Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ಕನ್ನಡ ಅಕಾಡೆಮಿ, ಪೀಠ ಸ್ಥಾಪನೆ...

ಕುಂದಾಪುರ ಕನ್ನಡ ಅಕಾಡೆಮಿ, ಪೀಠ ಸ್ಥಾಪನೆ ಅಗತ್ಯ: ಸಾಹಿತಿ ಕೋ.ಶಿ.ಕಾರಂತ

ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

19 Feb 2023 8:55 PM IST
share
ಕುಂದಾಪುರ ಕನ್ನಡ ಅಕಾಡೆಮಿ, ಪೀಠ ಸ್ಥಾಪನೆ ಅಗತ್ಯ: ಸಾಹಿತಿ ಕೋ.ಶಿ.ಕಾರಂತ
ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಗಂಗೊಳ್ಳಿ: ಅಪಾರ ಸಾಹಿತ್ಯಿಕ, ಸಾಂಸ್ಕೃತಿಕ ಸಂಪತ್ತು ಹೊಂದಿರುವ 25 ಲಕ್ಷಕ್ಕೂ ಅಧಿಕ ಮಂದಿ ಮಾತನಾಡುವ ಕುಂದಾಪುರ ಭಾಷೆಗೆ ಸರಕಾರ ವಿಶೇಷವಾದ ಸ್ಥಾನಮಾನ ನೀಡಬೇಕು. ಕುಂದಾಪುರ ಕನ್ನಡ ಅಕಾಡೆಮಿ ಹಾಗೂ ಕುಂದಾಪುರ ಕನ್ನಡ ಪೀಠ ಸ್ಥಾಪನೆಯಾಗಬೇಕು ಎಂದು ಸಾಹಿತಿ ಕೋ.ಶಿ.ಕಾರಂತ ಹೇಳಿದ್ದಾರೆ.

ಗಂಗೊಳ್ಳಿ ಸರಸ್ವತಿ ಪದವಿ ಪೂರ್ವ ವಿದ್ಯಾಲಯದ ಆವರಣದಲ್ಲಿ ರವಿವಾರ ನಡೆದ ಕುಂದಾಪುರ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈ ವಿಚಾರದಲ್ಲಿ ನಮ್ಮ ಶಾಸಕರು, ಜನಪ್ರತಿನಿಧಿಗಳು ಗಂಭೀರವಾಗಿ ಪ್ರಯತ್ನ ನಡೆಸದಿರುವುದು ಬೇಸರ ತರುತ್ತದೆ. ಯುವ ಸಮುದಾಯದ ಈ ವಿಷಯದಲ್ಲಿ ಹೋರಾಟ ನಡೆಸಬೇಕು ಎಂದರು.

ಕನ್ನಡಿಗರು ಕನ್ನಡವನ್ನು ಎಂದಿಗೂ ದುರ್ಬಲವಾಗಲು ಬಿಡಬಾರದು. ಯಾವ ಮಾಧ್ಯಮದರಲ್ಲಿ ಮಕ್ಕಳು ಕಲಿತರೂ ಮಾತೃ ಭಾಷೆಯನ್ನು ಮರೆಯಬಾರದು. ಕರಾವಳಿ ಪ್ರದೇಶದ ಪ್ರವಾಸೋದ್ಯಮಕ್ಕಾಗಿ ಅಭಿವೃದ್ಧಿಗೊಳಿಸಿ ಆದಷ್ಟು ಕನ್ನಡಿಗ ಯುವ ಜನರಿಗೆ ಉದ್ಯೋಗಾವಕಾಶ ದೊರಕುವಂತಾಗಬೇಕು ಎಂದು ಅವರು ತಿಳಿಸಿದರು.

