Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರ್ಮಿಕ ಮತಾಂತರಗಳ ಮೂಲಕ ಭಾರತದ ವಿರುದ್ಧ...

ಧಾರ್ಮಿಕ ಮತಾಂತರಗಳ ಮೂಲಕ ಭಾರತದ ವಿರುದ್ಧ ಯುದ್ಧ ಸಾರಿದ ಆರೋಪ ಹೊತ್ತ ಸರ್ಕಾರಿ ಉದ್ಯೋಗಿಗೆ ಸುಪ್ರೀಂ ಕೋರ್ಟ್‌ ಜಾಮೀನು

23 Feb 2023 12:12 PM IST
share
ಧಾರ್ಮಿಕ ಮತಾಂತರಗಳ ಮೂಲಕ ಭಾರತದ ವಿರುದ್ಧ ಯುದ್ಧ ಸಾರಿದ ಆರೋಪ ಹೊತ್ತ ಸರ್ಕಾರಿ ಉದ್ಯೋಗಿಗೆ ಸುಪ್ರೀಂ ಕೋರ್ಟ್‌ ಜಾಮೀನು

ಹೊಸದಿಲ್ಲಿ: ಕಾನೂನುಬಾಹಿರ ಧಾರ್ಮಿಕ ಮತಾಂತರಗಳ ಮೂಲಕ ಭಾರತದ ವಿರುದ್ಧ ಯುದ್ಧ ಸಾರಿದ್ದಾನೆಂಬ ಆರೋಪ ಎದುರಿಸುತ್ತಿದ್ದ ಸರ್ಕಾರಿ ಉದ್ಯೋಗಿಯೊಬ್ಬನಿಗೆ ಸುಪ್ರೀಂ ಕೋರ್ಟ್‌ (Supreme Court) ಬುಧವಾರ ಜಾಮೀನು ಮಂಜೂರುಗೊಳಿಸಿದೆ.

ಆರೋಪಿ ಇರ್ಫಾನ್‌ ಶೇಖ್‌ ಕಳೆದೊಂದು ವರ್ಷಕ್ಕೂ ಹೆಚ್ಚು ಸಮಯದಿಂದ ಕಸ್ಟಡಿಯಲ್ಲಿರುವುದು ಹಾಗೂ ಪ್ರಕರಣದ ವಿಚಾರಣೆ ಇನ್ನೂ ಆರಂಭಗೊಳ್ಳದೇ ಇರುವುದನ್ನು ಗಣನೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಹಾಗೂ ಸುಧಾಂಶು ಧುಲಿಯಾ ಅವರ ಪೀಠವು ಜಾಮೀನು ಮಂಜೂರುಗೊಳಿಸಿದೆ.

ಕೇಂದ್ರ ಸರ್ಕಾರದ ಉದ್ಯೋಗಿಯಾಗಿರುವ ಶೇಖ್‌ನನ್ನು ಉತ್ತರ ಪ್ರದೇಶದ ಉಗ್ರ ನಿಗ್ರಹ ಪಡೆಯು ಜೂನ್‌ 28, 2021 ರಂದು ಬಂಧಿಸಿತ್ತು. ಪಾಕಿಸ್ತಾನದ ಐಎಸ್‌ಐ ಮತ್ತು ಇತರ ಧಾರ್ಮಿಕ ಸಂಘಟನೆಗಳ ನಿರ್ದೇಶಾನುಸಾರ ಜನರನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಕೆಲ ದೇಶ ವಿರೋಧಿ ಶಕ್ತಿಗಳು ಮತ್ತು ಧಾರ್ಮಿಕ ಸಂಘಟನೆಗಳ ಕುರಿತು ಮಾಹಿತಿ ದೊರಕಿದೆ ಎಂದು ಉಗ್ರ ನಿಗ್ರಹ ಪಡೆ ಹೇಳಿಕೊಂಡಿತ್ತು.

ಪ್ರಕರಣದಲ್ಲಿ ಬಂಧಿತರಾದ ಎಂಟು ಮಂದಿಯಲ್ಲಿ ಶೇಖ್‌ ಕೂಡ ಸೇರಿದ್ದ. ಐಪಿಸಿ ಯ ವಿವಿಧ ಸೆಕ್ಷನ್‌ಗಳು ಹಾಗೂ ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಗ್ರಹ ಕಾಯಿದೆಯಡಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಎಪ್ರಿಲ್‌ ತಿಂಗಳಿನಲ್ಲಿ ಅಲಹಾಬಾದ್‌ ಹೈಕೋರ್ಟ್‌ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಶೇಖ್‌ ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದರು.

ವಿಚಾರಣಾ ನ್ಯಾಯಾಲಯ ಶೇಖ್‌ಗೆ ಷರತುಬದ್ಧ ಜಾಮೀನು ನೀಡಬಹುದು, ಆತನಿಗೆ ವಿಚಾರಣೆ ಸಂದರ್ಭ ಹೊರತುಪಡಿಸಿ ಇತರ ಸಮಯಗಳಲ್ಲಿ ಉತ್ತರ ಪ್ರದೇಶ ಪ್ರವೇಶಿಸದಂತೆ ನಿರ್ಬಂಧಿಸಬಹುದು ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ಉತ್ತರ ಪ್ರದೇಶದ ಹೊರಗಿನ ಇಬ್ಬರು ಶೂರಿಟಿಗಳನ್ನು ಪಡೆಯಲೂ ಸುಪ್ರೀಂ ಕೋರ್ಟ್‌ ಶೇಖ್‌ಗೆ ಅನುಮತಿಸಿದೆ.

ಕೇಂದ್ರ ಸರ್ಕಾರದ ತನ್ನ ಹುದ್ದೆಯನ್ನು ದುರ್ಬಳಕೆ ಮಾಡಿ ಧಾರ್ಮಿಕ ಮತಾಂತರ ನಡೆಸುತ್ತಿದ್ದ. ಇದು ದೇಶದ ಜಾತ್ಯತೀತತೆಯ ಮೇಲೆ ಪ್ರಭಾವ ಬೀರಬಹುದು ಎಂದು ಫೆಬ್ರವರಿ 15 ರಂದು ನಡೆದ ವಿಚಾರಣೆ ವೇಳೆ ಉತ್ತರ ಪ್ರದೇಶ ಸರ್ಕಾರ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ಕೆ ಎಂ ನಟರಾಜ್‌ ಹೇಳಿದ್ದರು.

ಇದನ್ನೂ ಓದಿ: ಆದಿತ್ಯನಾಥ್ ವಿರುದ್ಧ ಪದೇ ಪದೇ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 1 ಲಕ್ಷ ರೂ.ದಂಡ 

share
Next Story
X