Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸದನದಲ್ಲಿ ಆಡಳಿತ-ವಿಪಕ್ಷ ಸದಸ್ಯರ ನಡುವೆ...

ಸದನದಲ್ಲಿ ಆಡಳಿತ-ವಿಪಕ್ಷ ಸದಸ್ಯರ ನಡುವೆ ‘ಭ್ರಷ್ಟಾಚಾರ’ದ ವಾಗ್ವಾದ: ಯಾವುದೇ ತನಿಖೆಗೆ ಸಿದ್ಧ ಎಂದ ಸಿಎಂ ಬೊಮ್ಮಾಯಿ

20 Feb 2023 7:57 PM IST
share
ಸದನದಲ್ಲಿ ಆಡಳಿತ-ವಿಪಕ್ಷ ಸದಸ್ಯರ ನಡುವೆ ‘ಭ್ರಷ್ಟಾಚಾರ’ದ ವಾಗ್ವಾದ: ಯಾವುದೇ ತನಿಖೆಗೆ ಸಿದ್ಧ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು, ಫೆ. 20: ‘ಡಬಲ್ ಎಂಜಿನ್ ಸರಕಾರ, ಶೇ.40ರಷ್ಟು ಕಮಿಷನ್ ಆರೋಪ, ಭ್ರಷ್ಟಾಚಾರ, ಲೋಕಾಯುಕ್ತ, ಎಸಿಬಿ’ ಸಹಿತ ಇನ್ನಿತರು ವಿಚಾರಗಳು ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಕೆಲಕಾಲ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ದೇಶದಲ್ಲೇ ಅತಿಹೆಚ್ಚು ಭ್ರಷ್ಟ ಸರಕಾರ ಎಂದು ಸಿದ್ದರಾಮಯ್ಯ ಆಡಳಿತವನ್ನು ಮೂರು ಸಮೀಕ್ಷೆಗಳು ತಿಳಿಸಿವೆ. ಕಾಂಗ್ರೆಸ್‍ನಿಂದ ಟೆಂಡರ್ ಶ್ಯೂರ್ ರಸ್ತೆಗೆ ಅನುಮತಿ ನೀಡುವಾಗ ಶೇ.48ಕ್ಕೂ ಹೆಚ್ಚು ಭ್ರಷ್ಟಾಚಾರ ನಡೆದಿತ್ತು. ಇವರು ನಮ್ಮ ಸರಕಾರದ ಶೇ.40 ಪಸೆರ್ಂಟ್ ಆರೋಪ ಮಾಡುತ್ತಿದ್ದಾರೆಂದು ಉಲ್ಲೇಖಿಸಿದರು.

ಇದಕ್ಕೆ ಆಕ್ಷೇಪಿಸಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ‘ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದು, ಕಾಂಗ್ರೆಸ್ ಪಕ್ಷವಲ್ಲ. ಬದಲಿಗೆ ಗುತ್ತಿಗೆದಾರರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು ಎಂದರು. ‘ಆತ ನಿಮ್ಮ ಪಕ್ಷ ಏಜೆಂಟ್’ ಎಂದು ಆಡಳಿತ ಪಕ್ಷದ ಸದಸ್ಯರು ದೂರಿದ್ದು, ಉಭಯ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ಗದ್ದಲಕ್ಕೆ ಅವಕಾಶ ಮಾಡಿತು.

