Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಲೂನು ಪ್ರಕರಣದಲ್ಲಿ ಅಮೆರಿಕದ ಅತಿರೇಕದ...

ಬಲೂನು ಪ್ರಕರಣದಲ್ಲಿ ಅಮೆರಿಕದ ಅತಿರೇಕದ ವರ್ತನೆ: ಬ್ಲಿಂಕೆನ್ ಜತೆಗಿನ ಚರ್ಚೆಯಲ್ಲಿ ವಾಂಗ್ಯಿ ಹೇಳಿಕೆ

19 Feb 2023 10:47 PM IST
share
ಬಲೂನು ಪ್ರಕರಣದಲ್ಲಿ ಅಮೆರಿಕದ ಅತಿರೇಕದ ವರ್ತನೆ: ಬ್ಲಿಂಕೆನ್ ಜತೆಗಿನ ಚರ್ಚೆಯಲ್ಲಿ ವಾಂಗ್ಯಿ ಹೇಳಿಕೆ

ಬೀಜಿಂಗ್, ಫೆ.19: ಅಮೆರಿಕದ ವಾಯುಪ್ರದೇಶದಲ್ಲಿ ಕಂಡುಬಂದ ಚೀನಾದ ಬಲೂನಿನ ಪ್ರಕರಣವನ್ನು ಅಮೆರಿಕ ಸೂಕ್ತವಾಗಿ ನಿರ್ವಹಿಸದೆ, ಅನಗತ್ಯ ಬಲಪ್ರಯೋಗಿಸಿದ್ದರಿಂದ ಚೀನಾ-ಅಮೆರಿಕ  ದ್ವಿಪಕ್ಷೀಯ ಸಂಬಂಧಕ್ಕೆ ತೀವ್ರ ಹಾನಿಯಾಗಿದೆ ಎಂದು ಚೀನಾ ರವಿವಾರ ಆಕ್ರೋಶ ವ್ಯಕ್ತಪಡಿಸಿದೆ.

ಜರ್ಮನಿಯ ಮ್ಯೂನಿಚ್ ನಲ್ಲಿ ನಡೆಯುತ್ತಿರುವ 59ನೇ ಮ್ಯೂನಿಚ್ ಭದ್ರತಾ ಸಮಾವೇಶದ ನೇಪಥ್ಯದಲ್ಲಿ ವಾಂಗ್ ಯಿ(Wang Yi) ಹಾಗೂ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ (Antony Blinken) ನಡುವೆ ನಡೆದ ಮಾತುಕತೆ ಸಂದರ್ಭ ಬಲೂನು ಪ್ರಕರಣದ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

ವಿಶ್ವದಾದ್ಯಂತ ಹಲವು ಬಲೂನುಗಳು ಹಾರಾಟ ನಡೆಸುತ್ತಿವೆ. ಅವೆಲ್ಲವನ್ನೂ ಅಮೆರಿಕ ಹೊಡೆದುರುಳಿಸುತ್ತದೆಯೇ?  ಚೀನಾದ ನಾಗರಿಕ ಉದ್ದೇಶದ ಬಲೂನನ್ನು ಅನವಶ್ಯಕವಾಗಿ ಹೊಡೆದುರುಳಿಸಿರುವುದು ಅಸಂಬದ್ಧ ಕೃತ್ಯವಾಗಿದೆ. ದುರದೃಷ್ಟವಶಾತ್ ಅಮೆರಿಕ ಮೂಲಭೂತ ವಿಷಯಗಳನ್ನು ನಿರ್ಲಕ್ಷಿಸಿತು ಮತ್ತು ಬೆದರಿಕೆಯಲ್ಲದ ವಾಯುನೌಕೆಯನ್ನು ಕ್ಷಿಪಣಿಯಿಂದ ಹೊಡೆದುರುಳಿಸುವ ಮೂಲಕ ಉನ್ಮಾದಕರ ರೀತಿಯಲ್ಲಿ ವರ್ತಿಸಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾದ ವಿದೇಶಾಂಗ ವ್ಯವಹಾರ ವಿಭಾಗದ ನಿರ್ದೇಶಕ ವಾಂಗ್ ಯಿ ಹೇಳಿದ್ದಾರೆ.

