Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗರ್ಭನಿರೋಧಕ ಶಸ್ತ್ರಚಿಕಿತ್ಸೆ...

ಗರ್ಭನಿರೋಧಕ ಶಸ್ತ್ರಚಿಕಿತ್ಸೆ ಮಾಡಿಕೊಂಡದ್ದಕ್ಕೆ 11 ಮಕ್ಕಳ ತಾಯಿಯನ್ನು ಮನೆಯಿಂದ ಹೊರಗಟ್ಟಿದ ಪತಿ

19 Feb 2023 4:20 PM IST
share
ಗರ್ಭನಿರೋಧಕ ಶಸ್ತ್ರಚಿಕಿತ್ಸೆ ಮಾಡಿಕೊಂಡದ್ದಕ್ಕೆ 11 ಮಕ್ಕಳ ತಾಯಿಯನ್ನು ಮನೆಯಿಂದ ಹೊರಗಟ್ಟಿದ ಪತಿ

ಕಿಯೋಂಝಾರ್: ತನ್ನ ಇಚ್ಛೆಗೆ ವಿರುದ್ಧವಾಗಿ ಶಾಶ್ವತ ಗರ್ಭನಿರೋಧಕ ಶಸ್ತ್ರಚಿಕಿತ್ಸೆಗೆ ಒಳಗಾದ ಬುಡಕಟ್ಟು ಸಮುದಾಯದ 11 ಮಕ್ಕಳ ತಾಯಿಯನ್ನು ಆಕೆಯ ಪತಿ ಮನೆಯಿಂದ ಹೊರ ಹಾಕಿರುವ ಘಟನೆ ಒಡಿಶಾದ ಕಿಯೋಂಝಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ndtv.com ವರದಿ ಮಾಡಿದೆ.

ಮೂರು ದಿನಗಳ ಹಿಂದೆ ತನ್ನನ್ನು ತನ್ನ ಪತಿ ಮನೆಯಿಂದ ಹೊರ ಹಾಕಿದ ನಂತರ ಜಾನಕಿ ಡೆಹುರಿ ಎಂಬ ಮಹಿಳೆಯು ತನ್ನ ಕೆಲವು ಮಕ್ಕಳೊಂದಿಗೆ ಡಿಮಿರಿಯಾ ಗ್ರಾಮದಲ್ಲಿರುವ ತನ್ನ ಮನೆಯೆದುರು ವಾಸಿಸುತ್ತಿದ್ದಾಳೆ ಎಂದು ವರದಿಯಾಗಿದೆ.

ಪ್ರತಿ ವರ್ಷ ಮಕ್ಕಳಿಗೆ ಜನ್ಮ ನೀಡುವುದರಿಂದ ಆಗುವ ಪ್ರತಿಕೂಲ ಪರಿಣಾಮದ ಕುರಿತು ಸ್ಥಳೀಯ ಆಶಾ ಕಾರ್ಯಕರ್ತೆಯೊಬ್ಬರು ಆಕೆಗೆ ಮನವರಿಕೆ ಮಾಡಿಕೊಟ್ಟ ನಂತರ ಜಾನಕಿ ಡೆಹುರಿ ಶಾಶ್ವತ ಗರ್ಭನಿರೋಧಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ವಿವಾಹವಾದ ಹನ್ನೊಂದು ವರ್ಷಗಳ ಅವಧಿಯಲ್ಲಿ ಆಕೆ ಹನ್ನೊಂದು ಮಕ್ಕಳಿಗೆ ಜನ್ಮ ನೀಡಿದ್ದು, ಈ ಪೈಕಿ ಓರ್ವ ಮಗು ಮೃತಪಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಾನಕಿ ಡೆಹುರಿ, "ನನ್ನ ಮಕ್ಕಳೆಲ್ಲ ಬೆಳೆಯುತ್ತಿರುವ ಹೊತ್ತಿನಲ್ಲಿ ಪ್ರತಿ ವರ್ಷ ಗರ್ಭಿಣಿಯಾಗುವುದು ನನಗೆ ಮುಜುಗರದ ಸಂಗತಿಯಾಗಿದೆ. ಗ್ರಾಮದ ಹಲವಾರು ಮಹಿಳೆಯರು ಗರ್ಭನಿರೋಧಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ, ನನ್ನ ಪತಿಗೆ ಮಾತ್ರ ಇದು ಅರ್ಥವಾಗಿಲ್ಲ ಮತ್ತು ನನ್ನನ್ನು ಮನೆಯಿಂದ ಹೊರಗೆ ದೂಡಿದ್ದಾನೆ" ಎಂದು ಅಳಲು ತೋಡಿಕೊಂಡಿದ್ದಾರೆ.

ಮತ್ತೊಂದೆಡೆ ಆಕೆಯ ಪತಿ ರಾಬಿ, ನನ್ನ ಪತಿ ಗರ್ಭನಿರೋಧಕ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೂಲಕ ಅಪರಾಧವೆಸಗಿದ್ದಾಳೆ ಎಂದು ಪ್ರತಿಪಾದಿಸಿದ್ದಾನೆ. "ನಾವು ಭುಯಾನ್ ಸಮುದಾಯಕ್ಕೆ ಸೇರಿದ್ದು, ನಮ್ಮ ಸಮುದಾಯದ ನಂಬಿಕೆ ಪ್ರಕಾರ, ಮಹಿಳೆಯರು ಗರ್ಭನಿರೋಧಕ ಶಸ್ತ್ರಚಿಕಿತ್ಸೆಗೆ ಒಳಗಾದರೆ ನಮ್ಮ ಮುತ್ತಾತಂದಿರಿಗೆ ನೀರು ದೊರೆಯುವುದಿಲ್ಲ. ನಾನು ಇಂತಹ ಶಸ್ತ್ರಚಿಕಿತ್ಸೆಗೆ ಬಲವಾಗಿ ವಿರೋಧಿಸಿದ್ದೆ" ಎಂದು ಹೇಳಿದ್ದಾನೆ.

ಸತತವಾಗಿ ಗರ್ಭಿಣಿಯಾಗುತ್ತಿರುವುದರಿಂದ ಆಕೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿತ್ತು ಎಂದು ಜಾನಕಿ ಡೆಹುರಿಗೆ ಗರ್ಭನಿರೋಧಕ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಮನವೊಲಿಸಿದ ಆಶಾ ಕಾರ್ಯಕರ್ತೆ ಬಿಜಯ್‌ಲಕ್ಷ್ಮಿ ಬಿಸ್ವಾಲ್ ತಿಳಿಸಿದ್ದಾರೆ.

ಈ ನಡುವೆ, ತೆಲ್ಕೋಯಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರೀತೀಶ್ ಆಚಾರ್ಯ ಅವರು ಪರಿಸ್ಥಿತಿಯನ್ನು ರಾಬಿಗೆ ಮನವರಿಕೆ ಮಾಡಿಕೊಟ್ಟು, ಆತನ ಪತ್ನಿಯನ್ನು ಸ್ವೀಕರಿಸುವಂತೆ ಮಾಡಲು ಪ್ರಯತ್ನ ನಡೆಸಿದ್ದಾರೆ.

share
Next Story
X