Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವರು ಬದುಕಿದ್ದಾಗಲೇ ಪೊಲೀಸ್‌ ಠಾಣೆಗೆ...

ಅವರು ಬದುಕಿದ್ದಾಗಲೇ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದೆವು: ಯುವಕರನ್ನು ವಾಹನ ಸಹಿತ ಸುಟ್ಟು ಕೊಂದ ಆರೋಪಿಯ ಹೇಳಿಕೆ

18 Feb 2023 9:16 PM IST
share
ಅವರು ಬದುಕಿದ್ದಾಗಲೇ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದೆವು: ಯುವಕರನ್ನು ವಾಹನ ಸಹಿತ ಸುಟ್ಟು ಕೊಂದ ಆರೋಪಿಯ ಹೇಳಿಕೆ

ಹೊಸದಿಲ್ಲಿ: ಹರ್ಯಾಣದಲ್ಲಿ ಈ ವಾರದ ಆರಂಭದಲ್ಲಿ ರಾಜಸ್ಥಾನದ ಇಬ್ಬರು ವ್ಯಕ್ತಿಗಳು ವಾಹನದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಜೀವಂತವಾಗಿದ್ದಾಗ ಮೊದಲು ಪೊಲೀಸರ ಬಳಿಕ ಕರೆದೊಯ್ಯಲಾಗಿತ್ತು ಎಂದು ಆರೋಪಿಯೋಓರ್ವ ಹೇಳಿಕೆ ನೀಡಿದ್ದಾಗಿ ಪೊಲೀಸ್ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. 
ಇದನ್ನು ಗೋರಕ್ಷಕರ ದಾಳಿ ಎಂದು ಶಂಕಿಸಲಾಗಿದೆ.

ರಾಜಸ್ಥಾನ ಪೊಲೀಸ್ ಮೂಲಗಳ ಪ್ರಕಾರ, ಹರ್ಯಾಣದ ನುಹ್‌ನಲ್ಲಿ ಬುಧವಾರ ರಾತ್ರಿ ಹಸುಗಳನ್ನು ವಧೆಗಾಗಿ ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ಶಂಕಿಸಿ 25 ವರ್ಷದ ನಾಸಿರ್ ಮತ್ತು 35 ವರ್ಷದ ಜುನೈದ್ ಅಲಿಯಾಸ್ ಜುನಾ ಎಂಬ ಇಬ್ಬರ ಮೇಲೆ ನಾಲ್ವರ ತಂಡವು ದಾಳಿ ಮಾಡಿತ್ತು. ದಾಳಿಯಲ್ಲಿ ಅವರಿಬ್ಬರು ತೀವ್ರವಾಗಿ ಗಾಯಗೊಂಡಿದ್ದರು.

ನಿನ್ನೆ ಬಂಧಿಸಲಾದ ಟ್ಯಾಕ್ಸಿ ಚಾಲಕ ಮತ್ತು ಗೋರಕ್ಷಕ ಗುಂಪಿನ ಸದಸ್ಯ ರಿಂಕು ಸೈನಿ ತನಿಖಾಧಿಕಾರಿಗಳಿಗೆ, ಇಬ್ಬರು ವ್ಯಕ್ತಿಗಳನ್ನು ಹರಿಯಾಣದ ಫಿರೋಜ್‌ಪುರ ಜಿರ್ಕಾದ ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ದನ ಕಳ್ಳಸಾಗಣೆ ಆರೋಪದ ಮೇಲೆ ಜುನೈದ್ ಮತ್ತು ನಾಸಿರ್ ಅವರನ್ನು ಹರ್ಯಾಣ ಪೊಲೀಸರು ಬಂಧಿಸಬೇಕೆಂದು ಸೈನಿ ಮತ್ತು ಅವರ ಗುಂಪು ಬಯಸಿದೆ ಎಂದು ಅವರು ಹೇಳಿದರು. ಆದರೆ ಇಬ್ಬರು ಅರೆಜೀವವಾಗಿದ್ದುದನ್ನು ಕಂಡು ಪೊಲೀಸರು ತಬ್ಬಿಬ್ಬಾಗಿ ಅವರನ್ನು ಬಿಡಲು ಹೇಳಿದರು. ಈ ಆರೋಪದ ಬಗ್ಗೆ ಹರಿಯಾಣ ಪೊಲೀಸರು ಇನ್ನೂ ಪ್ರತಿಕ್ರಿಯಿಸಿಲ್ಲ.

