Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 11ನೇ ರಾ. ಡ್ರ್ಯಾಗನ್ ಬೋಟ್...

ಉಡುಪಿ: 11ನೇ ರಾ. ಡ್ರ್ಯಾಗನ್ ಬೋಟ್ ಸ್ಪರ್ಧೆಗೆ ವಿದ್ಯುಕ್ತ ಚಾಲನೆ

ಮಡಿಸಾಲು ಹೊಳೆಯಲ್ಲಿ ನೀಳ ಬೋಟ್‌ಗಳ ಮಿಂಚಿನ ಓಟ

23 Feb 2023 9:30 PM IST
share
ಉಡುಪಿ: 11ನೇ ರಾ. ಡ್ರ್ಯಾಗನ್ ಬೋಟ್ ಸ್ಪರ್ಧೆಗೆ ವಿದ್ಯುಕ್ತ ಚಾಲನೆ
ಮಡಿಸಾಲು ಹೊಳೆಯಲ್ಲಿ ನೀಳ ಬೋಟ್‌ಗಳ ಮಿಂಚಿನ ಓಟ

ಉಡುಪಿ, ಫೆ.23: ಇಲ್ಲಿಗೆ ಸಮೀಪದ ಹೇರೂರು ಗ್ರಾಮದಲ್ಲಿ ಹರಿಯುವ ಸುವರ್ಣ ನದಿಯ ಉಪನದಿಯಾದ ಮಡಿಸಾಲು ಹೊಳೆಯಲ್ಲಿ 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್‌ಷಿಪ್‌ಗೆ ಗುರುವಾರ ಸಂಜೆ ರಾ.ಹೆದ್ದಾರಿ 66ರಲ್ಲಿರುವ ಹೇರೂರು ಸೇತುವೆ ಬಳಿ ಶಾಸಕ ಕೆ.ರಘುಪತಿ ಭಟ್ ಇತರ ಗಣ್ಯರ ಸಮಕ್ಷಮ ಅಧಿಕೃತ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು, ಭಾರತೀಯ ಕಯಾಕಿಂಗ್  ಮತ್ತು ಕನೂಯಿಂಗ್ ಅಸೋಸಿಯೇಷನ್,ಕಯಾಕಿಂಗ್ ಮತ್ತು ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಈ ಡ್ರ್ಯಾಗನ್ ಬೋಟ್ ಚಾಂಪಿಯನ್‌ಶಿಪ್‌ನ್ನು ಆಯೋಜಿಸಿವೆ.

ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್. ಎಸ್.ಬಲ್ಲಾಳ್, ಭಾರತೀಯ ಕಯಾಕಿಂಗ್ ಮತ್ತು ಕನೂಯಿಂಗ್ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ಕುಶ್ವಾಹಾ, ಕಯಾಕಿಂಗ್ ಮತ್ತು ಕನೂಯಿಂಗ್ ಅಸೋಸಿಯೇಷನ್ ಆಫ್  ಕರ್ನಾಟಕದ ಅಧ್ಯಕ್ಷ ಮೇ.ಜ.ಎಂ.ಎನ್ ದೇವಯ್ಯ, ಕಾರ್ಯದರ್ಶಿ ಕ್ಯಾ.ದಿಲೀಪ್ ಕುಮಾರ್, ಭಾರತೀಯ ಡ್ರ್ಯಾಗನ್ ಬೋಟ್ ತಂಡದ ನಾಯಕ ಮಂಜೀತ್ ಸಿಂಗ್, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಹಾಕೆ ಅಕ್ಷಯ್ ಮಚ್ಚಿಂದ್ರ, ಜಿಪಂ ಸಿಇಓ ಪ್ರಸನ್ನ ಎಚ್., ಉಪ್ಪೂರು ಗ್ರಾಪಂ ಅಧ್ಯಕ್ಷ ಮಹೇಶ್ ಕೋಟ್ಯಾನ್, ಚಾಂತಾರು ಗ್ರಾಪಂ ಅಧ್ಯಕ್ಷೆ ಬೇಬಿ, ಹಾರಾಡಿ ಗ್ರಾಪಂ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಡ್ರ್ಯಾಗನ್ ಬೋಟ್ ಪಂದ್ಯಾವಳಿಯ ಸ್ವಾಗತ ಸಮಿತಿ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಜಿಲ್ಲಾ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

