Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. VIDEO- ಮುಂದಿನ ಚುನಾವಣೆಯಲ್ಲಿ ನಾನು...

VIDEO- ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ಇದೇ ನನ್ನ ಕೊನೆಯ ಅಧಿವೇಶನ: ಸದನದಲ್ಲಿ ಯಡಿಯೂರಪ್ಪ ಭಾವುಕ

22 Feb 2023 4:35 PM IST
share
VIDEO- ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ಇದೇ ನನ್ನ ಕೊನೆಯ ಅಧಿವೇಶನ: ಸದನದಲ್ಲಿ ಯಡಿಯೂರಪ್ಪ ಭಾವುಕ

ಬೆಂಗಳೂರು, ಫೆ. 22: ‘ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ’ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದು, ನಾನು ಮತ್ತೆ ಈ ಸದನಕ್ಕೆ ಬರುವುದಿಲ್ಲ. ಇದೇ ಕೊನೆಯ ಅಧಿವೇಶನ’ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ನುಡಿದಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಬಿಜೆಪಿ ಯಡಿಯೂರಪ್ಪನವರನ್ನು ಕಡೆಗಣಿಸಿದೆ ಎಂದು ವಿಪಕ್ಷಗಳ ಆರೋಪ ಮಾಡುತ್ತಿವೆ. ಆದರೆ, ಬಿಜೆಪಿ ಅಥವಾ ಪ್ರಧಾನಿ ಮೋದಿ ನನ್ನನ್ನು ಕಡೆಗಣಿಸಿಲ್ಲ. ಇದುವರೆಗೆ ಹಲವು ಅವಕಾಶಗಳನ್ನು ನನಗೆ ನೀಡಿವೆ. ಹೀಗಾಗಿ ಪಕ್ಷ ಹಾಗೂ ಮೋದಿಯವರಿಗೆ ನಾನು ಋಣಿಯಾಗಿದ್ದೇನೆ’ ಎಂದು ಹೇಳಿದರು.

‘ನನ್ನ ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಸಿಎಂ ಆಗುವ ಅವಕಾಶವನ್ನು ಬಿಜೆಪಿ ನನಗೆ ಕೊಟ್ಟಿದೆ. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇನೆ. ಆದರೆ, ಈ ಯಡಿಯೂರಪ್ಪ ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಳ್ಳುವೆ ಎಂದ ಅವರು, ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಹಿಂದಿನ ಯಾವುದೇ ಸರಕಾರಗಳು ನೀಡದಷ್ಟು ಯೋಜನೆಗಳನ್ನು ಬಿಜೆಪಿ ಸರಕಾರ ಕೊಟ್ಟಿದೆ. ಹೀಗಾಗಿ ನಮ್ಮ ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ರಾಜ್ಯದ ಬಜೆಟ್ ಎಲ್ಲ ವರ್ಗದ ಜನರನ್ನು ತಲುಪುವ ಬಜೆಟ್ ಆಗಿದೆ. ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಪ್ರಯತ್ನ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನೆರೆಯ ರಾಜ್ಯಗಳಿಗೆ ಮಾದರಿ ರೀತಿಯಲ್ಲಿ 402 ಕೋಟಿ ರೂ.ಮೊತ್ತದ ಹೆಚ್ಚುವರಿ ಆಯವ್ಯಯ ಮಂಡನೆ ಮಾಡಿದ್ದು, ದೂರಗಾಮಿ ಅಭಿವೃದ್ಧಿಗೆ ಪೂರಕ ಬಜೆಟ್ ಇದಾಗಿದೆ. ರೈಲ್ವೆ, ರಸ್ತೆ, ವಿದ್ಯುತ್ ಸಹಿತ ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದು, ಡಬಲ್ ಇಂಜಿನ್ ಸರಕಾರದ ಇರುವ ಕಾರಣದಿಂದಲೇ ರಾಜ್ಯ ಹಾಘೂ ದೇಶ ಸದೃಢವಾಗಿದ್ದು, ವಿಕಾಸ ಹೊಂದುತ್ತಿದೆ ಎಂದು ಯಡಿಯೂರಪ್ಪ ಸಮರ್ಥಿಸಿಕೊಂಡರು.

‘ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಒಮ್ಮೆ ಗೆದ್ದು ಬಂದ ಕ್ಷೇತ್ರವನ್ನು ಬಿಟ್ಟು ಬಂದು ಬೇರೆ ಕಡೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟ ನಡೆಸಿದ್ದಾರೆ. ಆದರೆ, ನೀವು ಆಯ್ಕೆಯಾದ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಲು ನಿಮಗೆ ಧೈರ್ಯವಿಲ್ಲ ಎಂದರೆ ನೀವು ಅಭಿವೃದ್ಧಿ ಕೆಲಸ ಮಾಡಿಲ್ಲ ಅಥವಾ ಸೋಲಿನ ಭೀತಿ ಇರಬೇಕು. ಬೇರೆ ಕ್ಷೇತ್ರಗಳ ಜನರು ನಿಮ್ಮನ್ನು ಹೇಗೆ ನಂಬಬೇಕು. ಹೀಗಾಗಿ ಸಿದ್ದರಾಮಯ್ಯನವರು ಪುನಃ ಅದೇ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿ, ಆಯ್ಕೆಯಾಗಬೇಕು. ಆಗ ಮಾತ್ರ ಜನರಿಗೆ ವಿಶ್ವಾಸ ಬರುತ್ತದೆ. ಇಲ್ಲವಾದರೆ ನಿಮ್ಮನ್ನು ಆಯ್ಕೆ ಮಾಡಿದ ಜನರಿಗೆ ನೀವು ದ್ರೋಹ ಮಾಡಿದಂತೆ ಆಗುತ್ತದೆ’

-ಬಿ.ಎಸ್.ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ

share
Next Story
X