ವಿಟ್ಲ | ಅಕ್ರಮ ಮರಳು ಸಾಗಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

ವಿಟ್ಲ, ಫೆ.17: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವುದು ವರದಿಯಾಗಿದೆ.
ಕೇರಳದ ಕೊಯಿಲಾಂಡಿ ನಿವಾಸಿ ಸುರೇಶ್ ಬಾಬು ಯಾನೆ ಸೂರಿ ಬಂಧಿತ ಆರೋಪಿಯಾಗಿದ್ದಾನೆ.
ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಈತನ ಪತ್ತೆಗೆ ವಾರೆಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ವಿಟ್ಲ ಠಾಣೆ ಎಎಸ್ಸೈ ಜಯರಾಮ ಎಂಬವರು ಕೇರಳ ರಾಜ್ಯದ ಕೊಯಿಲಾಂಡಿಯ ವಾರಾಂಗೀಲ್ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Next Story