Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆ ಅಧಿಕಾರಿ ಎಲ್ಲಿ ಹೋದರೂ ವಿವಾದವೇ..:...

ಆ ಅಧಿಕಾರಿ ಎಲ್ಲಿ ಹೋದರೂ ವಿವಾದವೇ..: ಮಹಿಳಾ ಅಧಿಕಾರಿಗಳ ಜಟಾಪಟಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಎಚ್ ಡಿಕೆ

''ಸರಕಾರ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡಿದೆ''

20 Feb 2023 12:41 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆ ಅಧಿಕಾರಿ ಎಲ್ಲಿ ಹೋದರೂ ವಿವಾದವೇ..: ಮಹಿಳಾ ಅಧಿಕಾರಿಗಳ ಜಟಾಪಟಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಎಚ್ ಡಿಕೆ
''ಸರಕಾರ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡಿದೆ''

ಬೆಂಗಳೂರು: 'ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೂಡಲೇ ಮುಖ್ಯ ಕಾರ್ಯದರ್ಶಿ ಅವರು ಇಬ್ಬರು ಅಧಿಕಾರಿಗಳ ಮೇಲೆ ಚಾಟಿ ಬೀಸಿ ಸಮಸ್ಯೆ ಬಗೆಹರಿಸಬೇಕು' ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮುಖ್ಯ ಕಾರ್ಯದರ್ಶಿ ಕೂಡಲೇ ಇಬ್ಬರನ್ನು ಕರೆದು ಎಚ್ಚರಿಕೆ ನೀಡಬೇಕು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಸರಕಾರ ಇದೆಯಾ? ಇಲ್ಲವಾ? ಎನ್ನುವ ಅನುಮಾನ ಉಂಟಾಗಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ದೇವಮಾನವರು ಎಂದು ಕರೆದಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಅವರು, ಇದರಿಂದ ಜನತೆಗೆ ಯಾವ ಸಂದೇಶ ಕೊಡುತ್ತಿದ್ದಾರೆ ಅವರು ಎಂದು ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಸರಕಾರ ಇಲ್ಲದ ಶೂನ್ಯ ಸ್ಥಿತಿ ಇದೆ ಎನ್ನುವ ಭಾವನೆ ಬರುತ್ತಿದೆ. ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ನಾನು ಕೂಡ ಸರಕಾರವನ್ನು ನಡೆಸಿದ್ದೇನೆ. ಆಗೆಲ್ಲ ಹೀಗೆ ಆಗಲು ಬಿಟ್ಟಿರಲಿಲ್ಲ ಎಂದರು ಕುಮಾರಸ್ವಾಮಿ ಅವರು.

ಅಧಿಕಾರಿಗಳಿಗೆ ಒಂದಿಷ್ಟು ಮಾರ್ಗಸೂಚಿಗಳು, ನಿಯಮಾವಳಿಗಳು ಇವೆ. ಅವರು ಜನತೆಗೆ ಉತ್ತರದಾಯಿ ಆಗಿರಬೇಕು. ಅವರು ಸೋಷಿಯಲ್ ಮೀಡಿಯಾದಲ್ಲಿ ಹಾದಿ ರಂಪ ಬೀದಿ ರಂಪ ಮಾಡಿಕೊಳ್ಳುವ ಬದಲು ಮುಖ್ಯ ಕಾರ್ಯದರ್ಶಿ ಬಳಿ ಹೋಗಿ ಸಮಸ್ಯೆ ಪರಿಹಾರ ಮಾಡಿಕೊಳ್ಳಬಹುದಿತ್ತು. ಇದೊಂದೇ ಅಲ್ಲ, ಅನೇಕ ಪ್ರಕರಣಗಳು ನಡೆದಿವೆ. ಅಧಿಕಾರಿಗಳಿಗೆ ಸರ್ಕಾರದ ಮೇಲೆ ಗೌರವ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗೃಹ ಸಚಿವರು ಸರಕಾರಿ ಅಧಿಕಾರಿಗಳನ್ನು ದೇವ ಮಾನವರು ಅಂತಾರೆ. ಹಾಗೆಂದರೆ ಏನರ್ಥ? ಅವರೇನು ಇಂದ್ರಲೋಕದಿಂದ ಇಳಿದು ಬಂದವರಾ? ಇದೆಲ್ಲಾ ವಿಚಾರಗಳು ನನಗೆ ಗೊತ್ತಿದೆ. ಸಾರಾ ಮಹೇಶ್ ಅವರ ಮೇಲೆ ಒಬ್ಬ ಮಹಿಳಾ ಅಧಿಕಾರಿ ಆರೋಪ ಮಾಡಿದ್ದು ಗೊತ್ತಿದೆ, ಆ ಅಧಿಕಾರಿ ಎಲ್ಲಿ ಹೋದರೂ ವಿವಾದವೇ. ಯಾಕೆ ಬೇಕು ಇಂಥ ವಿವಾದಗಳು? ನನಗೆ ಗೊತ್ತಿರುವ ಕೆಲ ಮಾಹಿತಿಗಳನ್ನು ಹೊರಗೆ ಇಟ್ಟರೆ ಸರಕಾರಕ್ಕೆ ತಲೆ ಎತ್ತಿ ನಿಲ್ಲಲು ಆಗುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸಾರಾ ಮಹೇಶ್ ಅವರು ಆ ಮಹಿಳಾ ಅಧಿಕಾರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಿದಾಗ, ಆ ಅಧಿಕಾರರಿಯ ಪರವಾಗಿ ಯಾರೆಲ್ಲ, ಹೇಗೆಲ್ಲಾ ಒತ್ತಡ ಹಾಕಿದರು, ಎಂತೆಂಥ ಹುದೆಯಲ್ಲಿದ್ದವರು ಪ್ರಭಾವ ಬೀರಿದರು ಎನ್ನುವುದು ನನಗೆ ಗೊತ್ತಿದೆ. ಕೊನೆಗೆ ನಾನೇ ಸಾರಾ ಮಹೇಶ್ ಅವರಿಗೆ, ಹೋಗಲಿ.. ಬಿಟ್ಟು ಬಿಡಿ ಎಂದು ಹೇಳಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಡಬಲ್ ಎಂಜಿನ್ ಸರಕಾರದಲ್ಲಿ ಇದೆಲ್ಲಾ ಎಗ್ಗಿಲ್ಲದೆ ನಡೆಯುತ್ತಿದೆ. ಒಂದೆಡೆ ರಾಜ್ಯದಿಂದ ಕೈಗಾರಿಕೆಗಳು ಬೇರೆ ರಾಜ್ಯದ ಪಾಲಾಗುತ್ತಿವೆ. ಇಲ್ಲಿ ನೋಡಿದರೆ ಅಧಿಕಾರಿಗಳು ಕಿತ್ರಾಡಿಕೊಳ್ಳುತ್ತಿದ್ದಾರೆ. ಎಲೆಕ್ಟ್ರಿಕ್ ಬಸ್ ಯೋಜನೆ ಎಲ್ಲಿಗೆ ಹೋಯ್ತು? ತಮಿಳುನಾಡಿಗೆ ಹೋಗಿದೆ ಅದು. ಸರಕಾರಕ್ಕೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ ಎಂದು ಅವರು ಕಿಡಿ ಕಾರಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X