Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಕ್ಸೊ ಕೇಸ್‍ನಲ್ಲಿ ಜಾಮೀನು:...

ಪೊಕ್ಸೊ ಕೇಸ್‍ನಲ್ಲಿ ಜಾಮೀನು: ಸಂತ್ರಸ್ತರಿಗೆ ಮಾಹಿತಿ ಕೊಡುವುದು ಕಡ್ಡಾಯ ಎಂದ ಹೈಕೋರ್ಟ್

23 Feb 2023 7:40 PM IST
share
ಪೊಕ್ಸೊ ಕೇಸ್‍ನಲ್ಲಿ ಜಾಮೀನು: ಸಂತ್ರಸ್ತರಿಗೆ ಮಾಹಿತಿ ಕೊಡುವುದು ಕಡ್ಡಾಯ ಎಂದ ಹೈಕೋರ್ಟ್

ಬೆಂಗಳೂರು, ಫೆ.23: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ ) ಕಾಯ್ದೆ-2012 ಅಡಿ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಅನುಸರಿಸಬೇಕಾದ ಕ್ರಮಗಳ ಕುರಿತು ಹೈಕೋರ್ಟ್ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದೆ.

ಈ ಕುರಿತಂತೆ ಬೆಂಗಳೂರಿನ ಮೂವರು ಸಂತ್ರಸ್ತ ಪೋಷಕರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಂತ್ರಸ್ತ ಮಕ್ಕಳ ರಕ್ಷಣೆ ನಿಟ್ಟಿನಲ್ಲಿ ಹಲವು ನಿರ್ದೇಶನಗಳನ್ನು ನೀಡಿದೆ.

ಪೀಠ ತನ್ನ ಆದೇಶದಲ್ಲಿ, ಪೊಕ್ಸೊ ಪ್ರಕರಣಗಳಲ್ಲಿ ಆರೋಪ ಸಾಬೀತು ಮಾಡುವುದು ಸರಕಾರದ ಹೊಣೆಗಾರಿಕೆಯಾಗಿದೆ. ಹಾಗೆಯೇ, ಸಂತ್ರಸ್ತ ಮಗು ಹಾಗೂ ದೂರುದಾರರು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಅಭಿಯೋಜಕರಿಗೆ ಅಗತ್ಯ ಮಾಹಿತಿಗಳನ್ನು ನೀಡಬೇಕಾಗುತ್ತದೆ, ಆದರೆ ಅಭಿಯೋಜನಾ ವ್ಯವಸ್ಥೆ ಈಗಾಗಲೇ ಅಧಿಕ ಭಾರದಿಂದ ನಲುಗುತ್ತಿದೆ.

ಪ್ರಕರಣದ ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ ಸಂತ್ರಸ್ತರಿಗೆ ಈ ಬಗ್ಗೆ ಮಾಹಿತಿಯೇ ಇರುವುದಿಲ್ಲ, ಹೀಗಾಗಿ, ಪೋಕ್ಸೋ ಪ್ರಕರಣಗಳಲ್ಲಿ ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ ವಿಶೇಷ ನ್ಯಾಯಾಲಯಗಳು ಸಂತ್ರಸ್ತ ಕುಟುಂಬಕ್ಕೆ, ಪೋಷಕರಿಗೆ ಅಥವಾ ಅವರ ವಕೀಲರಿಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ನಿರ್ದೇಶಿಸಿದೆ.

ಹೈಕೋರ್ಟ್ ನಿರ್ದೇಶನಗಳೇನು?: ಪೊಕ್ಸೊ ಪ್ರಕರಣದಲ್ಲಿ ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ ತನಿಖಾಧಿಕಾರಿಯು ಸಂತ್ರಸ್ತರ ಪೋಷಕರು ಅಥವಾ ಪಾಲಕರು ಹಾಗೂ ಅಭಿಯೋಜಕರಿಗೆ ಮಾಹಿತಿ ನೀಡಬೇಕು, ಸರಕಾರಿ ಅಭಿಯೋಜಕರು ಜಾಮೀನು ಅರ್ಜಿಗೆ ತಕ್ಷಣವೇ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು. ಈ ವೇಳೆ ಅಭಿಯೋಜಕರಿಗೆ ತನಿಖಾಧಿಕಾರಿ ಹಾಗೂ ಸಂತ್ರಸ್ತರ ಕುಟುಂಬದವರು ಅಗತ್ಯ ಸಹಕಾರ ಹಾಗೂ ಮಾಹಿತಿ ನೀಡಬೇಕು.

ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ತನಿಖಾಧಿಕಾರಿಯ ಸಹಾಯ ಪಡೆಯಬೇಕು, ದೊರಕದಿದ್ದರೆ ಆ ಬಗ್ಗೆ ಸೂಕ್ತ ಲಿಖಿತ ಕಾರಣಗಳೊಂದಿಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಒಂದು ವೇಳೆ ಇಂತಹ ಪ್ರಕರಣದ ಆರೋಪಿ ಸಂತ್ರಸ್ತ ಕುಟುಂಬಕ್ಕೆ ಪರಿಚಯಸ್ಥ ಆಗಿದ್ದರೆ ಜಾಮೀನಿಗೆ ಸಲ್ಲಿಸಿರುವ ಆಕ್ಷೇಪಣೆ ದಾಖಲೆಗಳನ್ನು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ)ಗಳಿಗೂ ಸಲ್ಲಿಸಬೇಕು.

ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಸಂಬಂಧಿಸಿದ ನ್ಯಾಯಾಲಯ ಸಂತ್ರಸ್ತರ ಕುಟುಂಬಕ್ಕೆ ನೋಟಿಸ್ ಜಾರಿಯಾಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಸಂತ್ರಸ್ತರ ವಾದ ಆಲಿಸಬೇಕು. ಒಂದು ವೇಳೆ ನೋಟಿಸ್ ಜಾರಿಯಾದ ನಂತರವೂ ಸಂತ್ರಸ್ತರ ಕಡೆಯಿಂದ ಯಾರೂ ಹಾಜರಾಗದಿದ್ದರೆ ವಿಶೇಷ ನ್ಯಾಯಾಲಯ ತನ್ನ ವಿಚಾರಣಾ ಪ್ರಕ್ರಿಯೆ ಮುಂದುವರಿಸಬಹುದು. 

ಸಂತ್ರಸ್ತರು/ದೂರುದಾರರು/ಮಾಹಿತಿದಾರರು ಸ್ವಂತ ವಕೀಲರ ಮೂಲಕ ಅಥವಾ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ನೇಮಿಸಲ್ಪಟ್ಟ ವಕೀಲರಿಂದ ಪ್ರತಿನಿಧಿಸಬಹುದು. ಹೀಗೆ ನೇಮಕಗೊಂಡ ವಕೀಲರಿಗೆ ಸೇವಾ ಶುಲ್ಕ ಪಾವತಿಸಲು ಸರಕಾರ ಅಗತ್ಯ ಹಣಕಾಸು ಸೌಲಭ್ಯ ನೀಡಬೇಕು.

ಸಾಕ್ಷಿ ಸಂರಕ್ಷಣೆ ಯೋಜನೆ-2018ರ ಅಡಿಯಲ್ಲಿ ಲಭ್ಯವಿರುವ ರಕ್ಷಣೆ ಬಗ್ಗೆ ತಿಳಿಸಬೇಕು. ಒಂದು ವೇಳೆ ರಕ್ಷಣೆ ಅಗತ್ಯವಿದ್ದಲ್ಲಿ ಸೂಕ್ತ ಭದ್ರತೆ ಒದಗಿಸಬೇಕು, ವಿಸ್ಲ್ ಬ್ಲೋವರ್‍ನಿಂದ ಮಾಹಿತಿ ಪಡೆದ ಸಂದರ್ಭದಲ್ಲಿ ವಿಸ್ಲ್ ಬ್ಲೋವರ್ಸ್ ಪ್ರೊಟೆಕ್ಷನ್ ಆಕ್ಟ್-2014ರ ಪ್ರಕಾರ ಅಗತ್ಯ ರಕ್ಷಣೆ ಒದಗಿಸಬೇಕು.

ಹೈಕೋರ್ಟ್‍ನ ಈ ಆದೇಶದ ಪ್ರತಿಯನ್ನು ಎಲ್ಲ ಜಿಲ್ಲಾ ನ್ಯಾಯಾಲಯಗಳಿಗೆ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ತಲುಪಿಸಬೇಕು. ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ಈ ಕುರಿತಂತೆ ಅಗತ್ಯ ಸೂಚನೆಗಳನ್ನು ನೀಡಬೇಕು.

share
Next Story
X