Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕರ ಕೆಲಸದ ಅವಧಿ 12ಗಂಟೆಗೆ...

ಕಾರ್ಮಿಕರ ಕೆಲಸದ ಅವಧಿ 12ಗಂಟೆಗೆ ಹೆಚ್ಚಳ: ಕಾರ್ಖಾನೆಗಳ(ಕರ್ನಾಟಕ ತಿದ್ದುಪಡಿ) ವಿಧೇಯಕಕ್ಕೆ ಒಪ್ಪಿಗೆ

ರಾತ್ರಿ ಪಾಳಿ ಕೆಲಸಕ್ಕೆ ಮಹಿಳೆಯರಿಗೆ ಇದ್ದ ನಿರ್ಬಂಧ ತೆರವು

23 Feb 2023 6:50 PM IST
share
ಕಾರ್ಮಿಕರ ಕೆಲಸದ ಅವಧಿ 12ಗಂಟೆಗೆ ಹೆಚ್ಚಳ: ಕಾರ್ಖಾನೆಗಳ(ಕರ್ನಾಟಕ ತಿದ್ದುಪಡಿ) ವಿಧೇಯಕಕ್ಕೆ ಒಪ್ಪಿಗೆ
ರಾತ್ರಿ ಪಾಳಿ ಕೆಲಸಕ್ಕೆ ಮಹಿಳೆಯರಿಗೆ ಇದ್ದ ನಿರ್ಬಂಧ ತೆರವು

ಬೆಂಗಳೂರು, ಫೆ. 23: ಆರ್ಥಿಕ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವ ನಿಟ್ಟಿನಲ್ಲಿ ರಾಜ್ಯದ ಕಾರ್ಖಾನೆಗಳಲ್ಲಿ ಕೆಲಸ ಅವಧಿಯನ್ನು 9ಗಂಟೆಯಿಂದ 12ಗಂಟೆಗಳ ವರೆಗೆ ಹೆಚ್ಚಿಸಲು ಮತ್ತು ಆಸಕ್ತಿ ಇರುವ ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸುವ ಮಹತ್ವದ ‘ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ-2023’ಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಕಾರ್ಖಾನೆಗಳಲ್ಲಿ ಸದ್ಯ 9 ಗಂಟೆ ಮಾತ್ರ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ, ಮಹಿಳಾ ಕಾರ್ಮಿಕರನ್ನು ನಿಗದಿತ ಅವಧಿಯವರೆಗೆ ಮಾತ್ರವೇ ಕೆಲಸ ಮಾಡಿಸಲು ಅವಕಾಶವಿತ್ತು. ಆದರೆ, ಇದೀಗ ನೂತನ ವಿಧೇಯಕ ಜಾರಿಗೆ ಬಂದರೆ ದಿನದ 24 ಗಂಟೆಯ ಅವಧಿಯಲ್ಲಿ ಮಹಿಳಾ ಕಾರ್ಮಿಕರ ಒಪ್ಪಿಗೆ ಇದ್ದರೆ ಯಾವ ಹೊತ್ತಿನಲ್ಲಾದರೂ ಕೆಲಸ ಮಾಡಲು ಅನುಮತಿ ದೊರೆಯಲಿದೆ.

‘ಹೊಸ ಕಾಯ್ದೆ ಜಾರಿಗೆ ಬಂದ ನಂತರ ವಾರದಲ್ಲಿ ಗರಿಷ್ಠ 48 ಗಂಟೆಗಳ ಕೆಲಸ. ವಿರಾಮ, ಮಧ್ಯಂತರಗಳನ್ನು ಒಳಗೊಂಡಂತೆ ಕೆಲಸದ ಅವಧಿ(ದೈನಂದಿನ ಗರಿಷ್ಠ) 9 ಗಂಟೆಯಿಂದ 12 ಗಂಟೆಗೆ ಹೆಚ್ಚಲಿದೆ. ಇದಕ್ಕೆ ಕೆಲಸಗಾರನ ಲಿಖಿತ ಒಪ್ಪಿಗೆಯ ಅಗತ್ಯವಿದ್ದು, ಆಗ ಮಾತ್ರ ಕೆಲಸದ ಅವಧಿ 12 ಗಂಟೆಗಳಿಗೆ ವಿಸ್ತರಿಸಬಹುದು’ ಎಂದು ಉಲ್ಲೇಖಿಸಲಾಗಿದೆ.