ಈ ಮಧ್ಯೆ ಮಾತನಾಡಿದ ಬಸವರಾಜ ಬೊಮ್ಮಾಯಿ, ‘ರಾಜ್ಯಪಾಲರ ಭಾಷಣವನ್ನು ಸಿದ್ದರಾಮಯ್ಯ, ‘ತೌಡು ಕುಟ್ಟುವ ಭಾಷಣ’ ಎಂದಿದ್ದಾರೆ. ಆದರೆ, ‘ಅವರು ತಮ್ಮ ಅನುಭವವನ್ನು ಹೇಳಿದ್ದಾರೆ. ಆದರೆ, ನಾವು ಭತ್ತವನ್ನು ಕುಟ್ಟಿ ಅಕ್ಕಿ ತೆಗೆಯುವವರು’ ಎಂದು ಹೇಳಿದರು. ನಮ್ಮ ವಿರುದ್ಧ ಮಾಡಿದ ಯಾವುದೇ ಆರೋಪಕ್ಕೆ ದಾಖಲೆ ಮತ್ತು ದೂರನ್ನು ಏಕೆ ಕೊಟ್ಟಿಲ್ಲ. ಇವರ ಹಿಂದೆ ಯಾರಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಕಮಿಷನ್ ನಿಂತು ಹೋಯಿತಲ್ಲ ಎಂಬ ಸಂಕಟದಿಂದ ಹೀಗೆಲ್ಲ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಮಾತೇ ಒಂದು ದೊಡ್ಡ ಸುಳ್ಳು. ಕಾಂಗ್ರೆಸ್ ಅವಧಿಯಲ್ಲಿ ಗೋಲಿಬಾರ್‍ನಿಂದ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಚುನಾವಣೆ ಬಂದಾಗ ರೈತರ ಬಗ್ಗೆ ಪ್ರೀತಿ ಉಕ್ಕಿ ಹರಿಯುತ್ತಿದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ತನಿಖೆಗೆ ಸಿದ್ಧ: ‘ಸರಕಾರದ ವಿರುದ್ಧ ಸುಖಾ ಸುಮ್ಮನೆ ಆರೋಪ ಮಾಡುವುದಲ್ಲ, ದಾಖಲೆ ಇದ್ದರೆ ನೇರವಾಗಿ ಸರಕಾರದ ಬಳಿಗೆ ಬನ್ನಿ. ಅನಗತ್ಯವಾಗಿ ತಪ್ಪು ಹುಡುಕುವ ಕೆಲಸ ಬೇಡ, ಲೋಕಾಯುಕ್ತ ಸೇರಿದಂತೆ ಯಾವುದೇ ರೀತಿಯ ತನಿಖೆ ಮಾಡಲು ನಾವು ಸದಾ ಸಿದ್ಧ ಇದ್ದೇವೆ ಎಂದು ಬೊಮ್ಮಾಯಿ ಸವಾಲು ಹಾಕಿದರು.

ಕಾಂಗ್ರೆಸ್ ಅವಧಿಯಲ್ಲಿ ಸಚಿವರು ಹಾಗೂ ಸಿಎಂ ವಿರುದ್ಧದ ಆರೋಪಗಳನ್ನು ಮುಚ್ಚಿ ಹಾಕುವ ಉದ್ದೇಶದಿಂದಲೇ ಲೋಕಾಯುಕ್ತ ಅಧಿಕಾರವನ್ನು ಕಸಿದು ಎಸಿಬಿ ರಚನೆ ಮಾಡಿದರು. ಅಲ್ಲಿ ದಾಖಲಾಗಿದ್ದ ದೂರುಗಳನ್ನು ತನಿಖೆ ಮಾಡಲು ಅಂದಿನ ಸರಕಾರ ಮುಂದಾಗಲಿಲ್ಲ. ತನಿಖೆಯಾಗದ ಎಲ್ಲ ಪ್ರಕರಣಗಳನ್ನು ಇದೀಗ ಲೋಕಾಯುಕ್ತ ತನಿಖೆಗೆ ಶಿಫಾರಸ್ಸು ಮಾಡುತ್ತಿದ್ದೇವೆ ಎಂದು ಅವರು ಘೋಷಣೆ ಮಾಡಿದರು.

ನಮ್ಮ ಮೇಲೆ ಯಾವುದೇ ಪ್ರಕರಣಗಳಲ್ಲಿ ನಿಖರ ಮಾಹಿತಿ ಇದ್ದರೆ ಲೋಕಾಯುಕ್ತಕ್ಕೆ ಕೊಡಿ. ಸುಮ್ಮನೆ ಬೀದಿಯಲ್ಲಿ ನಿಂತು ಆರೋಪ ಮಾಡುವುದು ಸರಿಯಲ್ಲ. ನಿಮ್ಮ ಬಣ್ಣದ ಮಾತುಗಳಿಗೆ ಜನ ಮರಳಾಗುವುದಿಲ್ಲ. ನೀರಾವರಿ ಇಲಾಖೆ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲಾಗಿದೆ ಎಂದು ಅವರು ತಿಳಿಸಿದರು.

share
Next Story
X