Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ...

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಗುತ್ತಿಗೆ ಪಡೆದು 3 ವರ್ಷವಾದರೂ ನೋಂದಣಿ ಮಾಡಿಸದ ನಿರಾಣಿ ಶುಗರ್ಸ್ ಪ್ರೈ.ಲಿ.

ಜಿ.ಮಹಾಂತೇಶ್ಜಿ.ಮಹಾಂತೇಶ್19 Feb 2023 8:42 AM IST
share
ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಗುತ್ತಿಗೆ ಪಡೆದು 3 ವರ್ಷವಾದರೂ ನೋಂದಣಿ ಮಾಡಿಸದ ನಿರಾಣಿ ಶುಗರ್ಸ್ ಪ್ರೈ.ಲಿ.

ಬೆಂಗಳೂರು, ಫೆ.18: ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದುಕೊಂಡು 3 ವರ್ಷಗಳಾದರೂ ಬೃಹತ್ ಮತ್ತು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಕುಟುಂಬ ಸದಸ್ಯರ ಒಡೆತನದ ನಿರಾಣಿ ಶುಗರ್ಸ್ ಪ್ರೈ. ಲಿಮಿಟೆಡ್ ಗುತ್ತಿಗೆ ಒಪ್ಪಂದವನ್ನು ನೋಂದಣಿ ಮಾಡಿಸಿಲ್ಲ. 90ದಿನದೊಳಗೆ ನೋಂದಣಿ ಆಗದೇ ಇರುವ ಕಾರಣ ಗುತ್ತಿಗೆ ಒಪ್ಪಂದವನ್ನು ನೋಂದಾಯಿಸಲು ಅವಕಾಶವಿಲ್ಲ ಎಂದು ಸ್ಪಷ್ವವಾಗಿ ನಿಲುವು ತಳೆದಿರುವ ನೋಂದಣಿ ಮಹಾಪರಿವೀಕ್ಷಕರು ಸರಕಾರಕ್ಕೆ ಪತ್ರ ಬರೆದಿದ್ದಾರೆ.

 ಗುತ್ತಿಗೆ ಒಪ್ಪಂದವನ್ನು ನೋಂದಣಿ ಮಾಡಿಸದಿದ್ದರೂ ಕಬ್ಬು ಅರೆಯುತ್ತಿರುವ ನಿರಾಣಿ ಶುಗರ್ಸ್ ಪ್ರೈವೈಟ್ ಲಿಮಿಟೆಡ್ ಗುತ್ತಿಗೆ ಒಪ್ಪಂದದಲ್ಲಿನ ಕೆಲ ಷರತ್ತುಗಳನ್ನು ಕೈಬಿಡಲು ಸರಕಾರದ ಮೇಲೆ ಒತ್ತಡ ಮುಂದುವರಿಸಿದೆ. ಅದೇ ರೀತಿ 2020-25ರ ಹೊಸ ಕೈಗಾರಿಕೆ ನೀತಿಯನ್ನು ಮುಂದಿರಿಸಿ 24 ಕೋಟಿ ರೂ. ಮೊತ್ತದ ಮುದ್ರಾಂಕ ಶುಲ್ಕದಿಂದ ವಿನಾಯಿತಿ ನೀಡಲು ಸರಕಾರದ ಹೆಗಲಿಗೇರಿ ಕುಳಿತಿದೆ.

ಗುತ್ತಿಗೆ ಒಪ್ಪಂದವನ್ನು 3 ವರ್ಷಗಳಿಂದ ನೋಂದಣಿ ಮಾಡಿಸದೆಯೇ ಚಟುವಟಿಕೆ ಮುಂದುವರಿಸಲು ಅವಕಾಶ ಮಾಡಿಕೊಟ್ಟಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಡೆಯು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಈ ಕುರಿತು ''the-file.in'' ಗೆ ಕೆಲ ದಾಖಲೆಗಳು ಲಭ್ಯವಾಗಿವೆ.

ರಾಯಭಾಗ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಭಾಗ್ಯಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಕರಣಗಳಂತೆ ಮುದ್ರಾಂಕ ಶುಲ್ಕವನ್ನು ಲೆಕ್ಕಚಾರ ಮಾಡುವ ಕುರಿತಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಿರ್ದೇಶನದಂತೆ  ಕಾರ್ಖಾನೆಯ ಸ್ಥಿರ ಮತ್ತು ಚರ ಆಸ್ತಿಗಳ ಮೌಲ್ಯಮಾಪನ ಮಾಡಿಸಲು ಸರಕಾರವು  ಕ್ರಮವಹಿಸಿದೆ ಎಂದು ಗೊತ್ತಾಗಿದೆ.

