Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಸಂಘರ್ಷ ಅಂತ್ಯಕ್ಕೆ ಒತ್ತು:...

ಉಕ್ರೇನ್ ಸಂಘರ್ಷ ಅಂತ್ಯಕ್ಕೆ ಒತ್ತು: ವಿಶ್ವಸಂಸ್ಥೆಯಲ್ಲಿ ಮುಂದಿನ ವಾರ ನಿರ್ಣಯ ಮಂಡನೆ

16 Feb 2023 10:52 PM IST
share
ಉಕ್ರೇನ್ ಸಂಘರ್ಷ ಅಂತ್ಯಕ್ಕೆ ಒತ್ತು: ವಿಶ್ವಸಂಸ್ಥೆಯಲ್ಲಿ ಮುಂದಿನ ವಾರ ನಿರ್ಣಯ ಮಂಡನೆ

ವಿಶ್ವಸಂಸ್ಥೆ, ಫೆ.16: ರಶ್ಯವು ಉಕ್ರೇನ್ ವಿರುದ್ಧದ ಆಕ್ರಮಣ ಆರಂಭಿಸಿ ಒಂದು ವರ್ಷವಾಗಿರುವ ಸಂದರ್ಭದಲ್ಲಿ ಮುಂದಿನ ವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವಿಶೇಷ ಅಧಿವೇಶನದಲ್ಲಿ ಉಕ್ರೇನ್ ಬಿಕ್ಕಟ್ಟಿಗೆ  `ಸಾಧ್ಯವಾದಷ್ಟು ಬೇಗ ಸಮಗ್ರ, ನ್ಯಾಯಯುತ ಮತ್ತು ಶಾಶ್ವತ ಶಾಂತಿಯನ್ನು ತಲುಪುವ ' ಅಗತ್ಯವನ್ನು ಒತ್ತಿಹೇಳುವ ಕರಡು ನಿರ್ಣಯವನ್ನು ಮಂಡಿಸಲಾಗುವುದು ಎಂದು ಮೂಲಗಳು ಹೇಳಿವೆ. 

2022ರ  ಫೆ.24ರಂದು ರಶ್ಯವು ಉಕ್ರೇನ್ ಮೇಲೆ ಆಕ್ರಮಣ ಆರಂಭಿಸಿದೆ. ಈ ಸಂಘರ್ಷವು ಉಭಯ ದೇಶಗಳ ಮೇಲಷ್ಟೇ ಅಲ್ಲ, ಅಂತರಾಷ್ಟ್ರೀಯ ಸಮುದಾಯದ ಮೇಲೂ ವ್ಯಾಪಕ ಪರಿಣಾಮಕ್ಕೆ ಕಾರಣವಾಗಿದೆ. ಮುಂದಿನ ವಾರ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ವಿಶೇಷ ಅಧಿವೇಶನದಲ್ಲಿ ಮೊದಲ 2 ದಿನ  ಹಲವು ದೇಶಗಳ ಪ್ರತಿನಿಧಿಗಳು ಕರಡು ನಿರ್ಣಯದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಬಳಿಕ ಮುಂದಿನ ಗುರುವಾರ ಕರಡು ನಿರ್ಣಯವನ್ನು ಮತಕ್ಕೆ ಹಾಕಲಾಗುವುದು. ವಿಶ್ವಸಂಸ್ಥೆ ಸಾಮಾನ್ಯ ಸಭೆಯ 193 ಸದಸ್ಯರು ನಿರ್ಣಯದ ಬಗ್ಗೆ ತಮ್ಮ ಮತ ಚಲಾಯಿಸಲಿದ್ದಾರೆ. ರಶ್ಯ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಮತ್ತು ತಕ್ಷಣ ಯುದ್ಧವನ್ನು ಅಂತ್ಯಗೊಳಿಸಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ಈ ಅಧಿವೇಶನದಲ್ಲಿ ನಿರ್ಣಯದ ಪರ 75%ದಷ್ಟು ಸದಸ್ಯರು ಮತ ಚಲಾಯಿಸಿದರೆ  ರಶ್ಯವನ್ನು ರಾಜತಾಂತ್ರಿಕವಾಗಿ ಒಬ್ಬಂಟಿಯಾಗಿಸಬಹುದು ಎಂದು ಉಕ್ರೇನ್ ಮತ್ತು ಅದರ ಮಿತ್ರಪಕ್ಷಗಳ ಆಶಯವಾಗಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯದ ಪರ ಅಭೂತಪೂರ್ವ ಬೆಂಬಲವನ್ನು ನಾವು ನಿರೀಕ್ಷಿಸುತ್ತಿದ್ದೇವೆ.

