ವಿಧಾನಸಭೆ ಚುನಾವಣೆ | 5 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಜನಾರ್ದನ ರೆಡ್ಡಿ
ಕೊಪ್ಪಳ: ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಮಾಜಿ ಸಚಿವ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಿಸಿರುವ ಜನಾರ್ದನ ರೆಡ್ಡಿ, ಇಂದು ಗಂಗಾವತಿಯಲ್ಲಿ ಸಿರಗುಪ್ಪ, ಕನಕಗಿರಿ, ನಾಗಠಾಣ, ಸಿಂಧನೂರು, ಹಿರಿಯೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು.
ಅಭ್ಯರ್ಥಿಗಳ ಹೆಸರು: ಸಿರಗುಪ್ಪ- ಧರೆಪ್ಪ ನಾಯಕ, ಕನಕಗಿರಿ- ಡಾ. ಚಾರುಲ್ ದಾಸರಿ, ನಾಗಠಾಣಾ- ಶ್ರೀಕಾಂತ್, ಸಿಂಧನೂರು- ನೆಕ್ಕಂಟಿ ಮಲ್ಲಿಕಾರ್ಜುನ್, ಚಿತ್ರದುರ್ಗ- ಮಹೇಶ್
Next Story