Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನು ಮುಂದೆ ವಕ್ಫ್‌ನಿಂದಲೇ ವಿವಾಹ...

ಇನ್ನು ಮುಂದೆ ವಕ್ಫ್‌ನಿಂದಲೇ ವಿವಾಹ ಪ್ರಮಾಣ ಪತ್ರ: ಸರಕಾರದ ಅಧಿಕೃತ ಆದೇಶ

22 Feb 2023 11:42 PM IST
share
ಇನ್ನು ಮುಂದೆ ವಕ್ಫ್‌ನಿಂದಲೇ ವಿವಾಹ ಪ್ರಮಾಣ ಪತ್ರ: ಸರಕಾರದ ಅಧಿಕೃತ ಆದೇಶ

ಮಂಗಳೂರು, ಫೆ.22: ರಾಜ್ಯದಲ್ಲಿ ವಕ್ಫ್ ಮಂಡಳಿಯಿಂದ ಮುಸ್ಲಿಮ್ ದಂಪತಿಗೆ ವಿವಾಹ ಪ್ರಮಾಣ ಪತ್ರ ನೀಡುವುದಕ್ಕೆ ಉಂಟಾಗಿದ್ದ ಕಾನೂನು ತೊಡಕುಗಳು ನಿವಾರಣೆಯಾಗಿದ್ದು, ಇನ್ನು ಮುಂದೆ ವಕ್ಫ್‌ನಿಂದಲೇ ವಿವಾಹ ಪ್ರಮಾಣ ಪತ್ರ ದೊರೆಯಲಿದೆ.

ಮಂಗಳವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ಮುಜರಾಯಿ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅಧ್ಯಕ್ಷತೆಯಲ್ಲಿ ನಡೆದ ವಕ್ಫ್ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ವಿವಾಹ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ಸರಕಾರ ವಕ್ಫ್‌ಗೆ ಮಾತ್ರ ನೀಡಿದ್ದು, ಸರಕಾರ ಇದೀಗ ಅಧಿಕೃತ ಆದೇಶ ಹೊರಡಿಸಿದೆ.

ಎರಡು ವರ್ಷಗಳ ಹಿಂದೆ ವಕ್ಫ್‌ನಿಂದ ನೀಡಲಾಗುತ್ತಿದ್ದ ವಿವಾಹ ಪ್ರಮಾಣ ಪತ್ರಕ್ಕೆ ಸಂಬಂಧಿಸಿ ಹೈದರಾಬಾದ್ ಕರ್ನಾಟಕದ ಖಾಝಿ ಮುಹಮ್ಮದ್ ಹುಸೈನ್ ಸಿದ್ದೀಖಿ ಮತ್ತು ಇನ್ನೊಬ್ಬರು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದಲ್ಲಿ ಪ್ರಶ್ನಿಸಿದ್ದ ಹಿನ್ನೆಲೆಯಲ್ಲಿ ವಕ್ಫ್‌ನಿಂದ ವಿವಾಹ ಪ್ರಮಾಣ ಪತ್ರ ನೀಡುವುದಕ್ಕೆ ತಡೆ ಉಂಟಾಗಿತ್ತು. ಹೈಕೋರ್ಟ್ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಸರಕಾರಕ್ಕೆ ಆದೇಶ ನೀಡಿತ್ತು ಎನ್ನಲಾಗಿದೆ.

ಖಾಝಿಗಳಿಗೆ ವಿವಾಹ ಪ್ರಮಾಣ ಪತ್ರ ನೀಡಲು ಅಧಿಕಾರ ಇದೆಯೇ? ಎಂದು ಪರಿಶೀಲಿಸುವಂತೆ ಉಚ್ಚ ನ್ಯಾಯಾಲಯವು ಸರಕಾರಕ್ಕೆ ಸೂಚಿಸಿತ್ತು. ಆದರೆ ಸರಕಾರ ನಿರ್ಧಾರ ಕೈಗೊಳ್ಳುವಲ್ಲಿ ತಡವಾದ ಹಿನ್ನೆಲೆಯಲ್ಲಿ ವಿವಾಹ ಪ್ರಮಾಣ ಪತ್ರಕ್ಕಾಗಿ ಅಲೆದಾಡಬೇಕಾದ ಪರಿಸ್ಥಿತಿ ಇತ್ತು.

ವಕ್ಫ್‌ನಿಂದ ವಿವಾಹ ಪತ್ರ ನೀಡುವುದು ಸ್ಥಗಿತಗೊಂಡ ಕಾರಣದಿಂದಾಗಿ ಮುಸ್ಲಿಮ್ ದಂಪತಿ ವಿವಾಹ ಪ್ರಮಾಣ ಪತ್ರಕ್ಕಾಗಿ ಉಪನೋಂದಣಿ ಕಚೇರಿಗೆ ಅಲೆದಾಡಬೇಕಾದ ಸಮಸ್ಯೆ ಉಂಟಾಗಿತ್ತು.