ಯಾಕೆಂದರೆ ಇಲ್ಲಿ ಅಪಾಯದಲ್ಲಿರುವುದು ಕೇವಲ ಉಕ್ರೇನ್ನ ಭವಿಷ್ಯವಲ್ಲ, ಪ್ರತೀ ದೇಶದ ಸ್ವಾತಂತ್ರ್ಯ, ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಗೌರವದ ಪ್ರಶ್ನೆಯಾಗಿದೆ ಎಂದು ಕರಡು ನಿರ್ಣಯ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುರೋಪಿಯನ್ ಯೂನಿಯನ್ನ ರಾಯಭಾರಿ ಒಲೋಫ್ ಸ್ಕೂಗ್ ಹೇಳಿದ್ದಾರೆ. ಕರಡು ನಿರ್ಣಯದ ಪ್ರತಿಯನ್ನು ಬುಧವಾರ ಸದಸ್ಯ ದೇಶಗಳಿಗೆ ರವಾನಿಸಲಾಗಿದೆ. 

ಉಕ್ರೇನ್ ಬಿಕ್ಕಟ್ಟಿನ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕೈಗೊಳ್ಳುವ ಯಾವುದೇ ನಿರ್ಣಯವನ್ನು ರಶ್ಯವು ತನ್ನ ವೀಟೊ ಅಧಿಕಾರ ಬಳಸಿ ತಡೆಯುತ್ತಿರುವುದರಿಂದ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನ ಹೆಚ್ಚಿನ ಮಹತ್ವ ಪಡೆದಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯ ಕಾನೂನುಬದ್ಧವಾಗಿರುವುದಿಲ್ಲ, ಆದರೆ ರಾಜಕೀಯ ಮಹತ್ವವನ್ನು ಪಡೆದಿರುತ್ತದೆ.

ಕಳೆದ ವರ್ಷದ ಮಾರ್ಚ್ 2ರಂದು ನಡೆದಿದ್ದ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ರಶ್ಯದ ಆಕ್ರಮಣವನ್ನು ಖಂಡಿಸುವ ನಿರ್ಣಯದ ಪರ 141 ದೇಶಗಳು ಮತ ಚಲಾಯಿಸುವ ಮೂಲಕ ಉಕ್ರೇನ್ ಗೆ ನೈತಿಕ ಗೆಲುವು ಲಭಿಸಿತ್ತು. ರಶ್ಯವು ಉಕ್ರೇನ್ನ 4 ಪ್ರಾಂತಗಳನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸುವ ನಿರ್ಣಯ ಅಕ್ಟೋಬರ್ 12ರಂದು ಮಂಡನೆಯಾದಾಗ 143 ದೇಶಗಳು ಬೆಂಬಲಿಸಿದ್ದವು. ಬಳಿಕ ಎಪ್ರಿಲ್ನಲ್ಲಿ ರಶ್ಯವನ್ನು ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿಯ ಸದಸ್ಯತ್ವದಿಂದ ಅಮಾನತುಗೊಳಿಸುವ ನಿರ್ಣಯ ಬಹುಮತದಿಂದ ಅಂಗೀಕಾರಗೊಂಡಾಗ ರಶ್ಯವು ನಿರ್ಣಯದ ಪರ ಮತ ಚಲಾಯಿಸಿದ ದೇಶಗಳೊಂದಿಗಿನ ದ್ವಿಪಕ್ಷೀಯ ಸಂಬಂಧವನ್ನು ಪುನರಾವಲೋಕಿಸುವ ಎಚ್ಚರಿಕೆ ನೀಡಿತ್ತು.

ಒಂದು ದೇಶವು ಮತ್ತೊಂದು ದೇಶದ ಮೇಲೆ ಆಕ್ರಮಣ ನಡೆಸಿದಾಗ ವಿಶ್ವಸಂಸ್ಥೆಯ ಸದಸ್ಯರಾಗಿ ನೀವು ತಟಸ್ಥರಾಗಿರಲು ಸಾಧ್ಯವಿಲ್ಲ. ಯಾಕೆಂದರೆ ಇದು ವಿಶ್ವಸಂಸ್ಥೆಯ ಮೂಲ ಆಶಯವಾದ `ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಗೌರವ'ವನ್ನು ಕಡೆಗಣಿಸುತ್ತದೆ ಎಂದು ವಿಶ್ವಸಂಸ್ಥೆಯಲ್ಲಿ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್ಫೀಲ್ಡ್ ಹೇಳಿದ್ದಾರೆ.

share
Next Story
X