‘ಒಬ್ಬ ಕಾರ್ಮಿಕ ದಿನಕ್ಕೆ 12 ಗಂಟೆಗಳಂತೆ ವಾರದಲ್ಲಿ ಒಟ್ಟು 48 ಗಂಟೆ ಕೆಲಸ ಮಾಡಿದರೆ ವಾರದಲ್ಲಿ ನಾಲ್ಕು ದಿನ ಮಾತ್ರ ಕೆಲಸ ಮಾಡಿದಂತೆ ಆಗುತ್ತದೆ. ಉಳಿದ ದಿನಗಳನ್ನು ಪಾವತಿ ರಜಾ ದಿನಗಳನ್ನಾಗಿ ಪರಿಗಣಿಸಬೇಕಾಗುತ್ತದೆ. ಕಾರ್ಮಿಕನಿಗೆ ವಾರದ ಉಳಿದ ದಿನಗಳು ಪಾವತಿ ರಜಾ ದಿನಗಳಾಗಿ ಪರಿಗಣಿಸಲಾಗುವುದು’ ಎಂದು ತಿಳಿಸಲಾಗಿದೆ.

ದುಪ್ಪಟ್ಟು ಮಜೂರಿ: ವಾರದಲ್ಲಿ ಐದು ದಿನಗಳು ಕೆಲಸ ಮಾಡುವ ವೇಳೆ ಯಾವುದೇ ದಿನದಲ್ಲಿ 10 ಗಂಟೆಗಳಿಗಿಂತ ಹೆಚ್ಚು ಅಥವಾ ಯಾವುದೇ ವಾರದಲ್ಲಿ 48 ಗಂಟೆಗಳಿಂತ ಹೆಚ್ಚು ಕೆಲಸ ಮಾಡಿದರೆ, ಯಾವುದೇ ವಾರದಲ್ಲಿ ನಾಲ್ಕು ದಿನಗಳು ಕೆಲಸ ಮಾಡುವಾಗ ಅಥವಾ ಪಾವತಿ ರಜಾ ದಿನಗಳಲ್ಲಿ ಕೆಲಸ ಮಾಡುವಾಗ ಹನ್ನೊಂದುವರೆ ಗಂಟೆಗಳಿಗಿಂತ ಹೆಚ್ಚಾದಲ್ಲಿ ಕಾರ್ಮಿಕರಿಗೆ ‘ದುಪ್ಪಟ್ಟು ಮಜೂರಿ’ಗೆ ಅರ್ಹನಾಗುತ್ತಾನೆ ಎಂದು ವಿಧೇಯಕದಲ್ಲಿ ತಿಳಿಸಲಾಗಿದೆ.

ನಿರ್ಬಂಧ ತೆರವು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕಾರ್ಮಿಕರಿಂದ ಲಿಖಿತ ಒಪ್ಪಿಗೆ ಪಡೆದು ಅವಕಾಶ ನೀಡಬಹುದಾಗಿದೆ. ಅವಧಿ ಮೀರಿ ಕೆಲಸಕ್ಕಾಗಿ (ಓವರ್ ಟೈಮ್) ಮಹಿಳಾ ಕೆಲಸಗಾರರಿಗೆ ಅನುವು ಮಾಡಿಕೊಡಬೇಕು. ಜೊತೆಗೆ ಕೆಲಸ ಮಾಡುವ ಮಹಿಳಾ ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು. ಮಾತ್ರವಲ್ಲ, ರಾತ್ರಿ ಪಾಳಿಯಲ್ಲಿ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಮಹಿಳಾ ಭದ್ರತೆಯನ್ನು ಕಲ್ಪಿಸಬೇಕು.

ರಾತ್ರಿ ಪಾಳಿಗಳಲ್ಲಿ ಕೆಲಸ ಮಾಡುವಂತೆ ಯಾವೊಬ್ಬ ಮಹಿಳಾ ನೌಕರರಿಗೆ ಕಡ್ಡಾಯ ಅಥವಾ ಕಟ್ಟುಪಾಡು ಮಾಡತಕ್ಕದ್ದಲ್ಲ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಮಹಿಳಾ ನೌಕರರಿಂದ ಲಿಖಿತ ಸಮ್ಮತಿ ಪಡೆಯತಕ್ಕದ್ದು. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಕೃತ್ಯ ಎಸಗುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಧೇಯಕದಲ್ಲಿ ತಿಳಿಸಲಾಗಿದೆ.

share
Next Story
X