ಸ್ವಲ್ಪ ಸಮಯದ ನಂತರ, ಜುನೈದ್ ಮತ್ತು ನಾಸಿರ್ ತಮ್ಮ ಗಾಯಗಳಿಂದ ಸಾವನ್ನಪ್ಪಿದರು. ನಂತರ ಭಯಭೀತರಾದ ಗೋರಕ್ಷಕರ ಗುಂಪು ಶವಗಳನ್ನು ವಿಲೇವಾರಿ ಮಾಡುವ ವಿಧಾನಗಳಿಗಾಗಿ ತಮ್ಮ ಸಹಚರರನ್ನು ಸಂಪರ್ಕಿಸಿತು ಎಂದು ಮೂಲಗಳು ತಿಳಿಸಿವೆ.

ಅವರು ಅಂತಿಮವಾಗಿ ತಮ್ಮ ಬೊಲೆರೊ ಎಸ್‌ಯುವಿ ಮತ್ತು ಎರಡೂ ದೇಹಗಳನ್ನು 200 ಕಿಮೀ ದೂರದಲ್ಲಿರುವ ಭಿವಾನಿಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದರು. ಗುರುವಾರ ಮುಂಜಾನೆ ಎರಡೂ ದೇಹಗಳನ್ನು ವಾಹನದೊಂದಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸೈನಿ ಪ್ರಕಾರ, ಅಪರಾಧದ ಸ್ಥಳದಿಂದ ದೂರದಲ್ಲಿ ಅದನ್ನು ಸುಟ್ಟುಹಾಕಿದರೆ ದೇಹಗಳನ್ನು ಮತ್ತು ಸುಟ್ಟ ವಾಹನವನ್ನು ಯಾರೂ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ ಎಂದು ಅವರು ಅಂದುಕೊಂಡಿದ್ದರು. ಆದರೆ, ಬೊಲೆರೊದ ಚಾಸಿಸ್ ನಂಬರ್ ನಿಂದ ಅವರನ್ನು ಜುನೈದ್ ಮತ್ತು ನಾಸಿರ್ ಎಂದು ಗುರುತಿಸಲಾಗಿದೆ.

ರಾಜಸ್ಥಾನ ಪೊಲೀಸ್ ಮೂಲಗಳ ಪ್ರಕಾರ, ಬಲಿಪಶುಗಳ ಕುಟುಂಬಗಳು ಹೆಸರಿಸಿದ ಪ್ರಮುಖ ಶಂಕಿತರಲ್ಲಿ ಒಬ್ಬನಾದ ಬಜರಂಗದಳದ ಮೋನು ಮಾನೇಸರ್ ಅಪಹರಣದಲ್ಲಿ ಭಾಗಿಯಾಗಿಲ್ಲ. ಆದಾಗ್ಯೂ, ಆತ ಅಪಹರಣಕಾರರೊಂದಿಗೆ ಸಂಪರ್ಕ ಹೊಂದಿದ್ದ ಮತ್ತು ದಾರಿಯುದ್ದಕ್ಕೂ ಅವರಿಗೆ ಸಹಾಯ ಮಾಡಿದ್ದ ಎನ್ನಲಾಗಿದೆ.

ಉಳಿದ ಹಂತಕರಿಗಾಗಿ ಹಲವು ಪೊಲೀಸ್ ತಂಡಗಳು ಹುಡುಕಾಟ ನಡೆಸುತ್ತಿವೆ. ಸೈನಿ ಮತ್ತು ಮೋನು ಮಾನೇಸರ್ ಮಾತ್ರವಲ್ಲದೇ, ಸಂತ್ರಸ್ತರ ಕುಟುಂಬಗಳು ಅನಿಲ್, ಶ್ರೀಕಾಂತ್ ಮತ್ತು ಲೋಕೇಶ್ ಸಿಂಗ್ಲಾ ಎಂಬ ಇತರ ಮೂವರನ್ನು ಹೆಸರಿಸಿದ್ದಾರೆ.

ಆರೋಪಿ ಮೋನು ಮಾನೇಸರ್ ನ ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಲು ಹರಿಯಾಣ ಅಧಿಕಾರಿಗಳು ಮುಂದಾಗಿದ್ದರೆ, ಆತನ ರಾಜ್ಯದ ಆಡಳಿತಾರೂಢ ಬಿಜೆಪಿಯ ಉನ್ನತ ನಾಯಕರೊಂದಿಗಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆ ಅವರ ರಾಜಕೀಯ ಸಂಪರ್ಕಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ. ಹಲವು ಮಾರಕಾಸ್ತ್ರಗಳೊಂದಿಗೆ ಈತನ ಫೋಟೊ ಹಾಗೂ ವೀಡಿಯೊಗಳೂ ವೈರಲ್‌ ಆಗಿವೆ.

share
Next Story
X