ಸಮ್ಮೇಳನವನ್ನು ಉದ್ಘಾಟಿಸಿದ ಉದ್ಯಮಿ ಜಗನ್ನಾಥ ವಿ.ಪೈ ಗಂಗೊಳ್ಳಿ ಮಾತನಾಡಿ, ಸರಕಾರ ಕನ್ನಡ ಕಲಿಕೆ ಕಡ್ಡಾಯ ಮಾಡದಿರುವುದು ದುರದೃಷ್ಟ. ಹಳ್ಳಿಗಳಲ್ಲಿ ಇದ್ದಷ್ಟೂ ಭಾಷಾಭಿಮಾನ ನಗರಗಳಲ್ಲಿ ಇಲ್ಲ ಎಂದು ಹೇಳಿದರು.

ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪುಸ್ತಕ ಬಿಡುಗಡೆಗೊಳಿಸಿ ದರು. ಸಾಹಿತಿ ಬೆಳಗೋಡು ರಮೇಶ್ ಭಟ್ ಕಾರಂತರ ಪರಿಚಯ, ಅಭಿನಂದನೆ ಮಾಡಿದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎ.ಎಸ್.ಎನ್.ಹೆಬ್ಬಾರ್, ಕುಸುಮಾ ಕಾರಂತ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಚ್.ಗಣೇಶ ಕಾಮತ್, ಕಾರ್ಯದರ್ಶಿ ಯು.ಎಸ್.ಶೆಣೈ, ಕಾಲೇಜಿನ ಪ್ರಾಂಶುಪಾಲೆ ಎಂ.ಸಿ.ಕವಿತಾ, ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಮನೋಹರ್ ಪಿ., ಕಸಾಪ ಬೈಂದೂರು ಅಧ್ಯಕ್ಷ ಡಾ. ರಘು ನಾಯ್ಕ್, ಕಾರ್ಕಳ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಬ್ರಹ್ಮಾವರ ಅಧ್ಯಕ್ಷ ರಾಮಚಂದ್ರ ಐತಾಳ್, ಅಕ್ಷತಾ ಗಿರಿಶ್ ಉಪಸ್ಥಿತರಿದ್ದರು.

ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ಕುಂದಾಪುರ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಸ್ವಾಗತಿಸಿದರು. ಕಾರ್ಯದರ್ಶಿ ದಿನಕರ ಶೆಟ್ಟಿ ನಿರೂಪಿಸಿದರು. ಮಂಜುನಾಥ ಕೆ.ಎಸ್. ವಂದಿಸಿದರು.

‘ಕುಂದಾಪುರ ಕನ್ನಡ ಜನರು ಸಾಹಿತ್ಯ, ಕ್ರೀಡೆ, ಚಲನಚಿತ್ರ, ರಂಗಭೂಮಿ, ಹೊಟೇಲು, ಕೈಗಾರಿಕೋದ್ಯಮ, ಬ್ಯಾಂಕಿಂಗ್, ಶಿಕ್ಷಣ, ವೈದ್ಯಕೀಯ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದು, ಇವೆಲ್ಲವನ್ನು ತಿಳಿಸುವ ಅಪೂರ್ವವಾದ ವಸ್ತು ಪ್ರದರ್ಶನ ಕೇಂದ್ರ ಸ್ಥಾಪನೆಗೊಳ್ಳಬೇಕು. ಶ್ರೇಷ್ಠ ಕವಿಗಳಾಗಿ ಕರ್ನಾಟಕಕ್ಕೆ ಕೀರ್ತಿ ತಂದ ಮೊಗೇರಿ ಗೋಪಾಲಕೃಷ್ಣ ಅಡಿಗರ ಹೆಸರಿನಲ್ಲಿ ಬಹುಪಯೋಗಿ ಭವನ ನಿರ್ಮಾಣ ಕಾರ್ಯ ಶೀಘ್ರ ಆಗಬೇಕಾಗಿದೆ’
-ಕೋ.ಶಿ.ಕಾರಂತ, ಸಮ್ಮೇಳನಾಧ್ಯಕ್ಷರು

share
Next Story
X