Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಂದೆಗೆ ತನ್ನ ಯಕೃತ್ತಿನ ಭಾಗ ನೀಡಿದ...

ತಂದೆಗೆ ತನ್ನ ಯಕೃತ್ತಿನ ಭಾಗ ನೀಡಿದ ಬಾಲಕಿ ಭಾರತದ ಅತ್ಯಂತ ಕಿರಿಯ ಅಂಗಾಂಗ ದಾನಿ

19 Feb 2023 4:24 PM IST
share
ತಂದೆಗೆ ತನ್ನ ಯಕೃತ್ತಿನ ಭಾಗ ನೀಡಿದ ಬಾಲಕಿ ಭಾರತದ ಅತ್ಯಂತ ಕಿರಿಯ ಅಂಗಾಂಗ ದಾನಿ

ತೃಶ್ಶೂರು,ಫೆ.19: ಕೇರಳದ 17ರ ಹರೆಯದ ಬಾಲಕಿ ದೇವಾನಂದಾ ತನ್ನ ಯಕೃತ್ತಿನ ಭಾಗವನ್ನು ತನ್ನ ತಂದೆಗೆ ದಾನ ನೀಡುವ ಮೂಲಕ ಭಾರತದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.

ಮಾನವ ಅಂಗ ಕಸಿ ಕಾಯ್ದೆ,1994 ಅಪ್ರಾಪ್ತ ವಯಸ್ಕರು ಅಂಗಾಂಗ ದಾನ ಮಾಡಲು ಅನುಮತಿಸುವುದಿಲ್ಲ,ಹೀಗಾಗಿ 12ನೇ ತರಗತಿಯ ವಿದ್ಯಾರ್ಥಿನಿ ದೇವಾನಂದಾ ವಿನಾಯಿತಿಯನ್ನು ಕೋರಿ ಕೇರಳ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಳು.

ನ್ಯಾಯಾಲಯದ ಸಮ್ಮತಿಯ ಮೇರೆಗೆ ದೇವಾನಂದಾ ದೀರ್ಘಕಾಲಿಕ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ತನ್ನ ತಂದೆ ಪ್ರತೀಶರ ಜೀವವನ್ನು ಉಳಿಸಿಕೊಳ್ಳಲು ಫೆ.19ರಂದು ಅವರಿಗೆ ತನ್ನ ಯಕೃತ್ತಿನ ಭಾಗವನ್ನು ದಾನ ಮಾಡಿದ್ದಾಳೆ. 48ರ ಹರೆಯದ ಪ್ರತೀಶ ತೃಶ್ಶೂರಿನಲ್ಲಿ ಹೋಟೆಲ್ ನಡೆಸುತ್ತಿದ್ದಾರೆ.
ದಾನ ಮಾಡಲು ತನ್ನ ಯಕೃತ್ತು ಅತ್ಯುತ್ತಮ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ತನ್ನ ಆಹಾರ ಕ್ರಮದಲ್ಲಿ ತೀವ್ರ ಬದಲಾವಣೆ ಮಾಡಿಕೊಂಡಿದ್ದ ದೇವಾನಂದಾ ಸ್ಥಳೀಯ ಜಿಮ್ಗೂ ಸೇರಿದ್ದಳು.

ಯಕೃತ್ತು ಕಸಿ ಶಸ್ತ್ರಚಿಕಿತ್ಸೆ ಅಲುವಾದ ರಾಜಗಿರಿ ಆಸ್ಪತ್ರೆಯಲ್ಲಿ ನಡೆದಿದೆ. ತಂದೆಯನ್ನು ಉಳಿಸಿಕೊಳ್ಳಲು ದೇವಾನಂದಾಳ ಪ್ರಯತ್ನಗಳನ್ನು ಮೆಚ್ಚಿದ ಆಸ್ಪತ್ರೆಯು ಶಸ್ತ್ರಚಿಕಿತ್ಸೆಯ ಶುಲ್ಕಗಳನ್ನು ಮನ್ನಾ ಮಾಡಿದೆ.

ಒಂದು ವಾರದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ದೇವಾನಂದಾ,ತನಗೆ ಹೆಮ್ಮೆಯಿದೆ,ಸಂತಸವಾಗಿದೆ ಮತ್ತು ನಿರಾಳವಾಗಿದ್ದೇನೆ ಎಂದು ಹೇಳಿದಳು. ನೆಮ್ಮದಿಯ ಜೀವನ ನಡೆಸುತ್ತಿದ್ದ ಪ್ರತೀಶರಿಗೆ ತನಗೆ ಯಕೃತ್ತಿನ ಕ್ಯಾನ್ಸರ್ ಇದೆ ಎನ್ನುವುದು ಗೊತ್ತಾದಾಗ ಆಕಾಶವೇ ಕಳಚಿ ತಲೆಯ ಮೇಲೆ ಬಿದ್ದಂತಾಗಿತ್ತು.

ಯಕೃತ್ತು ಕಸಿ ಅವರನ್ನುಳಿಸಲು ಏಕಮೇವ ಮಾತ್ರವಾಗಿತ್ತು. ಆದರೆ ಸೂಕ್ತ ದಾನಿಯನ್ನು ಹುಡುಕುವ ಕುಟುಂಬದ ಎಲ್ಲ ಪ್ರಯತ್ನಗಳು ವಿಫಲವಾದಾಗ ತನ್ನ ಯಕೃತ್ತಿನ ಭಾಗವನ್ನೇ ತಂದೆಗೆ ದಾನ ಮಾಡಲು ದೇವಾನಂದಾ ನಿರ್ಧರಿಸಿದ್ದಳು. ಆದರೆ ತಾನು ಅಪ್ರಾಪ್ತ ವಯಸ್ಕಳಾಗಿರುವುದರಿಂದ ಕಾನೂನಿನಲ್ಲಿ ಅದಕ್ಕೆ ಅವಕಾಶ ಇಲ್ಲ ಎನ್ನುವುದು ಗೊತ್ತಾದಾಗ ಎಲ್ಲ ಸಾಧ್ಯತೆಗಳನ್ನೂ ಅನ್ವೇಷಿಸಿದ್ದಳು.

ಅಂತರ್ಜಾಲವನ್ನು ಜಾಲಾಡಿದಾಗಿ ನ್ಯಾಯಾಲಯವೊಂದು ಅಪ್ರಾಪ್ತ ವಯಸ್ಕ ಮಗುವೊಂದರಿಂದ ಅಂಗದಾನಕ್ಕೆ ಅನುಮತಿ ನೀಡಿದ್ದನ್ನು ಕಂಡುಕೊಂಡಿದ್ದಳು. ಇದನ್ನು ನಿದರ್ಶನವಾಗಿಟ್ಟುಕೊಂಡು ದೇವಾನಂದಾ ಕೇರಳ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಳು.

ಅಂಗದಾನಕ್ಕೆ ದೇವಾನಂದಾಗೆ ಅನುಮತಿ ನೀಡಿದ ಸಂದರ್ಭ ನ್ಯಾಯಾಲಯವು ಎಲ್ಲ ಅಡೆತಡೆಗಳ ವಿರುದ್ಧ ಆಕೆಯ ಹೋರಾಟವನ್ನು ಪ್ರಶಂಸಿಸಿತ್ತು.

share
Next Story
X