ಕೊಣಾಜೆ: ಕೆಎಸ್ಆರ್ಪಿ ಪೇದೆ ಆತ್ಮಹತ್ಯೆ

ಕೊಣಾಜೆ: ಅಸೈಗೋಳಿ ಕೆಎಸ್ಆರ್ಪಿಯ ಏಳನೇ ಬೆಟಾಲಿಯನ್ ನ ನೂತನ ಬ್ಯಾಚ್ ಪೊಲೀಸ್ ಪೇದೆ ಬಾಡಿಗೆ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಅಸೈಗೋಳಿ ಸೈಟ್ ನಲ್ಲಿ ನಡೆದಿದೆ.
ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಮೃತರು ಎಂದು ತಿಳಿದುಬಂದಿದೆ.
ತಿಂಗಳ ಹಿಂದಷ್ಟೇ ತಾಯಿ ತೀರಿಕೊಂಡ ನಂತರ ದು:ಖದಲ್ಲಿದ್ದ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ನೂತನ ಬ್ಯಾಚ್ ನವರಾಗಿದ್ದ ವಿಮಲನಾಥ್ ಇಂದು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story