Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಸ್ತೆ ಕಾಮಗಾರಿ ಗುಣಮಟ್ಟ ನಿಯಂತ್ರಣ |...

ರಸ್ತೆ ಕಾಮಗಾರಿ ಗುಣಮಟ್ಟ ನಿಯಂತ್ರಣ | ಅಧಿಕಾರಿಗಳನ್ನು ಹೊಣೆ ಮಾಡಲು ಆದೇಶ ಹೊರಡಿಸಿ: ಸಿಎಜಿ ಸಲಹೆ

22 Feb 2023 8:37 PM IST
share
ರಸ್ತೆ ಕಾಮಗಾರಿ ಗುಣಮಟ್ಟ ನಿಯಂತ್ರಣ | ಅಧಿಕಾರಿಗಳನ್ನು ಹೊಣೆ ಮಾಡಲು ಆದೇಶ ಹೊರಡಿಸಿ: ಸಿಎಜಿ ಸಲಹೆ

ಬೆಂಗಳೂರು, ಫೆ. 22: ‘ರಸ್ತೆ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಮತ್ತು ಪರೀಕ್ಷಾ ವರದಿಗಳನ್ನು ಖಚಿತಪಡಿಸಿಕೊಳ್ಳದೆ ಗುತ್ತಿಗೆದಾರರಿಗೆ ಹಣ ಪಾವತಿಸುವ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸುವ ಸಂಬಂಧ ರಾಜ್ಯ ಸರಕಾರವು ಆದೇಶ ಹೊರಡಿಸಬೇಕು’ ಎಂದು ಭಾರತ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿಯಲ್ಲಿ ಸಲಹೆ ನೀಡಿದೆ.

ಬುಧವಾರ ವಿಧಾನಸಭೆಯಲ್ಲಿ ಮಾರ್ಚ್ 2021ಕ್ಕೆ ಕೊನೆಗೊಂಡ ವರ್ಷಕ್ಕೆ ಲೋಕೋಪಯೋಗಿ ಇಲಾಖೆಯಲ್ಲಿ ರಸ್ತೆ ಕಾಮಗಾರಿಗಳ ಯೋಜನೆ ಮತ್ತು ಗುತ್ತಿಗೆ ನಿರ್ವಹಣೆ ಮೇಲಿನ ಕಾರ್ಯನಿರ್ವಹಣಾ ಸಮೀಕ್ಷೆ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದರು.

ಕಾಮಗಾರಿ ಅನುಷ್ಠಾನದಲ್ಲಿ ಉಂಟಾದ ಅಡಚಣೆಯನ್ನು ಸ್ಪಷ್ಟವಾಗಿ ದಾಖಲಿಸುವ ಮತ್ತು ಒಪ್ಪಂದ ನಿಬಂಧನೆಗಳಿಗೆ ಅನುಸಾರವಾಗಿ ಕಾರ್ಯನಿರ್ವಹಿಸುವ ‘ಅಡಚಣೆ ರಿಜಿಸ್ಟರ್’ ಅನ್ನು ಲೋಕೋಪಯೋಗಿ ಇಲಾಖೆ ನಿರ್ವಹಿಸುವುದನ್ನು ಸರಕಾರ ಖಚಿತಪಡಿಸಿಕೊಳ್ಳಬೇಕು. ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿ ಪಡೆದ ನಂತರವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ.

ರಸ್ತೆ ಅಭಿವೃದ್ಧಿಗೆ ಸಮಗ್ರ ವಾರ್ಷಿಕ ಮತ್ತು ಪಂಚವಾರ್ಷಿಕ ಯೋಜನೆಗಳನ್ನು ಸಿದ್ಧಪಡಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ತಾಂತ್ರಿಕ ಮಂಜೂರಾತಿ ನೀಡುವ ಪ್ರಾಧಿಕಾರಿಗಳು ಅಂದಾಜುಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ತಪ್ಪಾದ ಅಂದಾಜಿನಿಂದ ನಷ್ಟ, ಹಾನಿಗಳ ಹೊಣೆಗಾರಿಕೆಯನ್ನು ನಿಗದಿಗೊಳಿಸಬೇಕು.

ರಸ್ತೆ ಸುರಕ್ಷತಾ ಲೆಕ್ಕ ಪರಿಶೋಧನೆಗಳನ್ನು ಕಡ್ಡಾಯವಾಗಿ ನಡೆಸುವುದನ್ನು ಮತ್ತು ತಾಂತ್ರಿಕ ಮಂಜೂರಾತಿ ನೀಡುವ ಮೊದಲು ಅಂದಾಜುಗಳಲ್ಲಿ ಅಗತ್ಯವಿರುವ ರಸ್ತೆ ಸುರಕ್ಷತಾ ನಿಬಂಧನೆಗಳನ್ನು ಸೇರಿಸಲಾಗಿದೆ ಎಂಬುದರ ಕುರಿತು ಗಮನಿಸಬೇಕು. ರಸ್ತೆ ಸುಧಾರಣೆ ಆಥವಾ ಅಭಿವೃದ್ಧಿ ಕಾಮಗಾರಿಗಳ ಸ್ಥಳದಿಂದ ಉಪಯುಕ್ತತೆಗಳನ್ನು ವರ್ಗಾಯಿಸಲು ನೀತಿ ಅಥವಾ ಮಾರ್ಗಸೂಚಿ ರೂಪಿಸುವುದನ್ನು ಪರಿಗಣಿಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಕ್ರಮಗಳಲ್ಲಿ ಭಾಗಿಯಾಗಿರುವ ಟೆಂಡರ್‍ದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಸರಕಾರದ ಸೂಚನೆಗಳನ್ನು ಉಲ್ಲಂಘಿಸಿ ಏಕೈಕ ಬಿಡ್ಡನ್ನು ಸ್ವೀಕರಿಸಿದ ಟೆಂಡರ್ ಅಂಗೀಕರಿಸುವ ಪ್ರಾಧಿಕಾರದ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲು ಅಗತ್ಯ ನಿಬಂಧನೆಗಳನ್ನು ಇಲಾಖೆಯ ಸಂಹಿತೆಯಲ್ಲಿ ಸೇರಿಸಬೇಕು ಎಂದು ಸಿಎಜಿ ತನ್ನ ವರದಿಯಲ್ಲಿ ಸಲಹೆ ನೀಡಿದೆ.

share
Next Story
X