Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಗೆ ಅಮೆರಿಕದ ಪ್ರಚೋದನೆ: ರಶ್ಯ...

ಉಕ್ರೇನ್ ಗೆ ಅಮೆರಿಕದ ಪ್ರಚೋದನೆ: ರಶ್ಯ ಆರೋಪ

18 Feb 2023 9:44 PM IST
share
ಉಕ್ರೇನ್ ಗೆ ಅಮೆರಿಕದ ಪ್ರಚೋದನೆ: ರಶ್ಯ ಆರೋಪ

ಮಾಸ್ಕೊ, ಫೆ.18: ರಶ್ಯದ ಪ್ರದೇಶಗಳಿಗೆ ನೇರವಾಗಿ ದಾಳಿ ನಡೆಸುವಂತೆ ಉಕ್ರೇನ್ಗೆ ಅಮೆರಿಕ ಪ್ರಚೋದನೆ ನೀಡುತ್ತಿದೆ. ಇದೀಗ ಅಮೆರಿಕವು ಈ ಯುದ್ಧದಲ್ಲಿ ನೇರವಾಗಿ ಪಾಲ್ಗೊಂಡಿದ್ದು  ನಮಗೆ ಬೇರೆ ಆಯ್ಕೆಗಳಿಲ್ಲ. ನಮ್ಮ ನೆಲ, ಅಸ್ಮಿತೆ ಮತ್ತು ಭವಿಷ್ಯಕ್ಕೆ ಹಾನಿಯಾಗಲು ಬಿಡುವುದಿಲ್ಲ ಎಂದು ರಶ್ಯ ಹೇಳಿದೆ.

ಉಕ್ರೇನ್ ಬಿಕ್ಕಟ್ಟು ಅಂತ್ಯಗೊಳ್ಳುವುದು ಅಮೆರಿಕಕ್ಕೆ ಇಷ್ಟವಿಲ್ಲ. ಅಮೆರಿಕದ ಯುದ್ಧಪ್ರಿಯರು ಇನ್ನಷ್ಟು ಮುಂದೆ ಸಾಗಿದ್ದಾರೆ. ಉಕ್ರೇನ್ನ ಆಡಳಿತವನ್ನು ಪ್ರಚೋದಿಸಿ ಯುದ್ಧವನ್ನು ನಮ್ಮ ಪ್ರದೇಶಕ್ಕೆ ವರ್ಗಾಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯಲ್ಲಿನ  ರಶ್ಯದ ರಾಯಭಾರಿ ವ್ಯಾಸಿಲಿ ನೆಬೆಂಝಿಯಾ ಆರೋಪಿಸಿದ್ದಾರೆ.

ಇಟಲಿಯಲ್ಲಿ ರಶ್ಯದ ಕಲಾವಿದರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ರಶ್ಯದ ವಿದೇಶಾಂಗ ಇಲಾಖೆ, ಇಟಲಿ ಅಧಿಕಾರಿಗಳು  ತಾರತಮ್ಯದಿಂದ ವರ್ತಿಸಿದ್ದು ಈ ಬಗ್ಗೆ ಇಟಲಿಯ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ಸಲ್ಲಿಸಲಾಗಿದೆ ಎಂದಿದೆ.

ಈ ಮಧ್ಯೆ, ಶುಕ್ರವಾರ ಜರ್ಮನಿಯ  ಮ್ಯೂನಿಚ್ ನಲ್ಲಿ ನಡೆಯುತ್ತಿರುವ  ಭದ್ರತಾ ಸಮಾವೇಶದಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ `ರಶ್ಯ ಅಧ್ಯಕ್ಷ ಪುಟಿನ್ ಅವರ ಆಕ್ರಮಣ ಪಟ್ಟಿಯಲ್ಲಿ ಉಕ್ರೇನ್ ಕೊನೆಯ ನಿಲ್ದಾಣವಾಗಿರುವುದಿಲ್ಲ. ಅವರ ಪಟ್ಟಿ ಇನ್ನೂ ಉದ್ದವಿದೆ, ಅವರು ಈ ಹಿಂದೆ ಸೋವಿಯತ್ ಒಕ್ಕೂಟದ ಭಾಗವಾಗಿದ್ದ ಇನ್ನೂ ಕೆಲವು ದೇಶಗಳತ್ತ ಮುನ್ನುಗ್ಗಲಿದ್ದಾರೆ. ರಶ್ಯದ ಧಾವಂತವನ್ನು ತಡೆಯಲು ಅಗತ್ಯವಾದ ಟ್ಯಾಂಕ್ ಗಳ ಪೂರೈಕೆಯ ಬಗ್ಗೆ ಪಾಶ್ಚಿಮಾತ್ಯರು ನಿರ್ಧಾರಕ್ಕೆ ಬರುವ ವೇಳೆಗೆ ಮೋಲ್ದೋವಾ ದೇಶದ ಕತ್ತುಹಿಸುಕುವ ವಿಧಾನದ ಬಗ್ಗೆ  ಪುಟಿನ್ ತಂತ್ರ ರೂಪಿಸಿರುತ್ತಾರೆ' ಎಂದು ಹೇಳಿದ್ದಾರೆ.

ಕಳೆದ ವರ್ಷ ಇದೇ ಸಂದರ್ಭ ನಡೆದಿದ್ದ ಮ್ಯೂನಿಚ್ ಸಮಾವೇಶದಲ್ಲಿ ಪಾಶ್ಚಿಮಾತ್ಯ ದೇಶಗಳು ಉಕ್ರೇನ್ ಮೇಲೆ ಆಕ್ರಮಣ ನಡೆಸಿದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಶ್ಯಕ್ಕೆ ಎಚ್ಚರಿಕೆ ನೀಡಿದ್ದರು. ಈ ವರ್ಷ ನಡೆಯುತ್ತಿರುವ ಸಮಾವೇಶದಲ್ಲಿ, ರಶ್ಯದ ಆಕ್ರಮಣದಿಂದ ಆಗಿರುವ ಪರಿಣಾಮದ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುಮಾರು 1 ವರ್ಷದ ಹಿಂದೆ ಉಕ್ರೇನ್ ಮೇಲೆ ರಶ್ಯ ಆಕ್ರಮಣ ಆರಂಭಿಸಿದ ನಂತರ ಯುರೋಪ್ನ ಭದ್ರತಾ ಪರಿಸ್ಥಿತಿಯನ್ನು ಚರ್ಚಿಸಲು ವಿಶ್ವನಾಯಕರು, ಮಿಲಿಟರಿ ಅಧಿಕಾರಿಗಳು ಮತ್ತು ರಾಜತಾಂತ್ರಿಕರು ಮ್ಯೂನಿಚ್ ನಲ್ಲಿ ಸಭೆ ಸೇರಿದ್ದಾರೆ. ಮೂರು ದಿನ ನಡೆಯಲಿರುವ ಈ ಸಭೆಯಲ್ಲಿ ಅಮೆರಿಕ, ಯುರೋಪ್, ಚೀನಾ ಸೇರಿದಂತೆ ಸುಮಾರು 100 ದೇಶಗಳ ಭದ್ರತಾ ತಜ್ಞರು, ಸುಮಾರು 40 ದೇಶಗಳ ಮುಖ್ಯಸ್ಥರು ಪಾಲ್ಗೊಳ್ಳುವ ನಿರೀಕ್ಷೆಯಿದೆ. 

share
Next Story
X