Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ತೆರಿಗೆ ಸಮೀಕ್ಷೆಗಳ...

ಭಾರತದಲ್ಲಿ ತೆರಿಗೆ ಸಮೀಕ್ಷೆಗಳ ಬೆನ್ನಲ್ಲೇ ಬಿಬಿಸಿಯ ಸಂಪಾದಕೀಯ ಸ್ವಾತಂತ್ರ್ಯದ ಬೆಂಬಲಕ್ಕೆ ನಿಂತ ಬ್ರಿಟಿಷ್‌ ಸರ್ಕಾರ

22 Feb 2023 1:56 PM IST
share
ಭಾರತದಲ್ಲಿ ತೆರಿಗೆ ಸಮೀಕ್ಷೆಗಳ ಬೆನ್ನಲ್ಲೇ ಬಿಬಿಸಿಯ ಸಂಪಾದಕೀಯ ಸ್ವಾತಂತ್ರ್ಯದ ಬೆಂಬಲಕ್ಕೆ ನಿಂತ ಬ್ರಿಟಿಷ್‌ ಸರ್ಕಾರ

 ಲಂಡನ್‌ : ಬಿಬಿಸಿ ಮಾಧ್ಯಮ ಸಂಸ್ಥೆಯ ಹೊಸದಿಲ್ಲಿ ಮತ್ತು ಮುಂಬೈ ಕಚೇರಿಗಳಲ್ಲಿ ಭಾರತೀಯ ಐಟಿ ಅಧಿಕಾರಿಗಳು ತೆರಿಗೆ ಸಮೀಕ್ಷೆ ಹೆಸರಿನಲ್ಲಿ ನಡೆಸಿದ ತಪಾಸಣೆಯ ಕೆಲವೇ ದಿನಗಳಲ್ಲಿ ಪ್ರತಿಕ್ರಿಯಿಸಿರುವ ಬ್ರಿಟಿಷ್‌ ವಿದೇಶ ಸಚಿವ ಡೇವಿಡ್‌ ರುಟ್ಲೇ, ಬಿಬಿಸಿ ಗೆ ಸಂಪಾದಕೀಯ ಸ್ವಾತಂತ್ರ್ಯವಿರಬೇಕೆಂದು ಬಯಸಿದ್ದೇವೆ ಎಂದರು.

"ನಾವು ಬಿಬಿಸಿಗೆ ಧನಸಹಾಯ ಒದಗಿಸುತ್ತಿದ್ದೇವೆ. ಬಿಬಿಸಿ ವರ್ಲ್ಡ್‌ ಸರ್ವಿಸ್‌ ಮುಖ್ಯ ಎಂದು ನಮಗೆ ತಿಳಿದಿದೆ. ಬಿಬಿಸಿಗೆ ಸಂಪಾದಕೀಯ ಸ್ವಾತಂತ್ರ್ಯ ಬೇಕೆಂದು ನಾವು ಬಯಸುತ್ತೇವೆ. ಅದು ನಮ್ಮನ್ನು (ಕನ್ಸರ್ವೇಟಿವ್ಸ್) ಅನ್ನು ಟೀಕಿಸುತ್ತದೆ, ಅದು ಲೇಬರ್‌ ಪಾರ್ಟಿಯನ್ನು ಟೀಕಿಸುತ್ತದೆ. ನಾವು  ಬಹಳ ಮುಖ್ಯ ಎಂದು ತಿಳಿಯುವ ಸ್ವಾತಂತ್ರ್ಯ ಬಿಬಿಸಿಗಿದೆ. ಆ ಸ್ವಾತಂತ್ರ್ಯಕ್ಕೆ ಮಹತ್ವವಿದೆ ಹಾಗೂ ಈ ಮಹತ್ವದ ಬಗ್ಗೆ ಭಾರತ ಸರ್ಕಾರ ಸಹಿತ ಜಗತ್ತಿನಾದ್ಯಂತದ ನಮ್ಮ ಸ್ನೇಹಿಕರಿಗೆ ತಿಳಿಸಲು ನಾವು ಬಯಸುತ್ತೇವೆ," ಎಂದು ರುಟ್ಲೇ ಹೇಳಿದ್ದಾರೆ.

ಭಾರತದ ಐಟಿ ಅಧಿಕಾರಿಗಳು ಬಿಬಿಸಿಯ ಭಾರತದ ಕಚೇರಿಗಳಲ್ಲಿ ನಡೆಸಿರುವ ತೆರಿಗೆ ಸಮೀಕ್ಷೆ ಕುರಿತು ಭಾರತದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ, ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಬಿಬಿಸಿ ಕಚೇರಿಯಲ್ಲಿ ನಡೆಸಲಾದ ತೆರಿಗೆ ಸಮೀಕ್ಷೆ ಕಳವಳಕಾರಿ ಎಂದು ಲೇಬರ್‌ ಪಾರ್ಟಿ ಸಂಸದ ಫೇಬಿಯನ್‌ ಹ್ಯಾಮಿಲ್ಟನ್‌ ಹೇಳಿದ್ದಾರೆ.

share
Next Story
X