Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣ: ದಿನಗೂಲಿ ನೌಕರನ ಕಸ್ಟಡಿ ಸಾವು;...

ತೆಲಂಗಾಣ: ದಿನಗೂಲಿ ನೌಕರನ ಕಸ್ಟಡಿ ಸಾವು; ನಾಲ್ವರು ಪೊಲೀಸರ ಅಮಾನತು

20 Feb 2023 9:08 PM IST
share
ತೆಲಂಗಾಣ: ದಿನಗೂಲಿ ನೌಕರನ ಕಸ್ಟಡಿ ಸಾವು; ನಾಲ್ವರು ಪೊಲೀಸರ ಅಮಾನತು

ಹೈದರಾಬಾದ್, ಫೆ. 20: ಪೊಲೀಸ್ ಕಸ್ಟಡಿಯಲ್ಲಿ ದಿನಗೂಲಿ ನೌಕರ ಮುಹಮ್ಮದ್ ಖಾದಿರ್ ಚಿತ್ರ ಹಿಂಸೆಯಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣದ ಮೇದಕ್  ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ರವಿವಾರ ಅಮಾನತು ಮಾಡಲಾಗಿದೆ. 

ಮೇದಕ್ ಪಟ್ಟಣದ ಸರ್ಕಲ್ ಇನ್ಸ್‌ಪೆಕ್ಟರ್ ಮಧು, ಸಬ್ ಇನ್ಸ್‌ಪೆಕ್ಟರ್ ರಾಜಶೇಖರ್ ಹಾಗೂ ಕಾನ್ಸ್‌ಟೆಬಲ್‌ಗಳಾದ ಪ್ರಶಾಂತ್ ಹಾಗೂ ಪವನ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮೇದಕ್ ಪೊಲೀಸ್ ಅಧೀಕ್ಷಕರಾದ ರೋಹಿಣಿ ಪ್ರಿಯದರ್ಶಿನಿ ಹೇಳಿದ್ದಾರೆ. 

ಘಟನೆಯ ಕುರಿತು ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಡಿಜಿಪಿ ಅಂಜನಿ ಕುಮಾರ್ ಅವರು ಆದೇಶಿಸಿದ ಒಂದು ದಿನದ ಬಳಿಕ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲು ಐಜಿಪಿ ಚಂದ್ರಶೇಖರ್ ರೆಡ್ಡಿ ಆದೇಶಿಸಿದ್ದಾರೆ. ತನಿಖೆಯನ್ನು ಕೆಮರೆಡ್ಡಿ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ನೀಡುವಂತೆ ಹಾಗೂ ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಡಿಜಿಪಿ ಅವರು ಐಜಿಪಿಗೆ ನಿರ್ದೇಶಿಸಿದ್ದರು. ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್‌ಗಳ ವಿರುದ್ಧ ಶಿಸ್ತು ಕ್ರಮಗಳನ್ನು ಆರಂಭಿಸಲಾಗಿದೆ ಎಂದು  ಪೊಲೀಸ್ ವರಿಷ್ಠರು ಪ್ರಕಟಿಸಿದ್ದಾರೆ.  

ಪೊಲೀಸ್ ಚಿತ್ರಹಿಂಸೆಯಿಂದ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ಖಾದಿರ್(35) ಶುಕ್ರವಾರ ಮೃತಪಟ್ಟಿದ್ದರು. ಕಳವು ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಮುಹಮ್ಮದ್ ಖಾದಿರ್‌ನನ್ನು ಹೈದರಾಬಾದ್‌ನಲ್ಲಿರುವ ಆತನ ಅಕ್ಕನ ಮನೆಯಿಂದ ಜನವರಿ 29ರಂದು ಅಪಹರಿಸಲಾಗಿತ್ತು. ‘‘ಆತನನ್ನು ಪೊಲೀಸರು ಮೇದಕ್‌ಗೆ ಕರೆದೊಯ್ದು ಐದು ದಿನಗಳ ಕಾಲ ಅಕ್ರಮ ಬಂಧನದಲ್ಲಿರಿಸಿ ಚಿತ್ರ ಹಿಂಸೆ ನೀಡಿದ್ದಾರೆ. ಫೆಬ್ರವರಿ 2ರಂದು ಬಿಡುಗಡೆ ಮಾಡಿದ್ದರು’’ಎಂದು ಆತನ ಕುಟುಂಬ ಆರೋಪಿಸಿದೆ. 

‘‘ಪೊಲೀಸರ ಚಿತ್ರಹಿಂಸೆಯಿಂದಾಗಿ ಖಾದಿರ್‌ಗೆ ನೇರವಾಗಿ ನಿಂತುಕೊಳ್ಳಲು ಕೂಡ ಸಾಧ್ಯವಾಗುತ್ತಿರಲಿಲ್ಲ. ಆತನ ಮೂತ್ರಕೋಶಕ್ಕೆ ಹಾನಿ ಉಂಟಾಗಿತ್ತು. ಫೆಬ್ರವರಿ 9ರಂದು ಆತನನ್ನು ಮೇದಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಖಾದಿರ್ ಅವರ ದೇಹಸ್ಥಿತಿ ಹದಗೆಡುತ್ತಿದ್ದಂತೆ ಆತನನ್ನು ಉತ್ತಮ ಚಿಕಿತ್ಸೆಗಾಗಿ ಹೈದರಾಬಾದ್‌ನಲ್ಲಿರುವ ಗಾಂಧಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆದರೆ, ಗಂಭೀರ ಗಾಯಗೊಂಡ ಆತ ಫೆಬ್ರವರಿ 17ರಂದು ಮೃತಪಟ್ಟ. ಆತ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 
ಮರಣೋತ್ತರ ಪರೀಕ್ಷೆಯ ಬಳಿಕ ಖಾದಿರ್‌ನ ಮೃತದೇಹವನ್ನು ಶನಿವಾರ ಬೆಳಗ್ಗೆ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಮೇದಕ್‌ನಲ್ಲಿ ನೆರವೇರಿತ್ತು.

share
Next Story
X