Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿಗೆ ಸುಪ್ರೀಂ ಕೋರ್ಟ್ ಹೆದರುತ್ತದೆ:...

ಮೋದಿಗೆ ಸುಪ್ರೀಂ ಕೋರ್ಟ್ ಹೆದರುತ್ತದೆ: ಖ್ಯಾತ ವಕೀಲ ದುಷ್ಯಂತ್ ದವೆ ಸ್ಫೋಟಕ ಹೇಳಿಕೆ

"ಪ್ರಶ್ನೆ ಮಾಡುವ ನ್ಯಾಯಾಂಗ ವ್ಯವಸ್ಥೆ ಇಲ್ಲದೆ ಹೋದರೆ ನ್ಯಾಯದ ಪರಿಕಲ್ಪನೆಯನ್ನು ವಿಫಲಗೊಳಿಸುತ್ತದೆ"

23 Feb 2023 8:37 PM IST
share
ಮೋದಿಗೆ ಸುಪ್ರೀಂ ಕೋರ್ಟ್ ಹೆದರುತ್ತದೆ: ಖ್ಯಾತ ವಕೀಲ ದುಷ್ಯಂತ್ ದವೆ ಸ್ಫೋಟಕ ಹೇಳಿಕೆ
"ಪ್ರಶ್ನೆ ಮಾಡುವ ನ್ಯಾಯಾಂಗ ವ್ಯವಸ್ಥೆ ಇಲ್ಲದೆ ಹೋದರೆ ನ್ಯಾಯದ ಪರಿಕಲ್ಪನೆಯನ್ನು ವಿಫಲಗೊಳಿಸುತ್ತದೆ"

ಹೊಸದಿಲ್ಲಿ: ಗಮನಾರ್ಹ ಬೆಳವಣಿಗೆಯೊಂದರಲ್ಲಿ, ನ್ಯಾಯಾಂಗ ವ್ಯವಸ್ಥೆ ಹಾಗೂ ಕೊಲಿಜಿಯಂ ವ್ಯವಸ್ಥೆ ವಿರುದ್ಧ ಟೀಕಾಪ್ರಹಾರ ನಡೆಸಿರುವ ಖ್ಯಾತ ವಕೀಲ, ಮಾಜಿ ಸುಪ್ರೀಂಕೋರ್ಟ್ ಬಾರ್ ಕೌನ್ಸಿಲ್ ಅಧ್ಯಕ್ಷ ದುಷ್ಯಂತ್ ದವೆ (Dushyant Dave), ಇಂದಿರಾ ಗಾಂಧಿಯಂತೆ ಬಲಿಷ್ಠ ಪ್ರಧಾನಿಯಾಗಿರುವ ನರೇಂದ್ರ ಮೋದಿಗೆ (Narendra Modi)  ನ್ಯಾಯಾಂಗ ತನ್ನನ್ನು ಪ್ರಶ್ನಿಸುವುದು ಇಷ್ಟವಾಗುವುದಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ (Supreme Court) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋಗಲು ಹೆದರುತ್ತಿದೆ" ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

The Wire ಸುದ್ದಿ ಸಂಸ್ಥೆಯ ಸಂದರ್ಶನಕಾರ ಕರಣ್ ಥಾಪರ್‌ಗೆ 36 ನಿಮಿಷಗಳ ಸಂದರ್ಶನ ನೀಡಿರುವ ದುಷ್ಯಂತ್ ದವೆ, "ದಿನದ ಆರಂಭದಿಂದ ದಿನದ ಅಂತ್ಯದವರೆಗೆ ಪ್ರಶ್ನೆ ಮಾಡುವ ನ್ಯಾಯಾಂಗ ವ್ಯವಸ್ಥೆ ಇಲ್ಲದೆ ಹೋದರೆ, ಅಂತಹ ನ್ಯಾಯಾಂಗ ವ್ಯವಸ್ಥೆ ದೇಶ, ಸಂವಿಧಾನ ಹಾಗೂ ನ್ಯಾಯದ ಪರಿಕಲ್ಪನೆಯನ್ನು ವಿಫಲಗೊಳಿಸುತ್ತದೆ" ಎಂದು ಹೇಳಿದ್ದಾರೆ.

