Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ವಿಶ್ವದ ಅತಿ ದೊಡ್ಡ...

ತಮಿಳುನಾಡಿನಲ್ಲಿ ವಿಶ್ವದ ಅತಿ ದೊಡ್ಡ ಇಲೆಕ್ಟ್ರಿಕ್ ವಾಹನ ತಯಾರಿಕಾ ಕೇಂದ್ರ ಸ್ಥಾಪನೆಗೆ ಓಲಾ ಒಪ್ಪಂದ

ಕರ್ನಾಟಕಕ್ಕೆ ತಪ್ಪಿದ ಅವಕಾಶ

21 Feb 2023 10:41 PM IST
share
ತಮಿಳುನಾಡಿನಲ್ಲಿ ವಿಶ್ವದ ಅತಿ ದೊಡ್ಡ ಇಲೆಕ್ಟ್ರಿಕ್ ವಾಹನ ತಯಾರಿಕಾ ಕೇಂದ್ರ ಸ್ಥಾಪನೆಗೆ ಓಲಾ ಒಪ್ಪಂದ
ಕರ್ನಾಟಕಕ್ಕೆ ತಪ್ಪಿದ ಅವಕಾಶ

ಚೆನ್ನೈ, ಫೆ. 21: ತಮಿಳುನಾಡಿನಲ್ಲಿ ಜಗತ್ತಿನ ಅತಿ ದೊಡ್ಡ ಇಲೆಕ್ಟ್ರಿಕ್ ವಾಹನ(Electric vehicle)ಗಳ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಇ.ವಿ. ತಯಾರಕ ಓಲಾ ಇಲೆಕ್ಟ್ರಿಕಲ್(Ola Electrical) ಸೋಮವಾರ ತಿಳಿಸಿದೆ. ಇಷ್ಟು ದೊಡ್ಡ ಹೂಡಿಕೆಯ ಅವಕಾಶ ಕಳೆದು ಕೊಂಡ ಕರ್ನಾಟಕದ ಬಿಜೆಪಿ ನೇತೃತ್ವದ ಸರಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ. 

ಇಲೆಕ್ಟ್ರಿಕ್ ಕಾರುಗಳು ಹಾಗೂ ಲಿಥಿಯಂ-ಐಯಾನ್ ಸೆಲ್ಗಳನ್ನು ಉತ್ಪಾದಿಸಲು ಓಲಾ ತಮಿಳುನಾಡಿನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್(M.K. Stalin) ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಓಲಾ, ತಮಿಳುನಾಡಿನಲ್ಲಿ ಆರಂಭವಾಗುವ ಇಲೆಕ್ಟ್ರಿಕ್ ವಾಹನಗಳ ಕೇಂದ್ರ ಇಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಾಗಿರುವ ಎಲ್ಲವನ್ನು ಪೂರೈಸುವ ವ್ಯವಸ್ಥೆಯಾಗಿರಲಿದೆ ಎಂದಿದೆ. ಇಲೆಕ್ಟ್ರಿಕ್ ವಾಹನ ಹಾಗೂ ಬ್ಯಾಟರಿ ಉತ್ಪಾದನಾ ನೀತಿಯನ್ನು ಮೊಟ್ಟಮೊದಲಿಗೆ ಜಾರಿಗೆ ತಂದ ರಾಜ್ಯ ಕರ್ನಾಟಕವಾಗಿದೆ. ಆದರೂ ಓಲಾ ತಮಿಳುನಾಡನ್ನು ಆಯ್ಕೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ತ್ವರಿತವಾಗಿ ಗಮನ ಸೆಳೆದಿದೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ(Priyank Kharge), ‘‘ಬಿಜೆಪಿ ಸರಕಾರವಿರುವ ಕರ್ನಾಟಕದಲ್ಲಿ ಸುಲಭವಾಗಿ ಉದ್ಯಮ ನಡೆಸಲು ಸಾಧ್ಯವಿದೆ ಎಂಬುದು ಮಿಥ್ಯೆ ಎನ್ನುವುದನ್ನು ಓಲಾ ತಮಿಳುನಾಡಿನಲ್ಲಿ ಹೂಡಿಕೆ ಮಾಡುತ್ತಿರುವುದು ತೋರಿಸಿ ಕೊಟ್ಟಿದೆ. ಹೂಡಿಕೆ ಹಾಗೂ ಉದ್ಯೋಗ ನಷ್ಟವಾಗಿರುವುದಕ್ಕೆ ಯಾರು ಹೊಣೆ ?’’ ಎಂದು ಪ್ರಶ್ನಿಸಿದ್ದಾರೆ. ‘‘ಬೆಂಗಳೂರಿನಲ್ಲಿ ತನ್ನ ನೆಲೆ ಕಳೆದುಕೊಂಡ ಓಲಾ ಈಗ ತಮಿಳುನಾಡಿನಲ್ಲಿ ಹೂಡಿಕೆ ಮಾಡುತ್ತಿದೆ ಹಾಗೂ ಸಾವಿರಾರು ಜನರಿಗೆ ಉದ್ಯೋಗ ನೀಡುತ್ತಿದೆ. 

ಕರ್ನಾಟಕದ ಅಸಮರ್ಪಕ ನೀತಿ, ಹೂಡಿಕೆದಾರರನ್ನು ಮನವೊಲಿಸಲು ಹಾಗೂ ಅನುಕೂಲಕರ ಪರಿಸರ ವ್ಯವಸ್ಥೆಯನ್ನು ಪೂರೈಸಲು ವಿಫಲವಾಗಿರುವುದು ಇದಕ್ಕೆ ಕಾರಣ’’ ಎಂದು ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ತಮಿಳುನಾಡಿನಲ್ಲಿ ಆರಂಭವಾಗಲಿರುವ ತನ್ನ ಇಲೆಕ್ಟ್ರಿಕ್ ವಾಹನಗಳ ಕೇಂದ್ರದಲ್ಲಿ ಓಲಾ ಇಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು 2023ರಲ್ಲಿ ಆರಂಭಿಸಲಿದೆ.

share
Next Story
X