Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚರ್ಚ್‌ಗಳ ಮೇಲೆ ದಾಳಿ ವಿರೋಧಿಸಿ...

ಚರ್ಚ್‌ಗಳ ಮೇಲೆ ದಾಳಿ ವಿರೋಧಿಸಿ ದಿಲ್ಲಿಯಲ್ಲಿ ಕ್ರೈಸ್ತ ಗುಂಪುಗಳ ಪ್ರತಿಭಟನೆ

20 Feb 2023 9:04 PM IST
share
ಚರ್ಚ್‌ಗಳ ಮೇಲೆ ದಾಳಿ ವಿರೋಧಿಸಿ ದಿಲ್ಲಿಯಲ್ಲಿ ಕ್ರೈಸ್ತ ಗುಂಪುಗಳ ಪ್ರತಿಭಟನೆ

ಹೊಸದಿಲ್ಲಿ,ಫೆ.20: ದೇಶದ ವಿವಿಧ ಭಾಗಗಳಲ್ಲಿ ಚರ್ಚ್‌ಗಳ ಮೇಲೆ ದಾಳಿಯನ್ನು ವಿರೋಧಿಸಿ ಕ್ರೈಸ್ತ ಸಮುದಾಯದ ಸದಸ್ಯರು ರವಿವಾರ ದಿಲ್ಲಿಯ ಜಂತರ್ ಮಂತರ್‌(Jantar Mantar)ನಲ್ಲಿ ಪ್ರತಿಭಟನೆ ನಡೆಸಿದರು. ಸುಮಾರು ನೂರು ಚರ್ಚ್‌ಗಳು ಮತ್ತು ಕ್ರೈಸ್ತ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

‘ನಮ್ಮ ವಿರುದ್ಧ ಜನರನ್ನು ಬಲವಂತದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಿಸುತ್ತಿರುವ ಆರೋಪಗಳನ್ನು ಮಾಡಲಾಗುತ್ತಿದೆ. ಚರ್ಚ್‌ಗಳ ಮೇಲೆ ದಾಳಿಗಳನ್ನು ನಡೆಸಲಾಗುತ್ತಿದೆ,ನಮ್ಮ ಜನರನ್ನು ಥಳಿಸಲಾಗುತ್ತಿದೆ ಮತ್ತು ಬಂಧಿಸಲಾಗುತ್ತಿದೆ. ಸಮುದಾಯದ ಜನರು ನಿರಂತರವಾಗಿ ಭಯದ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ’ ಎಂದು ಉತ್ತರ ಪ್ರದೇಶದ ನಿವಾಸಿ ಸ್ಟೀವನ್ ದೂರಿದರು.

ಆರು ದಿನಗಳ ಹಿಂದೆ ಮಧ್ಯಪ್ರದೇಶದ ನರ್ಮದಾಪುರಂ ಎಂಬಲ್ಲಿ ಚರ್ಚ್‌ವೊಂದನ್ನು ಧ್ವಂಸಗೊಳಿಸಿದ್ದ ದುಷ್ಕರ್ಮಿಗಳು ಅದಕ್ಕೆ ಬೆಂಕಿ ಹಚ್ಚಿದ್ದರು. ಅದಕ್ಕೂ ಮುನ್ನ ಜ.2ರಂದು ಛತ್ತೀಸ್‌ಗಡದ ನಾರಾಯಣಪುರ ಜಿಲ್ಲೆಯಲ್ಲಿ ಚರ್ಚ್‌ನ್ನು ಧ್ವಂಸಗೊಳಿಸಿದ್ದ ಗುಂಪು ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿತ್ತು. ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಓರ್ವ ನಾಯಕ ಸೇರಿದಂತೆ ಐವರನ್ನು ಬಂಧಿಸಲಾಗಿತ್ತು.

ಕ್ರೈಸ್ತರ ವಿರುದ್ಧ ‘ಉದ್ದೇಶಿತ ಹಿಂಸಾಚಾರ ’ದ ಸಮಸ್ಯೆಯನ್ನು ಬಗೆಹರಿಸಲು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ರಾಷ್ಟ್ರೀಯ ಪರಿಹಾರ ಆಯೋಗವನ್ನು ರಚಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಹವಾಲನ್ನು ಸಲ್ಲಿಸುವುದಾಗಿ ಕ್ರೈಸ್ತ ಸಮುದಾಯದ ಸದಸ್ಯರು ರವಿವಾರ ತಿಳಿಸಿದರು.

ದಿಲ್ಲಿಯ ಮಾನವ ಹಕ್ಕುಗಳ ಗುಂಪು ದಿ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಕಳೆದ ವರ್ಷ 21 ರಾಜ್ಯಗಳಲ್ಲಿ ಕ್ರೈಸ್ತರ ವಿರುದ್ಧ ಹಿಂಸಾಚಾರದ 598 ಘಟನೆಗಳನ್ನು ದಾಖಲಿಸಿತ್ತು.

share
Next Story
X