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2020-21ನೇ ಹಂಗಾಮಿನಿಂದ 40 ವರ್ಷಗಳ ಅವಧಿಗೆ ನಿರಾಣಿ ಶುಗರ್ಸ್‌ಗೆ ಗುತ್ತಿಗೆ ನೀಡುವ ಸಂಬಂಧ 2020ರ ಜೂನ್ 25ರಂದು ಸಚಿವ ಸಂಪುಟ ಸಭೆಯು ಅನುಮೋದಿಸಿತ್ತು. ಇದಾದ ನಂತರ 2020ರ ಜುಲೈ 4ರಂದು ಅನುಮತಿ ನೀಡಿದ್ದ ಕೈಗಾರಿಕೆ ಇಲಾಖೆಯು ಆದೇಶ ಹೊರಡಿಸಿತ್ತು.

2020ರ ಜುಲೈ 10ರಂದು ಪಾಂಡವಪುರ ಸಕ್ಕರೆ ಕಾರ್ಖಾನೆ ಮತ್ತು ನಿರಾಣಿ ಶುಗರ್ಸ್ ಪ್ರೈ ಲಿ. ನಡುವೆ ಗುತ್ತಿಗೆ ಒಪ್ಪಂದ ಏರ್ಪಟ್ಟಿತ್ತು. ಗುತ್ತಿಗೆ ಒಪ್ಪಂದವನ್ನು 90 ದಿನಗಳವರೆಗೆ ನೋಂದಾವಣೆ ಮಾಡಿಕೊಳ್ಳಬೇಕಿತ್ತು. ಆದರೆ, ಕೆಲ ಷರತ್ತುಗಳನ್ನು ಕೈಬಿಡಲು ಸರಕಾರದ ಮೇಲೆ ಒತ್ತಡ ಹೇರುವುದರಲ್ಲಿಯೇ ತೊಡಗಿಸಿಕೊಂಡಿರುವ ನಿರಾಣಿ ಶುಗರ್ಸ್ 3 ವರ್ಷಗಳಾದರೂ ನೋಂದಣಿ ಮಾಡಿಸಿಕೊಂಡಿಲ್ಲ.

ಗುತ್ತಿಗೆ ಒಪ್ಪಂದ ಪಾಲನೆ, ಸಾಲ ಮತ್ತು ಜವಾಬ್ದಾರಿಗಳ ಕುರಿತಂತೆ 2021ರ ಜುಲೈ 8ರಂದು ಸರಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. ಸಭೆ ನಡೆದ ಒಂದು ವರ್ಷದ ಬಳಿಕ ನಿರಾಣಿ ಶುಗರ್ಸ್ ಪ್ರೈ ಲಿ., ಗುತ್ತಿಗೆ ಒಪ್ಪಂದದ ಮುದ್ರಾಂಕ ಶುಲ್ಕದಿಂದ ವಿನಾಯ್ತಿ ಪಡೆಯಲು ಹಾಗೂ 2020ರ ಜುಲೈ 10ರಂದು ಮಾಡಿಕೊಳ್ಳಲಾದ ಒಪ್ಪಂದ ಷರತ್ತುಗಳನ್ನು ಬದಲಾಯಿಸಲು/ಮಾರ್ಪಾಡಿಸಲು 2022ರ ಸೆಪ್ಟಂಬರ್ 20ರಂದು ಮನವಿ ಸಲ್ಲಿಸಿತ್ತು. ಈ ಮನವಿಯನ್ನು ತಿರಸ್ಕರಿಸಿದ್ದ ಆರ್ಥಿಕ ಇಲಾಖೆಯು 2022ರ ಅಕ್ಟೋಬರ್ 6ರಂದೇ ಗುತ್ತಿಗೆ ಒಪ್ಪಂದಗಳ ಷರತ್ತುಗಳ ಬದಲಾವಣೆಗೆ ಈ ಹಂತದಲ್ಲಿ ಅವಕಾಶವಿರುವುದಿಲ್ಲ ಎಂದು ಅಭಿಪ್ರಾಯ ನೀಡಿತ್ತು ಎಂದು ಗೊತ್ತಾಗಿದೆ. ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಗುತ್ತಿಗೆ ಬರುತ್ತಿದ್ದಂತೆ ನಿರಾಣಿ ಶುಗರ್ಸ್ ಕಂಪೆನಿಯು ಗುತ್ತಿಗೆ ಕರಾರುಗಳನ್ನು ತಿದ್ದುಪಡಿಗೆ ಒತ್ತಡ ಹೇರಿತ್ತು.