`ಬಲೂನು ಪ್ರಕರಣದಲ್ಲಿ ಅಮೆರಿಕದ ಅತಿರೇಕದ ವರ್ತನೆ ಮತ್ತು ಅನಗತ್ಯ ಬಲಪ್ರಯೋಗದಿಂದ ಉಭಯ ದೇಶಗಳ ನಡುವಿನ ಸಂಬಂಧಕ್ಕೆ ಆಗಿರುವ ಹಾನಿಯನ್ನು ಅರಿತುಕೊಂಡು ಅದನ್ನು ಸರಿಪಡಿಸುವ ಕೆಲಸವನ್ನು ಅಮೆರಿಕ ಮಾಡಬೇಕಿದೆ . ಅಮೆರಿಕವು ಚೀನಾದ ಬಗ್ಗೆ ಸಕಾರಾತ್ಮಕ ಮತ್ತು ಪ್ರಾಯೋಗಿಕ ನೀತಿಯನ್ನು ಅನುಸರಿಸಬಹುದು ಮತ್ತು ಚೀನಾ-ಅಮೆರಿಕ ಸಂಬಂಧವನ್ನು ಆರೋಗ್ಯಕರ, ಅಭಿವೃದ್ಧಿಯ  ಹಾದಿಗೆ ಮರಳಿಸಲು ಚೀನಾದೊಂದಿಗೆ ಕೆಲಸ ಮಾಡಬಹುದು ಎಂದು ನಾವು ಭಾವಿಸುತ್ತೇವೆ' ಎಂದು ವಾಂಗ್ ಯಿ ಆಗ್ರಹಿಸಿರುವುದಾಗಿ ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ಬೇಜವಾಬ್ದಾರಿಯ ಕೃತ್ಯ: ಅಮೆರಿಕ ಪ್ರತಿಕ್ರಿಯೆ

ಬಲೂನು ಪ್ರಕರಣದಲ್ಲಿ ಅಮೆರಿಕ ಉನ್ಮಾದಕರ ರೀತಿಯಲ್ಲಿ ವರ್ತಿಸಿದೆ ಎಂಬ ಚೀನಾದ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್, ಇಂತಹ ಬೇಜವಾಬ್ದಾರಿಯ ಕೃತ್ಯವನ್ನು ಚೀನಾ ಪುನರಾವರ್ತಿಸಬಾರದು ಎಂದು ಆಗ್ರಹಿಸಿದ್ದಾರೆ.

ಜರ್ಮನಿಯ ಮ್ಯೂನಿಚ್ ನಲ್ಲಿ ನಡೆಯುತ್ತಿರುವ 59ನೇ ಮ್ಯೂನಿಚ್ ಭದ್ರತಾ ಸಮಾವೇಶದ ನೇಪಥ್ಯದಲ್ಲಿ ಚೀನಾದ ಉನ್ನತ ಅಧಿಕಾರಿ ವಾಂಗ್ ಯಿ ಜತೆ ನಡೆಸಿದ ಸಭೆಯ ಸಂದರ್ಭ ಬ್ಲಿಂಕೆನ್ ಬಲೂನು ಹೊಡೆದುರುಳಿಸಿದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

ನಮ್ಮ ಸಾರ್ವಭೌಮತೆಗೆ ಧಕ್ಕೆಯಾಗುವ ಯಾವುದೇ ಕೃತ್ಯವನ್ನೂ ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಬ್ಲಿಂಕೆನ್ ಸ್ಪಷ್ಟಪಡಿಸಿದ್ದಾರೆ. ಚೀನಾದ ಬಲೂನು ಕಣ್ಗಾವಲು ಕಾರ್ಯಕ್ರಮವು 5 ಖಂಡಗಳಾದ್ಯಂತ ಸುಮಾರು 40ಕ್ಕೂ ಅಧಿಕ ದೇಶಗಳ ವಾಯುಕ್ಷೇತ್ರವನ್ನು ಉಲ್ಲಂಘಿಸಿದೆ ಮತ್ತು ಚೀನಾದ ಕೃತ್ಯವನ್ನು ಜಾಗತಿಕ ಸಮುದಾಯದ ಎದುರು ತೆರೆದಿಟ್ಟಿದೆ ಎಂದು ಬ್ಲಿಂಕೆನ್ ಪ್ರತಿಪಾದಿಸಿದರು ಎಂದು ವರದಿಯಾಗಿದೆ.

share
Next Story
X