Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖರ್ಗೆ ಮುಖ್ಯಮಂತ್ರಿ ಮಾಡಲು ರಾಜಕೀಯ...

ಖರ್ಗೆ ಮುಖ್ಯಮಂತ್ರಿ ಮಾಡಲು ರಾಜಕೀಯ ನಾಯಕರು ವಿಫಲ: ನ್ಯಾ.ಗೋಪಾಲಗೌಡ

‘ಆನ್ ದಿ ರೋಡ್ ಟ್ರೋಡನ್ ಬೈ ಬಾಬಾಸಾಹೇಬ್ ಬಯೋಗ್ರಫಿ ಆಫ್ ಮಲ್ಲಿಕಾರ್ಜುನ ಖರ್ಗೆ’ ಪುಸ್ತಕ ಬಿಡುಗಡೆ

23 Feb 2023 8:52 PM IST
share
ಖರ್ಗೆ ಮುಖ್ಯಮಂತ್ರಿ ಮಾಡಲು ರಾಜಕೀಯ ನಾಯಕರು ವಿಫಲ: ನ್ಯಾ.ಗೋಪಾಲಗೌಡ
‘ಆನ್ ದಿ ರೋಡ್ ಟ್ರೋಡನ್ ಬೈ ಬಾಬಾಸಾಹೇಬ್ ಬಯೋಗ್ರಫಿ ಆಫ್ ಮಲ್ಲಿಕಾರ್ಜುನ ಖರ್ಗೆ’ ಪುಸ್ತಕ ಬಿಡುಗಡೆ

ಬೆಂಗಳೂರು, ಫೆ.23: ಅಂಬೇಡ್ಕರ್ ಅನುಯಾಯಿಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಲು ನಮ್ಮ ರಾಜಕೀಯ ನಾಯಕರು ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾ. ಗೋಪಾಲಗೌಡ ಬೇಸರ ವ್ಯಕ್ತಪಡಿಸಿದ್ದಾರೆ. 

ಗುರುವಾರ ನಗರದ ಗಾಂಧಿ ಭವನದಲ್ಲಿ ಪ್ರೊ. ಮಲ್ಲೇಶ್ವರಂ ಸಾಂಸ್ಕೃತಿಕ ಪ್ರತಿಷ್ಠಾನವು ಆಯೋಜಿಸಿದ್ದ ಎನ್.ತಿರುಮಲೇಶ್ವರ ಭಟ್ಟ ಅನುವಾದಿಸಿದ ‘ಆನ್ ದಿ ರೋಡ್ ಟ್ರೋಡನ್ ಬೈ ಬಾಬಾಸಾಹೇಬ್ ಬಯೋಗ್ರಫಿ ಆಫ್ ಮಲ್ಲಿಕಾರ್ಜುನ ಖರ್ಗೆ’ ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದರು.

ದೇಶದಲ್ಲಿ ಶೋಷಣೆ ಇನ್ನೂ ನಿಂತಿಲ್ಲ. ಕೆಳ ಸಮುದಾಯಗಳ ಪರ ನ್ಯಾಯ ಸಲ್ಲಿಸಲು ಖರ್ಗೆ ಹೋರಾಡಿದ್ದಾರೆ. ಜಾತ್ಯತೀತ ತತ್ವದಲ್ಲಿ ಬಹಳ ನಂಬಿಕೆ ಇಟ್ಟಿದ್ದಾರೆ. ಹುಸಿ ಜಾತ್ಯತೀತವನ್ನು ಖರ್ಗೆ ಅವರಲ್ಲಿ ನಾನು ಯಾವತ್ತೂ ಕಂಡಿಲ್ಲ ಎಂದು ಅವರು ಹೇಳಿದರು.

ಅಂಬೇಡ್ಕರ್ ಅವರ ಮೂರ್ತಿಗಳನ್ನು ಪ್ರತಿ ಗ್ರಾಮದ ಮಧ್ಯ ಭಾಗದಲ್ಲಿ ಸ್ಥಾಪಿಸಬೇಕಿದೆ. ಕಾರಣ ಇವರಿಂದಲೇ ನಮಗೆ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂಬುದು ಪ್ರತಿಯೊಬ್ಬ ನಾಗರಿಕನಿಗೂ ತಿಳಿಯಬೇಕು ಎಂದು ಅವರು ತಿಳಿಸಿದರು. 

ಸಂವಿಧಾನ ಬಿಟ್ಟು ನಾವು ಜೀವಂತ ಇರಲು ಸಾಧ್ಯವಿಲ್ಲ. ಆದರೆ, ಇಂದಿನ ರಾಜಕೀಯ ನಾಯಕರೂ ಸಂವಿಧಾನಕ್ಕೆ ಅಪಚಾರ ಎಸಗುವ ರೀತಿ ನಡೆದುಕೊಂಡ ಉದಾಹರಣೆಗಳಿವೆ. ಇದಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಹೊರತಾಗಿಲ್ಲ ಎಂದು ಅವರು ಹೇಳಿದರು.

ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಮಾತನಾಡಿ, ರಾಜಕೀಯ ಮುತ್ಸದ್ದಿ ಎಂದು ಖರ್ಗೆ ಅವರಿಗೆ ಬಳಸುವುದೇ ದೊಡ್ಡ ಗೌರವ. ಖರ್ಗೆ ಅವರು ಮುಖ್ಯಮಂತ್ರಿಯಾಗುವ ವಿಚಾರದಲ್ಲಿ ದಲಿತ ಕೋಟಾ ಪರಿಗಣಿಸಿ ನೀಡುವುದಾದರೆ ಬೇಡ ಎಂದು ಹೇಳಿರುವುದು, ಖರ್ಗೆ ಅವರ ರಾಜಕೀಯ ಮುತ್ಸದ್ದಿತನಕ್ಕೆ ಸಾಕ್ಷಿ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮನು ಬಳಿಗಾರ ಮಾತನಾಡಿ, ಖರ್ಗೆ ಕರ್ನಾಟಕ ಕಂಡ ಅಗ್ರಗಣ್ಯ ನಾಯಕರಾಗಿದ್ದಾರೆ. ಬಾಬಾಸಾಹೇಬರ ಚಿಂತನೆಗಳನ್ನು ಅಕ್ಷರಶಃ ಅನುಷ್ಠಾನ ಮಾಡಿದವರು ಖರ್ಗೆ ಅವರು. ಮಲ್ಲಿಕಾರ್ಜುನ ಖರ್ಗೆ ಅವರ ಅನುಭವ ದೇಶಕ್ಕೆ ದಕ್ಕಬೇಕು. ಆಗ ಭಾರತದ ಚಿತ್ರಣ ಬದಲಾಗುತ್ತದೆ ಎಂದು ಹೇಳಿದರು. ಕಲಬುರಗಿ ವಿಶ್ವ ವಿದ್ಯಾಲಯದ ಪ್ರೊ.ಎಚ್.ಟಿ.ಪೋತೆ ಉಪಸ್ಥಿತರಿದ್ದರು. 

share
Next Story
X