Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಮಗೆ ನಮ್ಮ ಸಂಬಳ ನೀಡಿ, ಕಾಶ್ಮೀರಕ್ಕೆ...

ನಮಗೆ ನಮ್ಮ ಸಂಬಳ ನೀಡಿ, ಕಾಶ್ಮೀರಕ್ಕೆ ಮರಳಲು ಒತ್ತಾಯಿಸಬೇಡಿ: ಸರಕಾರಕ್ಕೆ ಪಂಡಿತ ನೌಕರರ ಆಗ್ರಹ

16 Feb 2023 8:57 PM IST
share
ನಮಗೆ ನಮ್ಮ ಸಂಬಳ ನೀಡಿ, ಕಾಶ್ಮೀರಕ್ಕೆ ಮರಳಲು ಒತ್ತಾಯಿಸಬೇಡಿ: ಸರಕಾರಕ್ಕೆ ಪಂಡಿತ ನೌಕರರ ಆಗ್ರಹ

ಶ್ರೀನಗರ, ಫೆ. 16: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಮ್ಮ ಬಾಕಿ ವೇತನ ಬಿಡುಗಡೆ ಮಾಡುವಂತೆ ಮುಷ್ಕರ ನಿರತ ಪಿಎಂ ಪ್ಯಾಕೇಜ್ ಪಂಡಿತ ನೌಕರರು ಸರಕಾರವನ್ನು ಆಗ್ರಹಿಸಿದ್ದಾರೆ. ಭದ್ರತೆ ಕುರಿತು ಆತಂಕ ಇರುವುದರಿಂದ ಕಾಶ್ಮೀರಕ್ಕೆ ಮರಳಲು ಒತ್ತಾಯಿಸಬೇಡಿ ಎಂದು ಅವರು ಮನವಿ ಮಾಡಿದ್ದಾರೆ. ನಮ್ಮ ಸಂಬಳವನ್ನು ಕಳೆದ ಕೆಲವು ತಿಂಗಳುಗಳಿಂದ ತಡೆ ಹಿಡಿಯಲಾಗಿದೆ.

ಮಹಾಶಿವರಾತ್ರಿಯಂದು ನಮ್ಮ ಬಾಕಿ ಇರುವ ಸಂಬಳವನ್ನು ಸರಕಾರ ಬಿಡುಗಡೆ ಮಾಡಬೇಕು ಎಂದು ಕಾಶ್ಮೀರದ ನೌಕರರ ಸಂಘದ ಅಧ್ಯಕ್ಷ ರುಬೋನ್ ಸಪ್ರು ಹೇಳಿದ್ದಾರೆ. ಕಣಿವೆಯಲ್ಲಿ ತಮ್ಮ ಕೆಲಸವನ್ನು ಪುನರಾರಂಭಿಸಿದ ಪಿಎಂ ಪ್ಯಾಕೇಜ್ ಪಂಡಿತ ನೌಕರರ ವೇತನವನ್ನು ಬಿಡುಗಡೆ ಮಾಡುವಂತೆ ಜಿಲ್ಲಾಡಳಿತ ಇತ್ತೀಚೆಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಬಾಕಿ ಇರುವ ವೇತನ ಬಿಡುಗಡೆಗೆ ಸರಕಾರ ಯಾವುದೇ ಷರತ್ತುಗಳನ್ನು ವಿಧಿಸಬಾರದು ಎಂದು ಸಪ್ರು ಹೇಳಿದ್ದಾರೆ.

‘‘ಪಿಎಂ ಪ್ಯಾಕೇಜ್ ನ ಎಲ್ಲ ನೌಕರರು ತಮ್ಮ ಸಂಬಳ ಪಡೆಯುವುದನ್ನು ಆಡಳಿತ ಖಚಿತಪಡಿಸಿಕೊಳ್ಳಬೇಕು. ಇದರಿಂದ ಅವರು ತಮ್ಮ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಂಪ್ರದಾಯದ ಪ್ರಕಾರ ಮಹಾಶಿವರಾತ್ರಿ ಆಚರಿಸಬಹುದು’’ ಎಂದು ಅವರು ಹೇಳಿದ್ದಾರೆ. ಕೇಂದ್ರ ಕಾಶ್ಮೀರದಲ್ಲಿರುವ ತನ್ನ ಕಚೇರಿಯಲ್ಲಿ ಪಂಡಿತ ನೌಕರ ರಾಹುಲ್ ಭಟ್ ಭಯೋತ್ಪಾದಕರಿಂದ ಹತ್ಯೆಯಾದ ಬಳಿಕ 5,000ಕ್ಕೂ ಅಧಿಕ ಪಿಎಂ ಪ್ಯಾಕೇಜ್ ಪಂಡಿತ ನೌಕರರು ಕಳೆದ ವರ್ಷ ಮೇ 12ರಿಂದ ಮುಷ್ಕರ ನಡೆಸುತ್ತಿದ್ದಾರೆ.

ಪಿಎಂ ಪ್ಯಾಕೇಜ್ ನೌಕರರಲ್ಲಿ ಹೆಚ್ಚಿನವರು ಹತ್ಯೆಯ ಬಳಿಕ ಕಣಿವೆ ತೊರೆದಿದ್ದಾರೆ ಹಾಗೂ ಜಮ್ಮುವಿನಲ್ಲಿ ಪ್ರತಿದಿನ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಕೆಲವರು ತಮ್ಮ ಕರ್ತವ್ಯವನ್ನು ಪುನರಾರಂಭಿಸಲು ಕಣಿವೆಗೆ ಮರಳಿದ್ದಾರೆ. ಪಂಡಿತ ನೌಕರರು ಜಮ್ಮುವಿನ ಪ್ರೆಸ್ ಕ್ಲಬ್ ಮುಂದೆ ಪ್ರತಿಭಟನೆ ನಡೆಸಲು ಯೋಜಿಸಿದ್ದರು. ಆದರೆ, ಪ್ರತಿಭಟನೆಯನ್ನು ನಿಗ್ರಹಿಸಲು ಆಡಳಿತ ಸುತ್ತಮುತ್ತ ಪ್ರದೇಶದಲ್ಲಿ 144 ಸೆಕ್ಷನ್ ಅನ್ನು ಜಾರಿಗೊಳಿಸಿತ್ತು. ಅನಂತರ ಪಂಡಿತ ನೌಕರರು ಜಮ್ಮುವಿನಲ್ಲಿರುವ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

share
Next Story
X