15 ರಾಜ್ಯ ತಂಡಗಳ ಸ್ಪರ್ಧೆ: ಫೆ.26ರವರೆಗೆ ಸ್ಪರ್ಧೆಗಳು ನಡೆಯಲಿವೆ. ಈ ಚಾಂಪಿಯನ್‌ಷಿಪ್‌ನಲ್ಲಿ 15 ರಾಜ್ಯಗಳ 480 ಪುರುಷ, 108 ಮಹಿಳಾ ಕ್ರೀಡಾಪಟುಗಳು ಹಾಗೂ 24ರಷ್ಟು ಅಧಿಕಾರಿಗಳು ಪಾಲ್ಗೊಂಡಿದ್ದಾರೆ. 

ಪುರುಷರು, ಮಹಿಳೆಯರು, ಮಿಶ್ರ, ಹಿರಿಯರು ಮತ್ತು ಕಿರಿಯರು ಸೇರಿದಂತೆ ಒಟ್ಟು 18 ವಿಭಾಗಗಳಲ್ಲಿ ಸ್ಪರ್ಧೆಗಳಿದ್ದು, 200ಮೀ., 500ಮೀ. ಹಾಗೂ 2000ಮೀ. ದೂರದ ಸ್ಪರ್ಧೆಗಳಿರುತ್ತವೆ. ಒಂದು ಬೋಟ್‌ನಲ್ಲಿ 12 (10ಸ್ಪರ್ಧಿಗಳು+2) ಹಾಗೂ 22 (20+2) ಮಂದಿಯ ಎರಡು ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಗೆ 20 ಸೀಟ್‌ಗಳ 4 ಹಾಗೂ 12 ಸೀಟ್‌ಗಳ 7 ಬೋಟ್‌ಗಳನ್ನು ಬಳಸಲಾಗುತ್ತದೆ  ಎಂದು ಕ್ಯಾ. ದಿಲೀಪ್ ಕುಮಾರ್ ಮಾಹಿತಿ ನೀಡಿದ್ದಾರೆ.

ಆತಿಥೇಯ ಕರ್ನಾಟಕ ಪುರುಷರ ತಂಡ ಕಳೆದ ನಾಲ್ಕು ಟೂರ್ನಿಗಳ ಚಾಂಪಿಯನ್ ಆಗಿದ್ದು, ಈ ಬಾರಿಯೂ ಮೇಲುಗೈ ಪಡೆಯುವ ನಿರೀಕ್ಷೆ ಇದೆ. ಈ ಬಾರಿ ಕರ್ನಾಟಕವಲ್ಲದೇ ಕೇರಳ, ತಮಿಳುನಾಡು ಪಾಂಡಿಚೇರಿ, ಆಂಧ್ರಪ್ರದೇಶ, ಮಧ್ಯಪ್ರದೇಶ, ದಿಲ್ಲಿ, ಹಿಮಾಚಲ ಪ್ರದೇಶ, ಹರ್ಯಾಣ, ಪಂಜಾಬ್, ಮಹಾರಾಷ್ಟ್ರ, ರಾಜಸ್ತಾನ್, ಮಣಿಪುರ ರಾಜ್ಯಗಳ ತಂಡಗಳು ಭಾಗವಹಿಸುತ್ತಿವೆ.  

ಸ್ಪರ್ಧೆ ನಡೆಯುವ ಮಡಿಸಾಲು ಹೊಳೆಯ ಒಂದು ಕಿ.ಮೀ. ಉದ್ದಕ್ಕೂ ನದಿಯ ಇಕ್ಕೆಲಗಳ ದಂಡೆಯಲ್ಲಿ 5000ಕ್ಕೂ ಅಧಿಕ ಮಂದಿ ಸ್ಪರ್ಧೆಯನ್ನು ವೀಕ್ಷಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. 

share
Next Story
X