ಬಾವಿಗೆ ಬಿದ್ದು ಮಹಿಳೆ ಮೃತ್ಯು

ಉಡುಪಿ : ನೀರು ತರಲು ಹೋಗಿದ್ದ ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಫೆ.21ರಂದು ಮಧ್ಯಾಹ್ನ ವೇಳೆ ಕಡಿಯಾಳಿ ಎಂಬಲ್ಲಿ ನಡೆದಿದೆ.
ಮೃತರನ್ನು ಕಡಿಯಾಳಿ ಕಮಲಾಬಾಯಿ ಹೈಸ್ಕೂಲ್ ಹಿಂಭಾಗದ ನಿವಾಸಿ ಜಯರಾಮ ಶೆಟ್ಟಿ ಎಂಬವರ ಪತ್ನಿ ವಸಂತಿ ಶೆಟ್ಟಿ (67) ಎಂದು ಗುರುತಿಸ ಲಾಗಿದೆ. ಇವರು ಮನೆಯ ಬಾವಿಯಿಂದ ನೀರು ತರಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