ಏಳು ಷರತ್ತುಗಳು: ವಿವಾಹಿತ ಮುಸ್ಲಿಮ್ ಅರ್ಜಿದಾರರಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ವಕ್ಫ್ ಮಂಡಳಿ ಮತ್ತು ಜಿಲ್ಲೆಗಳ ವಕ್ಫ್ ಅಧಿಕಾರಿಗಳಿಗೆ 7 ಷರತ್ತುಗಳನ್ನು ವಿಧಿಸಿದೆ. ಅವುಗಳ ವಿವರ ಇಂತಿವೆ.

ವಿವಾಹ ಪ್ರಮಾಣ ಪತ್ರ ಪಡೆಯಲು ವರ ಮತ್ತು ವಧು ತಮ್ಮ ಹೆಸರು, ತಂದೆಯ ಹೆಸರು, ಮದುವೆಯ ದಿನಾಂಕ, ಮದುವೆಯ ಸ್ಥಳ, ವಕೀಲ ಮತ್ತು ಸಾಕ್ಷಿಯ ಹೆಸರನ್ನು ಸೂಚಿಸುವ ಜಂಟಿ ಅಫಿಡವಿಟ್ ಅನ್ನು ಸಲ್ಲಿಸಬೇಕು.

ಅರ್ಜಿದಾರರು ಸಂಬಂಧಪಟ್ಟ ಮಸೀದಿಯ ಆಡಳಿತ ಸಮಿತಿಯಿಂದ ವಿವಾಹ ನೋಂದಾಯಿಸಿದ ಬಗ್ಗೆ ದಾಖಲೆ ನಿಕಾಹ್-ನಾಮಾ ಒದಗಿಸಬೇಕು.

ವಕ್ಫ್ ಅಧಿಕಾರಿಯು ವಿವಾಹ ಪ್ರಮಾಣಪತ್ರವನ್ನು ನೀಡುವ ಮೊದಲು ಸಂಬಂಧಪಟ್ಟ ಮಸೀದಿಯಿಂದ ನೀಡಿದ ಅರ್ಜಿದಾರರಿಂದ ಒದಗಿಸಲಾದ ಮೂಲ ನಿಕಾಹ್-ನಾಮವನ್ನು ಪರಿಶೀಲಿಸಬೇಕು.

ವಿತರಣಾ ಪ್ರಾಧಿಕಾರವು ಮದುವೆಯ ಪ್ರಮಾಣಪತ್ರವನ್ನು ನೀಡುವ ಮೊದಲು ಆಯಾ ಮಸೀದಿಯಿಂದ ನಿರ್ವಹಿಸಲ್ಪಟ್ಟ ಮೂಲ ವಿವಾಹ ನೋಂದಣಿ ದಾಖಲೆಯನ್ನು ಪರಿಶೀಲಿಸುತ್ತದೆ.

ವಿತರಿಸುವ ಪ್ರಾಧಿಕಾರವು ವರ ಮತ್ತು ವಧುವಿನ ಪೂರ್ವ ಅವಶ್ಯಕತೆಯಂತೆ ಜಂಟಿ ಭಾವಚಿತ್ರಗಳನ್ನು ಪಡೆಯಬೇಕು.

ದೂರವಾಣಿ ಮೂಲಕ ನಡೆದ ವಿವಾಹ ಮತ್ತು ವೆಬ್ ಮೂಲಕ ನಡೆದ ಮದುವೆಗೆ ಪ್ರಮಾಣ ಪತ್ರ ನೀಡುವಂತಿಲ್ಲ.

ಎನ್‌ಆರ್‌ಐ/ವಿದೇಶಿ ನಾಗರಿಕರಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡುವಾಗ ನ್ಯಾಯವ್ಯಾಪ್ತಿಯ ಪೊಲೀಸ್ ಪ್ರಾಧಿಕಾರ/ಪೊಲೀಸ್ ಆಯುಕ್ತರ ಕಚೇರಿ(ವಿದೇಶಿ ಶಾಖೆ)/ಆಯಾ ಜಿಲ್ಲೆಗಳ ಪೊಲೀಸ್ ಅಧೀಕ್ಷಕರ ಕಚೇರಿಯಿಂದ ಪೂರ್ವಾನುಮತಿ ಪಡೆಯತಕ್ಕದ್ದು.

"ವಿವಾಹ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ವಕ್ಫ್‌ಗೆ ನೀಡುವಂತೆ ನಾವು ಹಲವು ಸಮಯಗಳಿಂದ ಹೋರಾಟ ನಡೆಸುತ್ತಿದ್ದೆವು. ಇದೀಗ ಸರಕಾರ ಈ ಅಧಿಕಾರವನ್ನು ವಕ್ಫ್‌ಗೆ ನೀಡಿದ್ದು, ನಮ್ಮ ಹೋರಾಟ ಯಶಸ್ವಿಯಾಗಿದೆ".

ಬಿ.ಎ.ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ಅಧ್ಯಕ್ಷರು, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ

share
Next Story
X