Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಫೆ.22ರಿಂದ ಶಿವಪಾಡಿ...

ಮಣಿಪಾಲ: ಫೆ.22ರಿಂದ ಶಿವಪಾಡಿ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ

21 Feb 2023 4:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಣಿಪಾಲ: ಫೆ.22ರಿಂದ ಶಿವಪಾಡಿ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ

ಮಣಿಪಾಲ, ಫೆ.21: ಇಲ್ಲಿನ ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಹಾಗೂ ಅತಿರುದ್ರ ಮಹಾಯಾಗ ಸಮಿತಿಯ ಜಂಟಿ ಆಶ್ರಯದಲ್ಲಿ ಇದೇ ಫೆ.22ರಿಂದ ಮಾ.5ರವರೆಗೆ ಕರಾವಳಿಯಲ್ಲಿ ಮೊದಲ ಅತಿರುದ್ರ ಮಹಾಯಾಗ ಶೃಂಗೇರಿ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಭಾರತೀತೀರ್ಥ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ, ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಶಿವಪಾಡಿ ದೇವಸ್ಥಾನ ಆವರಣದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅತಿರುದ್ರ ಯಾಗದ ವಿವರಗಳನ್ನು ನೀಡಿದ ಅವರು, ಮಹಾಯಾಗವು 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ 12 ದಿನಗಳ ಕಾಲ ನಡೆಯಲಿದೆ. ಇದಕ್ಕಾಗಿ ಯಾಗದ ವೇದಿಕೆ, ಯಾಗ ಮಂಟಪವನ್ನು ರಚಿಸಲಾಗಿದೆ. ಪ್ರತಿದಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ 2000 ವೀಕ್ಷಿಸಲು ಸಾಧ್ಯವಾಗುವಂತೆ ಬಾರತೀತೀರ್ಥ ಸಭಾಮಂಟಪ ವನ್ನು ಸಜ್ಜುಗೊಳಿಸಲಾಗಿದೆ ಎಂದರು.

ಈ ಯಾಗದಲ್ಲಿ ಭಾಗವಹಿಸಲು ಶೃಂಗೇರಿಯಿಂದ ಆಗಮಿಸುವ 180 ಮಂದಿ ಋತ್ವಿಜರ ವಾಸ್ತವ್ಯಕ್ಕಾಗಿ ‘ಈಶಾವಾಸ್ಯಂ’ ವಸತಿಗೃಹವನ್ನು ನಿರ್ಮಿಸ ಲಾಗಿದೆ. 12ದಿನಗಳ ಕಾಲ ಅತಿರುದ್ರ ಮಹಾಯಾಗಕ್ಕೆ ಆಗಮಿಸುವ ಸುಮಾರು ಒಂದು ಲಕ್ಷಕ್ಕೂ ಅಧಿಕ ಭಕ್ತಾದಿಗಳ ಭೋಜನ ವ್ಯವಸ್ಥೆಗೆ ಅನ್ನಪೂರ್ಣ ಭೋಜನ ಶಾಲೆ ಸಜ್ಜಾಗಿದೆ ಎಂದರು.

ಜಿಲ್ಲೆಯಲ್ಲಿ ಮಹಾಯಾಗ ನಡೆದಿದೆ. ಆದರೆ ಅತಿರುದ್ರ ಮಹಾಯಾಗ ಈವರೆಗೆ ನಡೆದಿಲ್ಲ. ಶೃಂಗೇರಿಯಲ್ಲಿ ಮಾತ್ರ ಈ ಯಾಗ ನಡೆದಿರುವ ಮಾಹಿತಿ ಇದ್ದು, ಶೃಂಗೇರಿಯ ವೈದಿಕರೇ ಅತಿರುದ್ರ ಮಹಾಯಾಗವನ್ನು ನಡೆಸುವವ ರಾಗಿದ್ದು, ಶೃಂಗೇರಿ ಪೀಠಾಧಿಪತಿಗಳ ಪೂರ್ಣ ಸಮ್ಮತಿಯೊಂದಿಗೆ ಅವರ ಉಪಸ್ಥಿತಿಯಲ್ಲೇ ಇದು ನಡೆಯಲಿದೆ ಎಂದು ರಘುಪತಿ ಭಟ್ ತಿಳಿಸಿದರು.

ಅತಿರುದ್ರ ಮಹಾಯಾಗದಲ್ಲಿ ಸಾರಿಗೆ ಸಚಿವ ಶ್ರೀರಾಮುಲು, ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ವ ಸೂರ್ಯ, ಅಣ್ಣಾಮಲೈ ಆಗಮಿಸುವುದು ಖಚಿತವಾಗಿದೆ. ಇನ್ನೂ ಅನೇಕ ಗಣ್ಯರು ಇದರಲ್ಲಿ ಭಾಗವಹಿಸಲಿ ದ್ದಾರೆ ಎಂದರು.

ಸುಮಾರು ನಾಲ್ಕು ಕೋಟಿ ರೂ.ವೆಚ್ಚದಲ್ಲಿ ನಡೆಯುವ ಈ ಅಪರೂಪದ ಯಾಗಕ್ಕೆ ಮಾಹೆಯ ಸಹಕಾರದೊಂದಿಗೆ 7-8 ಎಕರೆ ಜಾಗವನ್ನು ಸಜ್ಜುಗೊಳಿಸಲಾಗಿದೆ. ಇನ್ನು ವಾರಾಣಸಿಯಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿ ಶಿವಪಾಡಿಯಲ್ಲಿ ಶಿವಾರತಿ ನಡೆಸಲು ಸಿದ್ಧತೆ ಮಾಡಲಾಗಿದೆ. ಉಡುಪಿಯ ಜನತೆ ಇದಕ್ಕಾಗಿ ಹಸಿರುಹೊಣೆ ಕಾಣಿಕೆಯನ್ನು ನೀಡಿ ಸಹಕರಿಸುವಂತೆ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಮಹೇಶ್ ಠಾಕೂರ್, ಅತಿರುದ್ರ ಮಹಾಯಾಗ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಕೋಶಾಧಿಕಾರಿ ಸತೀಶ್ ಪಾಟೀಲ್, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಮದ್ದೋಡಿ, ಇತರ ಪದಾಧಿಕಾರಿಗಳಾದ ರತ್ನಾಕರ ಇಂದ್ರಾಳಿ, ಗೋಪಾಲಕೃಷ್ಣ ಪ್ರಭು, ದಿನೇಶ್ ಪ್ರಭು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X