ಪಿಎಸ್‌ಎಸ್‌ಕೆ ಸಹಕಾರಿ ಸಕ್ಕರೆ ಕಾರ್ಖಾನೆ ನೋಂದಣಿ ಶುಲ್ಕ ಮನ್ನಾ ಮಾಡುವ ಪ್ರಸ್ತಾವವನ್ನು ಸರಕಾರವು ತಿರಸ್ಕರಿಸಿತ್ತು. ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯು ದುಡಿಯುವ ಬಂಡವಾಳದ ಕೊರತೆಯಿಂದಾಗಿ ಕಳೆದ 5-6 ಸಾಲುಗಳಿಂದ ಕಬ್ಬು ನುರಿಸಿರಲಿಲ್ಲ. ಈ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆದ ರೈತರ, ಕಾರ್ಮಿಕರ, ಕಾರ್ಖಾನೆ ಆರ್ಥಿಕ ಹಿತದೃಷ್ಟಿಯಿಂದ 2020-21ನೇ ಸಾಲಿನಲ್ಲಿ ಕಬ್ಬು ನುರಿಸಬೇಕಾಗಿದ್ದರಿಂದಾಗಿ ನಿರಾಣಿ ಶುಗರ್ಸ್‌ಗೆ 405 ಕೋಟಿ ರೂ. ಗೆ ಗುತ್ತಿಗೆ ನೀಡಲಾಗಿತ್ತು.

‘ಸರಕಾರದ ಕೈಸೇರದ 24 ಕೋಟಿ ರೂ.’

ನಿರಾಣಿ ಶುಗರ್ಸ್ ಪ್ರೈವೈಟ್ ಲಿಮಿಟೆಡ್  ಗುತ್ತಿಗೆ ಒಪ್ಪಂದ ನೋಂದಣಿ ಮಾಡದ ಕಾರಣ ಗುತ್ತಿಗೆ ಮೊತ್ತದ ಪೈಕಿ ರೂ. 24 ಕೋಟಿಯೂ ಸರಕಾರದ ಕೈಸೇರಿಲ್ಲ. ಹೀಗಾಗಿ ನೌಕರರಿಗೆ ಬಾಕಿ ಮೊತ್ತವನ್ನು ಪಾವತಿಸಲಾಗಿಲ್ಲ. ಗುತ್ತಿಗೆ ಒಪ್ಪಂದವು 2020ರ ಜುಲೈ 10ರಂದು ಏರ್ಪಟ್ಟಿರುವುದರಿಂದ 90 ದಿನದೊಳಗೆ ನೋಂದಣಿ ಆಗದೇ ಇರುವ ಕಾರಣ ಗುತ್ತಿಗೆ ಒಪ್ಪಂದವನ್ನು ನೋಂದಾಯಿಸಲು ಅವಕಾಶವಿಲ್ಲ ಎಂದು ನೋಂದಣಿ ಮಹಾ ಪರಿವೀಕ್ಷಕರು 2022ರ ಡಿಸೆಂಬರ್ 21ರಂದೇ ಪತ್ರ ಬರೆದಿದ್ದಾರೆ. ಆದರೂ ನಿರಾಣಿ ಶುಗರ್ಸ್ ಕೆಲ ಪ್ರಮುಖ ಷರತ್ತುಗಳನ್ನು ಕೈಬಿಡುವ ಸಂಬಂಧ ತನ್ನ ಒತ್ತಡವನ್ನು ಮುಂದುವರಿಸಿದೆ  ಎಂದು ತಿಳಿದು ಬಂದಿದೆ.

ಮತ್ತೆ ಸಚಿವ ಸಂಪುಟದ ಅನುಮೋದನೆ?

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯು ಸಹಕಾರಿ ಸಕ್ಕರೆ ಕಾರ್ಖಾನೆಯಾಗಿದೆ. ರಾಜ್ಯ ಸರ್ಕಾರವು ಷೇರು ಬಂಡವಾಳ ಹೊಂದಿದೆ. ಗುತ್ತಿಗೆದಾರರು ಪ್ರಸ್ತಾಪಿಸಿರುವ ಗುತ್ತಿಗೆ ಒಪ್ಪಂದದ ತಿದ್ದುಪಡಿ/ಬದಲಾವಣೆಗಳು ಕಾರ್ಖಾನೆಯ ಆಸ್ತಿ ಮತ್ತು ಅಸ್ತಿತ್ವದ ಪ್ರಶ್ನೆ ಒಳಗೊಂಡಿರುವುದರಿಂದ ಈ ಪ್ರಸ್ತಾವಕ್ಕೆ ಮತ್ತೆ ಆರ್ಥಿಕ ಇಲಾಖೆ ಮತ್ತು ಸಚಿವ ಸಂಪುಟದ ಅನುಮೋದನೆ ಪಡೆದುಕೊಳ್ಳಬೇಕಿದೆ ಎಂದು ಅಧಿಕಾರಿಯೊಬ್ಬರು ''the-file.in'' ಗೆ ತಿಳಿಸಿದ್ದಾರೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X