Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಾಸಿಗೆಯಲ್ಲಿ ಮಲಗಿದ ಕಾರಣ ಬೆನ್ನುನೋವು:...

ಹಾಸಿಗೆಯಲ್ಲಿ ಮಲಗಿದ ಕಾರಣ ಬೆನ್ನುನೋವು: ಗ್ರಾಹಕನಿಗೆ ಹಣ ಮರುಪಾವತಿ, 7000 ರೂ. ಪರಿಹಾರ ನೀಡಲು ಆದೇಶ

18 Feb 2023 4:43 PM IST
share
ಹಾಸಿಗೆಯಲ್ಲಿ ಮಲಗಿದ ಕಾರಣ ಬೆನ್ನುನೋವು: ಗ್ರಾಹಕನಿಗೆ ಹಣ ಮರುಪಾವತಿ, 7000 ರೂ. ಪರಿಹಾರ ನೀಡಲು ಆದೇಶ

ಬೆಂಗಳೂರು: ಹೊಸದಾಗಿ ಖರೀದಿಸಿದ ಹಾಸಿಗೆಯಿಂದ ಬೆನ್ನು ನೋವಿಗೀಡಾಗಿದ್ದ 73 ವರ್ಷದ ಶಿಕ್ಷಣ ತಜ್ಞರೊಬ್ಬರು ಈ ಸಂಬಂಧ ಪ್ರಸಿದ್ಧ ಹಾಸಿಗೆ ತಯಾರಿಕಾ ಕಂಪನಿಯ ವಿರುದ್ಧ ಬೆಂಗಳೂರಿನ ನಗರ ಗ್ರಾಹಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ದಾವೆಯಲ್ಲಿ ವಿಜಯಿಯಾಗಿದ್ದು, ಅವರಿಗೆ ಹಾಸಿಗೆ ಖರೀದಿಗೆ ವೆಚ್ಚ ಮಾಡಿದ್ದ ರೂ. 27,455 ಹಾಗೂ ಪರಿಹಾರ ಮೊತ್ತ ರೂ. 7,000 ಅನ್ನು ಮರುಪಾವತಿಸುವಂತೆ ಗ್ರಾಹಕ ನ್ಯಾಯಾಲಯವು ಸೂಚಿಸಿದೆ ಎಂದು timesofindia ವರದಿ ಮಾಡಿದೆ.

ನಾಗರಬಾವಿಯ ನಿವಾಸಿಯಾದ ನಿವೃತ್ತ ಅರ್ಥಶಾಸ್ತ್ರ ಪ್ರಾಧ್ಯಾಪಕ ಆರ್.ಎಸ್. ದೇಶಪಾಂಡೆ ಡಿಕೆನ್ಸನ್ ರಸ್ತೆಯಲ್ಲಿರುವ ಮಳಿಗೆಯೊಂದಕ್ಕೆ ಭೇಟಿ ನೀಡಿ, ಉನ್ನತ ಶ್ರೇಣಿಯ ಡಿಸೈರ್ ಟಾಪ್ ಹಾಸಿಗೆಯನ್ನು ರೂ. 27,455 ತೆತ್ತು ಖರೀದಿಸಿದ್ದರು. ಆ ಹಾಸಿಗೆಯನ್ನು ಬಳಸತೊಡಗಿದ ಕೆಲವೇ ದಿನಗಳಲ್ಲಿ ಹಾಸಿಗೆಯ ಮಧ್ಯ ಭಾಗದಲ್ಲಿ ಉಬ್ಬು ಕಾಣಿಸಿಕೊಂಡು, ಮಲಗಿದಾಗ ತೀವ್ರ ಬೆನ್ನು ನೋವು ಉಂಟು ಮಾಡುತ್ತಿತ್ತು ಎನ್ನಲಾಗಿದೆ.

ಸತತ ಫೋನ್ ಕರೆ ಹಾಗೂ ದೂರು ನೀಡಿದರೂ ಆ ಹಿರಿಯ ನಾಗರಿಕರಿಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಕೊನೆಗೆ ಮಳಿಗೆಗೆ ಭೇಟಿ ನೀಡಿದಾಗ ಬಾಗಿಲು ಮುಚ್ಚಿರುವುದು ಕಂಡು ಬಂದಿದೆ. ಮಾರ್ಚ್, 2020ರ ವೇಳೆಗೆ ಕೋವಿಡ್-19 ಸಾಂಕ್ರಾಮಿಕ ವ್ಯಾಪಿಸಿ, ಇಡೀ ದೇಶಾದ್ಯಂತ ಲಾಕ್‌ಡೌನ್ ಹೇರಿದ್ದರಿಂದ ಮಳಿಗೆಯ ಅಧಿಕಾರಿಗಳನ್ನು ಸಂಪರ್ಕಿಸುವುದು ಆಗಿಲ್ಲ ಎಂದು ವರದಿಯಾಗಿದೆ.

ಇದಾದ ನಂತರ, ದೇಶಪಾಂಡೆಯವರು, ತಾವು ಅನುಭವಿಸುತ್ತಿರುವ ಸಮಸ್ಯೆಯನ್ನು ವಿವರಿಸಿ ಕಂಪನಿಗೆ ಹತ್ತಾರು ಇಮೇಲ್ ಕಳಿಸಿದ್ದಾರೆ. ತಾನು ಖರೀದಿಸಿರುವ ಹಾಸಿಗೆಗೆ ಆರು ತಿಂಗಳ ವಾರಂಟಿ ಇರುವ ಕುರಿತೂ ಗಮನಕ್ಕೆ ತಂದಿದ್ದಾರೆ‌. ಹೀಗಿದ್ದೂ ಹಾಸಿಗೆ ಕಂಪನಿಯಿಂದ ಯಾವುದೇ ಪ್ರತಿಸ್ಪಂದನೆ ದೊರೆತಿಲ್ಲ. ಇದರಿಂದ ರೋಸಿ ಹೋದ ಅವರು, ಶಾಂತಿನಗರದಲ್ಲಿರುವ ಹೆಚ್ಚುವರಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ದೂರಿನ ವಿಚಾರಣೆ ನಡೆಸಿದ ಆಯೋಗವು, ಜನವರಿ 19ರಂದು ಹಾಸಿಗೆ ತಯಾರಿಕಾ ಕಂಪನಿಗೆ ಹಾಸಿಗೆ ಖರೀದಿ ವೆಚ್ಚವಾದ ರೂ. 27,455 ಅನ್ನು ಬಡ್ಡಿಯೊಂದಿಗೆ ಮರಳಿಸಬೇಕು. ಹಿರಿಯ ನಾಗರಿಕರಿಗೆ ತಯಾರಿಕಾ ನ್ಯೂನತೆಯಿಂದ ಸಮಸ್ಯೆ ಉಂಟು ಮಾಡಿದ್ದಕ್ಕೆ ರೂ. 5,000 ಪರಿಹಾರ ನೀಡಬೇಕು ಹಾಗೂ ಅವರು ಭರಿಸಿರುವ ನ್ಯಾಯಾಲಯ ವೆಚ್ಚದ ಭಾಗವಾಗಿ ರೂ. 2,000 ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ಆದೇಶಿಸಿದೆ.

ಇದಲ್ಲದೆ ಒಟ್ಟು ಮೊತ್ತವನ್ನು ಆದೇಶವಾದ ದಿನದಿಂದ 45 ದಿನಗಳೊಳಗಾಗಿ ಪಾವತಿಸಬೇಕು ಎಂದೂ ಕಂಪನಿಗೆ ನಿರ್ದೇಶಿಸಿದೆ.

share
Next Story
X