ನ್ಯಾಯಾಧೀಶರ ಕಾರ್ಯವೈಖರಿಯ ಕುರಿತೂ ಟೀಕಾಪ್ರಹಾರ ನಡೆಸಿರುವ ಅವರು, "ನಾವು ದೊಡ್ಡ ಸಂಖ್ಯೆಯ ಪ್ರಶ್ನಾರ್ಹ ನ್ಯಾಯಾಧೀಶರನ್ನು ಹೊಂದಿದ್ದೇವೆ. ಅವರು ಒಂದೋ ಅನುಭವದ ಕೊರತೆ ಹೊಂದಿದ್ದಾರೆ ಅಥವಾ ಜ್ಞಾನದ ಕೊರತೆ ಹೊಂದಿದ್ದಾರೆ ಮತ್ತು ಅವರಲ್ಲಿ ಬಹುತೇಕರಿಗೆ ಬದ್ಧತೆಯ ಕೊರತೆ ಇದೆ" ಎಂದು ವಿಶ್ಲೇಷಿಸಿದ್ದಾರೆ.

ಕೊಲಿಜಿಯಂ ವ್ಯವಸ್ಥೆ ಕುರಿತೂ ತೀಕ್ಷ್ಣ ಟೀಕೆ ಮಾಡಿರುವ ದುಷ್ಯಂತ್ ದವೆ, ಕೊಲಿಜಿಯಂ ರಚನೆಗೆ ಕಾರಣವಾದ 1993ರ ತೀರ್ಪನ್ನು ಉಲ್ಲೇಖಿಸಿ, ಆ ವ್ಯವಸ್ಥೆಯ ಪ್ರಕಾರ, ಅತ್ಯುತ್ತಮ ನ್ಯಾಯಾಧೀಶರನ್ನು ಆಯ್ಕೆ ಮಾಡಬೇಕು. ಆದರೆ, ಅವರು ಅದನ್ನು ಮಾಡಿದ್ದಾರೆಯೆ? ನನ್ನ ದೃಷ್ಟಿಯಲ್ಲಿ ಇಲ್ಲ. ಬಾರ್‌ನಲ್ಲಿ ನನ್ನ ಸಹೋದ್ಯೋಗಿಗಳಾಗಿದ್ದ ಹಲವರು ಕಳೆದ 10-15 ವರ್ಷದಲ್ಲಿ, ವಿಶೇಷವಾಗಿ ಕಳೆದ 7-8 ವರ್ಷಗಳಲ್ಲಿ ನೇಮಕವಾಗಿರುವವರು ಯಾವ ಕಾರಣಕ್ಕೂ ನ್ಯಾಯಾಧೀಶರಾಗಲು ಅರ್ಹರಾಗಿರಲಿಲ್ಲ. ಅವರ ಈಗಿನ ಕಾರ್ಯನಿರ್ವಹಣೆಯಂತೆ ಅವರ ನೀಡುವ ತೀರ್ಪುಗಳೂ ಇವೆ. ಅವರು ನ್ಯಾಯಾಲಯದ ಸಭಾಂಗಣದಲ್ಲಿ ವ್ಯಕ್ತಪಡಿಸುವ ಪ್ರತಿಕ್ರಿಯೆಗಳನ್ನು ನೋಡಿದಾಗ, ಇಂತಹ ಪ್ರತಿಕ್ರಿಯೆಗಳನ್ನು ಪರಿಗಣಿಸುವಲ್ಲಿ ಕೊಲಿಜಿಯಂ ವ್ಯವಸ್ಥೆ ಎಲ್ಲಿ ಸೋಲುತ್ತಿದೆ ಎಂದು ನನಗನ್ನಿಸುತ್ತದೆ" ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಾನು ಹೀಗೆ ಏಕೆ ಮಾತನಾಡುತ್ತಿದ್ದೇನೆಂದರೆ, ಯಾರಿಗೂ ಮಾತನಾಡುವುದು ಬೇಕಿಲ್ಲ. ಬಾರ್ ಮೌನವಾಗಿದೆ ಮತ್ತು ಕೊಲಿಜಿಯಂ ವ್ಯವಸ್ಥೆ ಎಲ್ಲವೂ ಸಮರ್ಪಕವಾಗಿದೆ ಎಂಬಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಬ್ಬರು ಯುವಕರನ್ನು ಸುಟ್ಟು ಕೊಂದ ಪ್ರಕರಣ: ಆರೋಪಿ ಮೋನು ಮನೇಸರ್‌ಗೆ ರಾಜಸ್ಥಾನ ಪೊಲೀಸರಿಂದ ಕ್ಲೀನ್‌ ಚಿಟ್; ವರದಿ

share
Next Story
X