Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳ ಮೊದಲು...

ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳ ಮೊದಲು ಸರಿಪಡಿಸಲಿ: ಸಿಎಂ ಬೊಮ್ಮಾಯಿ

19 Feb 2023 12:57 PM IST
share
ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳ ಮೊದಲು ಸರಿಪಡಿಸಲಿ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಫೆ.19: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ. ಅವರು ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ. ಆಮೇಲೆ ಕರ್ನಾಟಕದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

 ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, 'ಬೊಮ್ಮಾಯಿ ನೇತೃತ್ವದ ಸರಕಾರದಿಂದ ನರಕ  ಸೃಷ್ಟಿಯಾಗಿದೆ' ಎಂದಿರುವ ಸುರ್ಜೇವಾಲಾ ಅವರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಸೃಷ್ಟಿಸಿದ್ದ ನರಕದಿಂದಲೇ ಅವರನ್ನು ಮನೆ ಜನ ಕಳುಹಿಸಿದ್ದಾರೆ. ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಿದು. ಜನರಿಗೆ ತಮ್ಮ, ನಮ್ಮ ವೈಫಲ್ಯಗಳನ್ನು ತೋರಿಸುವ ಬದಲು ಈ ರೀತಿಯ ಮಾತುಗಳು ಜನರ ಮೇಲೆ ಪ್ರಭಾವ ಬೀರುವುದಿಲ್ಲ ಎಂದರು.

ಅಸುರರ ದೊಡ್ಡ ಪಟ್ಟಿ

ಬಿಜೆಪಿ ಅಸುರರು, ಬೊಮ್ಮಾಯಿ ಅವರು ಭ್ರಷ್ಟಾಸುರ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಜನರಿಗೆ ಯಾರು ಅಸುರರು, ಯಾರು ದೇವತೆಗಳು ಎಂದು ಗೊತ್ತಿದೆ. 70 ವರ್ಷ ಆಡಳಿತ  ಮಾಡಿರುವ ಕಾಂಗ್ರೆಸ್ ನ್ನು ಕಿತ್ತೊಗೆದು ಅಸುರರು ಯಾರೆಂದು ತೋರಿಸಿದ್ದಾರೆ. ಕಾಂಗ್ರೆಸ್ ನಲ್ಲಿರುವ ಅಸುರರ ದೊಡ್ಡ ಪಟ್ಟಿಯೇ ಇದೆ ಎಂದರು.

ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ

'ನಕಲು ಮಾಡುವಾಗ ಬುದ್ಧಿ ಇರಬೇಕು' ಎಂಬ ಹೇಳಿಕೆಗೆ ಉತ್ತರಿಸಿ  ಅವರಿಗೂ ನಮಗೂ  ಬಹಳ ವ್ಯತ್ಯಾವಿದೆ. ಅವರು ಚುನಾವಣೆಗಾಗಿ ಆಕಾಶವನ್ನು ತೋರಿಸಿ ಜನರನ್ನು ಮರಳು ಮಾಡುವ ಪ್ರಯತ್ನ ಮಾಡಿದ್ದಾರೆ. ನಾವು ಯಾವುದಕ್ಕಾಗಿ, ಯಾರಿಗೆ, ಎಷ್ಟು ಹಣವಾಗುತ್ತದೆ ಎಂದು ವಿವರಿಸಿದ್ದೇವೆ. ಅವರು ನಮ್ಮನ್ನು ನಕಲು  ಮಾಡಿದ್ದಾರೆ. ನಾವು ಗೃಹಿಣಿ ಶಕ್ತಿ ನೀಡಿದ ಮೇಲೆ ಗೃಹಲಕ್ಷ್ಮಿ ಯೋಜನೆ ಘೋಷಿಸಿದ್ದಾರೆ. ಆದ್ದರಿಂದ ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ ಎಂದು ವ್ಯಂಗ್ಯವಾಡಿದರು.

ಅನುಷ್ಠಾನ ಸಮಿತಿ ರಚನೆ: ಕಳೆದ ಬಾರಿ ಆಯವ್ಯಯ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ  ಬಹುತೇಕ ಶೇ.90ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕೂಡ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಅನುಷ್ಠಾನ ಸಮಿತಿ ರಚಿಸಿ ಅನುಷ್ಠಾನ ಮಾಡಲಾಗುವುದು ಎಂದರು.

ಕಾಂಗ್ರೆಸ್ಸಿನವರ ಕಿವಿಗಳ ಮೇಲೆ ಶಾಶ್ವತವಾಗಿ ಹೂವಿರಲಿದೆ

ವಿರೋಧ ಪಕ್ಷದವರು ಕಿವಿ ಮೇಲೆ ಹೂವಿಟ್ಟುಕೊಳ್ಳುವ ಅಭಿಯಾನ ಆರಂಭಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಇಷ್ಟು ದಿನ ಜನರಿಗೆ ಅವರು ಕಿವಿ ಮೇಲೆ ಹೂವಿಟ್ಟಿದ್ದು, ಇನ್ನು ಮುಂದೆ ಜನ ನಿಮಗೆ ಕಿವಿ ಮೇಲೆ ಹೂವಿಡುತ್ತಾರೆ ಎಂದು ವಿಧಾನಸಭೆಯಲ್ಲಿಯೇ ಉತ್ತರಿಸಿದ್ದೇನೆ.  ಶಾಶ್ವತವಾಗಿ ಅವರ ಕಿವಿಗಳ ಮೇಲೆ ಹೂವಿರಲಿದೆ. ಚುನಾವಣೆಯಾದ ನಂತರ ಅವರ ಕಿವಿ ಮೇಲೆ ಹೂವಿರಲಿದೆ ಎಂದರು.

share
Next Story
X