Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್ ಇಂಡಿಯಾದಿಂದ ರೋಸಿ ಹೋಗಿದ್ದೇನೆ:...

ಏರ್ ಇಂಡಿಯಾದಿಂದ ರೋಸಿ ಹೋಗಿದ್ದೇನೆ: ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಅಸಮಾಧಾನ

18 Feb 2023 12:00 PM IST
share
ಏರ್ ಇಂಡಿಯಾದಿಂದ ರೋಸಿ ಹೋಗಿದ್ದೇನೆ: ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಅಸಮಾಧಾನ

ಹೊಸದಿಲ್ಲಿ: ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್ ದೆಬ್ರಾಯ್ ಟಾಟಾ ಒಡೆತನದ ಏರ್ ಇಂಡಿಯಾ ಒದಗಿಸುತ್ತಿರುವ ಸೇವೆಯ ಕುರಿತು ಕಿಡಿ ಕಾರಿದ್ದು, ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, "ಏರ್ ಇಂಡಿಯಾ ಸೇವೆ ಖಾಸಗೀಕರಣಕ್ಕಿಂತ ಮುಂಚೆಯೇ ಉತ್ತಮವಾಗಿತ್ತು" ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಮುಂಬೈನಿಂದ ದೆಹಲಿಗೆ ಪ್ರಯಾಣ ಬೆಳೆಸಬೇಕಿದ್ದ ಏರ್ ಇಂಡಿಯಾ ವಿಮಾನ 687 ವಿಳಂಬದ ನಂತರ ನಾನು ಏರ್ ಇಂಡಿಯಾ ಬಗ್ಗೆ ರೋಸಿ ಹೋಗಿದ್ದೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಪೈಕಿ ಒಂದು ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ, ಕಾರ್ಯಾಚರಣೆಯ ತೊಡಕಿನಿಂದ ವಿಮಾನ ವಿಳಂಬವಾಯಿತು ಎಂದು ಸಮಜಾಯಿಷಿ ನೀಡಿದೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಬಿಬೇಕ್ ದೆಬ್ರಾಯ್, "ಏರ್ ಇಂಡಿಯಾ ಬಗ್ಗೆ ರೋಸಿ ಹೋಗಿದ್ದೇನೆ. ದೆಹಲಿಗೆ ಏರ್ ಇಂಡಿಯಾ 687 ವಿಮಾನ ಕಾಯ್ದಿರಿಸಿದ್ದೆ. ಅದರ ನಿರ್ಗಮನ ಸಮಯ ಸಂಜೆ 4.35 ಆಗಿತ್ತು. ಇದೀಗ ಸಂಜೆ 7 ಗಂಟೆಯಾಗಿದ್ದರೂ ಈ ಕ್ಷಣಕ್ಕೂ ಯಾವುದೇ ಮಾಹಿತಿ ಇಲ್ಲ. ಅದರ ಸೇವೆ ಖಾಸಗೀಕರಣಕ್ಕಿಂತ ಮುಂಚೆಯೇ ಉತ್ತಮವಾಗಿತ್ತು..." ಎಂದು ಕಿಡಿ ಕಾರಿದ್ದರು.

ಇದರೊಂದಿಗೆ ಭವಿಷ್ಯದಲ್ಲೆಂದೂ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸದಿರಲು ಪ್ರಜ್ಞಾಪೂರ್ವಕವಾಗಿ ನಿರ್ಧರಿಸಿದ್ದೇನೆ ಎಂದೂ ಹೇಳಿಕೊಂಡಿದ್ದಾರೆ.

"ಇದು ಖಾಸಗೀಕರಣದ ಮೊದಲಿಗಿಂತಲೂ ಕಳಪೆಯಾಗಿದೆ. ಯಾರೂ ಹೊಣೆಗಾರರಾಗಿರುವಂತೆ ಕಾಣುತ್ತಿಲ್ಲ. ನಿರ್ಗಮನದ ಅವಧಿ ಪ್ರತಿ 15 ನಿಮಿಷಕ್ಕೊಮ್ಮೆ ಬದಲಾಗುತ್ತಿದೆ. ಸಿಬ್ಬಂದಿ ವರ್ಗದವರು ನಿರಂತರವಾಗಿ ಪ್ರಕಟಣೆಯನ್ನು ಬದಲಿಸುತ್ತಿದ್ದಾರೆ. @airindian" ಎಂದು ಟ್ವೀಟ್ ಮಾಡಿದ್ದಾರೆ.

ಹೆಚ್ಚು ವಿಮಾನಗಳ ಖರೀದಿಗೆ ಆದೇಶಿಸಿದ ಕೂಡಲೇ ಕೂಡಲೇ ಸೇವೆಯು ದಿಢೀರ್ ಎಂದು ಸುಧಾರಿಸುವುದಿಲ್ಲ ಎಂದೂ ಅವರು ವ್ಯಂಗ್ಯವಾಡಿದ್ದಾರೆ.

ಬಿಬೇಕ್ ದೆಬ್ರಾಯ್ ಅವರ ಒಂದು ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ, "ಕಾರ್ಯಾಚರಣೆಯ ತೊಡಕಿನಿಂದಾಗಿ ವಿಮಾನ ಪ್ರಯಾಣ ವಿಳಂಬವಾಗಿದೆ ಮತ್ತು ವಿಮಾನವು ರಾತ್ರಿ 8 ಗಂಟೆಗೆ ನಿರ್ಗಮಿಸಲಿದೆ. ನಮ್ಮ ತಂಡವು ಎಲ್ಲ ಪ್ರಯಾಣಿಕರಿಗೆ ನೆರವು ನೀಡಲು ಪ್ರಯತ್ನಿಸುತ್ತಿದೆ ಎಂಬ ಭರವಸೆ ನೀಡುತ್ತಿದ್ದೇವೆ" ಎಂದು ಉತ್ತರಿಸಿದೆ. 

ಹೀಗಿದ್ದೂ, ಏರ್ ಇಂಡಿಯಾ ತಂಡವು ಪ್ರಯಾಣಿಕರಿಗೆ ಯಾವುದೇ ನೆರವು ಒದಗಿಸುತ್ತಿಲ್ಲ ಎಂದು ದೆಬ್ರಾಯ್ ಆರೋಪಿಸಿದ್ದಾರೆ.

2022ರಲ್ಲಿ ಟಾಟಾ ಸಮೂಹವು ಏರ್ ಇಂಡಿಯಾವನ್ನು ಖರೀದಿಸಿ, ಈ ವಾರ 350 ಹೆಚ್ಚುವರಿ ವಿಮಾನ ಖರೀದಿಯ ಆಯ್ಕೆಯೊಂದಿಗೆ ಹೊಸದಾಗಿ 450 ವಿಮಾನ ಖರೀದಿಗೆ ಖರೀದಿ ಅದೇಶ ಸಲ್ಲಿಸಿದೆ.

ಇದನ್ನು ಓದಿ:  'ಚುನಾವಣಾ ಆಯೋಗದ ನಿರ್ಧಾರ ಪರಿಣಾಮಬೀರದು': ಹೊಸ ಚಿಹ್ನೆ ಸ್ವೀಕರಿಸುವಂತೆ ಠಾಕ್ರೆಗೆ ಶರದ್ ಪವಾರ್ ಸಲಹೆ

share
Next Story
X