Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ ಸರ್ಕಾರದ ವಿರುದ್ಧ...

ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವ್ಯಂಗ್ಯಭರಿತ ಹಾಡು ಹಾಡಿದ್ದ ಗಾಯಕಿಗೆ ನೋಟಿಸ್ ಜಾರಿಗೊಳಿಸಿದ ಪೊಲೀಸರು

22 Feb 2023 12:53 PM IST
share
ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವ್ಯಂಗ್ಯಭರಿತ ಹಾಡು ಹಾಡಿದ್ದ ಗಾಯಕಿಗೆ ನೋಟಿಸ್ ಜಾರಿಗೊಳಿಸಿದ ಪೊಲೀಸರು

ಲಕ್ನೊ: ಕಾನ್ಪುರದಲ್ಲಿ ನಡೆದ ಮನೆ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾದ ಸಂದರ್ಭವನ್ನು ಆಧರಿಸಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವ್ಯಂಗ್ಯಭರಿತ ಗೀತೆ ಹಾಡಿದ್ದ ಜನಪ್ರಿಯ ಭೋಜಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ಉತ್ತರ ಪ್ರದೇಶ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಕಳೆದ ವಾರ ಗುಡಿಸಲಿಗೆ ಪೊಲೀಸರು ಬೆಂಕಿ ಹಚ್ಚಿದ್ದರಿಂದ ಪ್ರಮೀಳಾ ದೀಕ್ಷಿತ್ (45) ಹಾಗೂ ಆಕೆಯ ಪುತ್ರಿ ನೇಹಾ (20) ಸಾವಿಗೀಡಾಗಿದ್ದಾರೆ ಎಂದು ಆರೋಪಿಸಲಾಗಿರುವ ಘಟನೆಯನ್ನು ಆಧರಿಸಿ ಗಾಯಕಿ ನೇಹಾ ಸಿಂಗ್ ರಾಥೋಡ್ "ಯುಪಿ ಮೆ ಕಾ ಬಾ" ಎಂಬ ಗೀತೆ ಹಾಡಿದ್ದು, ಅದೀಗ ವೈರಲ್ ಆಗಿದೆ.

ಈ ಗೀತೆಯೀಗ ಉತ್ತರ ಪ್ರದೇಶ ಪೊಲೀಸರು ಆಕೆಯ ಮನೆ ಮುಂದೆ ಹಾಜರಾಗುವಂತೆ ಮಾಡಿದ್ದು, ಈ ಗೀತೆಯಿಂದ ಸಮಾಜದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದು ಪೊಲೀಸರ ಆರೋಪವಾಗಿದೆ. ಈ ಗೀತೆ ಹಾಗೂ ಈ ಗೀತೆ ಹೇಗೆ ನಿರ್ಮಾಣವಾಯಿತು ಎಂಬ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಪೊಲೀಸರು ಪ್ರಶ್ನೆಗಳ ಪಟ್ಟಿಯೊಂದನ್ನು ಗಾಯಕಿಗೆ ಹಸ್ತಾಂತರಿಸಿದ್ದಾರೆ ಎಂದು ವರದಿಯಾಗಿದೆ.

ಈ ಪ್ರಶ್ನೆಗಳ ಪಟ್ಟಿಯಲ್ಲಿ ವಿಡಿಯೊದಲ್ಲಿರುವುದು ನೀವೇ, ಅಲ್ಲವೆ ಎಂಬುದನ್ನು ದೃಢಪಡಿಸಿ, ಗೀತೆಯ ಸಾಹಿತ್ಯವನ್ನು ನೀವೇ ರಚಿಸಿದ್ದರೆ ಅದಕ್ಕೆ ನೀವು ಬದ್ಧವಾಗಿದ್ದೀರಾ ಮತ್ತು ಈ ವಿಡಿಯೊದಿಂದ ಸಮಾಜದ ಮೇಲಾಗುವ ದುಷ್ಪರಿಣಾಮದ ಬಗ್ಗೆ ನಿಮಗೆ ಅರಿವಿದೆಯೆ ಎಂದು ಪೊಲೀಸರು ಪ್ರಶ್ನಿಸಿದ್ದಾರೆ.

ಒಂದು ವೇಳೆ ನಿಮ್ಮ ಪ್ರತಿಕ್ರಿಯೆ ಅತೃಪ್ತಿಕರವಾಗಿದ್ದರೆ, ನಿಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಮತ್ತು ಸಮರ್ಪಕ ಕಾನೂನಾತ್ಮಕ ತನಿಖೆ ಕೈಗೊಳ್ಳಲಾಗುವುದು ಎಂದು ನೋಟಿಸಿನಲ್ಲಿ ಪೊಲೀಸರು ಎಚ್ಚರಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದಿಲ್ಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಖಂಡಿಸಿದ್ದಾರೆ.

ನೇಹಾ ಸಿಂಗ್ ರಾಥೋಡ್ ಜನಪ್ರಿಯ ಭೋಜಪುರಿ ಗಾಯಕಿಯಾಗಿದ್ದು, ತಮ್ಮ ವ್ಯಂಗ್ಯಭರಿತ ಗೀತೆಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು ಈ ಹಿಂದೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಲಾಲ್ ಪ್ರಸಾದ್ ಯಾದವ್ ಕುರಿತೂ ವ್ಯಂಗ್ಯಭರಿತ ಗೀತೆಗಳನ್ನು ಹಾಡಿದ್ದರು.

यू पी में का बा..!

Season 2#nehasinghrathore #kanpur #KANPUR_DEHAT #up #UPCM #Government #democracy #death pic.twitter.com/Onhv0Lhw12

— Neha Singh Rathore (@nehafolksinger) February 16, 2023

'यू पी में का बा!' पर पुलिस का नोटिस..!#Nehasinghrathore #up @Uppolice @myogiadityanath @myogioffice #democracy pic.twitter.com/szZUsqvRCu

— Neha Singh Rathore (@nehafolksinger) February 21, 2023
share
Next Story
X