಗ್, ವಿಧ್ವಂಸಕ ಮತ್ತು ಸ್ವಯಂಚಾಲಿತ ತಪ್ಪು ಮಾಹಿತಿಯನ್ನು ಬಳಸಿಕೊಂಡು ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚು ಚುನಾವಣೆಗಳನ್ನು ನಿರ್ವಹಿಸಿದ್ದಾರೆ ಎಂದು ಹೇಳಿಕೊಂಡಿರುವುದು ಬಹಿರಂಗವಾಗಿದೆ ಎಂದು newindianexpress.com ವರದಿ ಮಾಡಿದೆ.

"ಟೀಮ್ ಜಾರ್ಜ್" ಅನ್ನು ಮಾಜಿ ಇಸ್ರೇಲಿ ವಿಶೇಷ ಪಡೆಗಳ ಆಪರೇಟಿವ್ 50 ವರ್ಷದ ತಾಲ್ ಹನಾನ್ ನೇತೃತ್ವ ವಹಿಸಿದ್ದಾರೆ.

ನಿರೀಕ್ಷಿತ ಕ್ಲೈಂಟ್‌ಗಳೆಂದು ಬಿಂಬಿಸುತ್ತಿರುವ "ಟೀಮ್ ಜಾರ್ಜ್" ಅನ್ನು ಸಂಪರ್ಕಿಸಿದ ಮೂವರು ವರದಿಗಾರರು ಚಿತ್ರೀಕರಿಸಿದ ರಹಸ್ಯ ದೃಶ್ಯಾವಳಿಗಳು - ಮತ್ತು ದಾಖಲೆಗಳು ದಿ ಗಾರ್ಡಿಯನ್‌ಗೆ ಸೋರಿಕೆಯಾಗಿವೆ.

ಲೆ ಮಾಂಡೆ, ಡೆರ್ ಸ್ಪೀಗೆಲ್ ಮತ್ತು ಎಲ್ ಪೈಸ್ ಸೇರಿದಂತೆ 30 ಔಟ್‌ಲೆಟ್‌ಗಳ ವರದಿಗಾರರು ಟೀಮ್‌ ಜಾರ್ಜ್‌ ಅನ್ನು ತನಿಖೆ ಮಾಡಿದ್ದಾರೆ. ದಿ ಗಾರ್ಡಿಯನ್ ಪ್ರಕಾರ, ತಾಲ್ ಹನಾನ್ ಈಗ "ಜಾರ್ಜ್" ಎಂಬ ಗುಪ್ತನಾಮವನ್ನು ಬಳಸಿಕೊಂಡು ಖಾಸಗಿಯಾಗಿ ಕೆಲಸ ಮಾಡುತ್ತಿದ್ದು, ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ವಿವಿಧ ದೇಶಗಳಲ್ಲಿ ಚುನಾವಣೆಗಳಲ್ಲಿ ಕೆಲಸ ಮಾಡುತ್ತಿದ್ದಾನೆ ಎನ್ನಲಾಗಿದೆ.

ದಿ ಗಾರ್ಡಿಯನ್ ಮತ್ತು ಅದರ ಜೊತೆಗಾರ ವರದಿಗಾರರು ಇಂಟರ್ನೆಟ್‌ನಾದ್ಯಂತ ಏಮ್ಸ್-ಸಂಯೋಜಿತ ಬೋಟ್ ಚಟುವಟಿಕೆಯನ್ನು ಟ್ರ್ಯಾಕ್ ಮಾಡಿದ್ದಾರೆ. ಇದು ಯುಕೆ, ಯುಎಸ್, ಕೆನಡಾ, ಜರ್ಮನಿ, ಸ್ವಿಟ್ಜರ್ಲೆಂಡ್, ಮೆಕ್ಸಿಕೊ, ಸೆನೆಗಲ್, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಸೇರಿದಂತೆ ಸುಮಾರು 20 ದೇಶಗಳಲ್ಲಿ ಹೆಚ್ಚಾಗಿ ಹಣಕಾಸಿನ ವಿವಾದಗಳನ್ನು ಒಳಗೊಂಡಿರುವ ನಕಲಿ ಸಾಮಾಜಿಕ ಮಾಧ್ಯಮ ಪ್ರಚಾರಗಳ ಹಿಂದೆ ಇದೆ ಎಂದು ವರದಿ ಹೇಳಿದೆ.

Haaretz.com ಪ್ರಕಟಿಸಿದ್ದ ವರದಿಯೊಂದರಲ್ಲಿ ತಾಲ್‌ ಹನಾನ್‌ ನನ್ನು "ಭಯಾನಕ ಮಾರಾಟಗಾರ" ಮತ್ತು "ಕೀನ್ಯಾದ ಚುನಾವಣೆಯನ್ನು ಕದಿಯಲು ಪ್ರಯತ್ನಿಸಿದ ಇಸ್ರೇಲಿ ಹ್ಯಾಕರ್‌ಗಳು" ಎಂದು ಬಣ್ಣಿಸಿತ್ತು.

share
Next Story
X