Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಮತಪತ್ರಗಳನ್ನು ಮುದ್ರಿಸಲೂ ದುಡ್ಡಿಲ್ಲ,...

​ಮತಪತ್ರಗಳನ್ನು ಮುದ್ರಿಸಲೂ ದುಡ್ಡಿಲ್ಲ, ಆರ್ಥಿಕ ಸಂಕಷ್ಟ: ಸ್ಥಳೀಯಾಡಳಿತ ಚುನಾವಣೆ ಮುಂದೂಡಿದ ಶ್ರೀಲಂಕಾ

21 Feb 2023 11:52 PM IST
share
​ಮತಪತ್ರಗಳನ್ನು  ಮುದ್ರಿಸಲೂ ದುಡ್ಡಿಲ್ಲ, ಆರ್ಥಿಕ ಸಂಕಷ್ಟ: ಸ್ಥಳೀಯಾಡಳಿತ ಚುನಾವಣೆ ಮುಂದೂಡಿದ ಶ್ರೀಲಂಕಾ

ಕೊಲಂಬೊ, ಫೆ.೨೧: ಆರ್ಥಿಕವಾಗಿ ದಿವಾಳಿಯೆದ್ದಿರುವ ದ್ವೀಪರಾಷ್ಟ್ರವಾದ ಶ್ರೀಲಂಕಾವು ಮುಂದಿನ ತಿಂಗಳು ನಡೆಯಲಿದ್ದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳನ್ನು ಮುಂದೂಡಲು ನಿರ್ಧರಿಸಿದೆ. 

ಮತಪತ್ರಗಳನ್ನು ಮುದ್ರಿಸಲು, ಇಂಧನ ಪೂರೈಸಲು  ಹಾಗೂ ಮತಗಟ್ಟೆಗಳಿಗೆ ಪೊಲೀಸ್ ರಕ್ಷಣೆ ಒದಗಿಸಲು ಹಣಕಾಸು ನಿಧಿಯನ್ನು ಪೂರೈಸುವುದಕ್ಕೆ ಸರಕಾರ ಬೊಕ್ಕಸವು   ನಿರಾಕರಿಸಿರುವುದರಿಂದ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲವೆಂದು ಚುನಾವಣಾ ಆಯೋಗವು  ನ್ಯಾಯಾಲಯಕ್ಕೆ  ನೀಡಿದ ವಿವರಣೆಯಲ್ಲಿ ತಿಳಿಸಿದೆ.

‘‘ ಸ್ಥಳೀಯಾಡಳಿತ  ಸಂಸ್ಥೆಗಳ ಚುನಾವಣೆಯು ಸಕಾಲದಲ್ಲಿ ನಡೆಯಲಿದೆಯೆಂದು ನಾನು  ಇತ್ತೀಚೆಗೆ ಸುಪ್ರೀಂಕೋರ್ಟ್ಗೆ  ಮುಚ್ಚಳಿಕೆ ಬರೆದುಕೊಟ್ಟಿದ್ದೆ.ಆದರೆ ಸರಕಾರವು ಚುನಾವಣೆಗೆ ಅಗತ್ಯವಿರುವ ನಿಧಿಗಳನ್ನು ಪೂರೈಸಲು ನಿರಾಕರಿಸುತ್ತಿರುವುದರಿಂದ ನನಗೆ ಅದು ಸಾಧ್ಯವಾಗುತ್ತಿಲ್ಲ’’ ಎಂದು ಶ್ರೀಲಂಕಾದ ಚುನಾವಣಾ ಆಯೋಗದ ಮುಖ್ಯಸ್ಥ ನಿಮಲ್ ಪುಂಚಿಹೆವಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಕೂಡಾ  ವೇತನ, ಪಿಂಚಣಿ ಪಾವತಿಗೆ ಹಾಗೂ  ಅಗತ್ಯ ಸೇವೆಗಳ ನಿರ್ವಹಣೆಗೆ ಸರಕಾರದ ವರಮಾನವು  ಸಾಲುತ್ತಿಲ್ಲವಾದ ಕಾರಣ ಚುನಾವಣೆಗಳನ್ನು ನಡೆಸುವುದು ಅಸಾಧ್ಯವಾಗಿಬಿಟ್ಟಿದೆ ಎಂದು ಹೇಳಿದ್ದರು.

ಈ ಮಧ್ಯೆ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಮುಂದೂಡಿಕೆ ವಿರೋಧಿಸಿ  ಶ್ರೀಲಂಕಾ ದ ಪ್ರತಿ ಪಕ್ಷಸದಸ್ಯರು ಸಂಸತ್ನಲ್ಲಿ  ಮಂಗಳವಾರ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದರಿಂದ ಸದನನವನ್ನು ಮುಂದೂಡಲಾಯಿತು.
ಮಾರ್ಚ್ ೯ರಂದು ನಡೆಯಲಿದ್ದ ಸ್ಥಳೀಯಾಡಳಿತ ಸಂಸ್ಥೆಗಳು ಚುನಾವಣೆಯು ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರಿಗಿರುವ ಜನಬೆಂಬಲದ ಕುರಿತ ಪ್ರಮುಖ ಅಗ್ನಿಪರೀಕ್ಷೆಯೆಂದೇ ಪರಿಗಣಿಸಲ್ಪಟ್ಟಿತ್ತು. ತೀವ್ರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದ ಬಳಿಕ ನಡೆದ ರಾಜಕೀಯ ವಿದ್ಯಮಾನಗಳಲ್ಲಿ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅಧಿಕಾರ ವಹಿಸಿಕೊಡಂಇದ್ದರು.

share
Next Story
X