Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನಸಭಾ ಚುನಾವಣೆ | ಕ್ಷತ್ರಿಯ...

ವಿಧಾನಸಭಾ ಚುನಾವಣೆ | ಕ್ಷತ್ರಿಯ ಸಮಾಜಕ್ಕೆ 50 ಕ್ಷೇತ್ರಗಳಲ್ಲಿ ಟಿಕೆಟ್ ಮೀಸಲಿಡಲು ಆಗ್ರಹ

24 Feb 2023 11:49 AM IST
share
ವಿಧಾನಸಭಾ ಚುನಾವಣೆ | ಕ್ಷತ್ರಿಯ ಸಮಾಜಕ್ಕೆ 50 ಕ್ಷೇತ್ರಗಳಲ್ಲಿ ಟಿಕೆಟ್ ಮೀಸಲಿಡಲು ಆಗ್ರಹ

ಬೆಂಗಳೂರು, ಫೆ. 24: ಕ್ಷತ್ರಿಯ ಸಮುದಾಯದ ಒಳಪಂಗಡಗಳು ರಾಜ್ಯದ 60ರಿಂದ 75 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಬಲವಾಗಿದ್ದು, ಈ ಬಾರಿಯ ಸಾರ್ವತ್ರಿಕ ಚುನಾವಣೆಯ ಚುನಾವಣೆಯಲ್ಲಿ ಕನಿಷ್ಠ 50 ಕ್ಷೇತ್ರಗಳಲ್ಲಿ ಕ್ಷತ್ರಿಯರಿಗೆ ಎಲ್ಲಾ ರಾಜಕೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟ ಆಗ್ರಹಿಸಿದೆ.

ಗುರುವಾರ ನಗರದ ಅರಮನೆ ರಸ್ತೆಯ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್, ರಾಜಕೀಯ ಪಕ್ಷಗಳು ಕ್ಷತ್ರಿಯರ ಜನಸಂಖ್ಯೆಗನುಗುಣವಾಗಿ ನಮ್ಮವರಿಗೆ ಟಿಕೆಟ್ ನೀಡುತ್ತಿಲ್ಲ. ಹೀಗಾಗಿ ಶಾಸನಸಭೆಯಲ್ಲಿ ನಮ್ಮ ಪ್ರಾತಿನಿಧ್ಯ ಸಂಪೂರ್ಣ ಸೊರಗಿದೆ. ಹೀಗಾಗಿ ಈ ಬಾರಿ ರಾಜಕೀಯ ಪಕ್ಷಗಳು ಸಮುದಾಯದ ಆಕಾಂಕ್ಷಿಗಳಿಗೆ ಹೆಚ್ಚು ಟಿಕೆಟ್ ನೀಡದಿದ್ದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕ್ಷತ್ರಿಯ ಸಮುದಾಯ ತನ್ನ 38 ಒಳಪಂಗಡಗಳೊಂದಿಗೆ ಮುಂದೆ ಸಾಗುತ್ತಿದೆ. ಹೀಗಿರುವಾಗ ಸರಕಾರ ಕ್ಷತ್ರಿಯರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ರಾಜಕೀಯ ಪಕ್ಷಗಳು ಕ್ಷತ್ರಿಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ತನ್ನದೇ ಆದ ನಿರ್ಧಾರ ಕೈಗೊಳ್ಳಲಿದೆ ಎಂದ ಅವರು,ರಾಜ್ಯದಲ್ಲಿ ಮರಾಠ, ತಿಗಳ ಕ್ಷತ್ರಿಯ, ಭಾವಸಾರ ಕ್ಷತ್ರಿಯ, ರಾಮ ಕ್ಷತ್ರಿಯ, ಅರಸು, ರಜಪೂತ, ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯರು, ರಾಜು ಕ್ಷತ್ರಿಯರು, ತೊಗಟವೀರ ಕ್ಷತ್ರಿಯ, ಬಂಜಾರ ಕ್ಷತ್ರಿಯ ಹೀಗೆ ಅನೇಕ ಪ್ರಬಲ ಒಳಪಂಗಡಗಳು, ಇನ್ನೂ ಸಣ್ಣ ಪಂಗಡಗಳು ಕ್ಷತ್ರಿಯ ಸಮುದಾಯದಡಿ ಬರುತ್ತವೆ ಎಂದರು.

ಈ ಸಮುದಾಯಗಳ ಹಲವಾರು ಆಕಾಂಕ್ಷಿಗಳು ವಿವಿಧ ಪಕ್ಷಗಳಲ್ಲಿದ್ದು ಅನೇಕ ಕ್ಷೇತ್ರಗಳಲ್ಲಿ ಅವರು ಕೆಲಸ ಮಾಡುತ್ತಿರುವ ಪಕ್ಷದ ಟಿಕೆಟ್ ಕೇಳುತ್ತಿದ್ದಾರೆ. ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಇವರಿಗೆ ಆ ಪಕ್ಷಗಳು ಟಿಕೆಟ್ ಕೊಡಲೇಬೇಕೆಂದು ಆಗ್ರಹಿಸಿದರು.

ಸಭೆಯಲ್ಲಿ ಮಾಜಿ ಸಚಿವ ಕೃಷ್ಣ ಪಾಲೇಮಾರ್, ಮಾಜಿ ಶಾಸಕರಾದಲಕ್ಷ್ಮೀ, ಎಂ.ಜಿ.ಮುಳೆ, ವಿಮಾನ ನಿಲ್ದಾಣ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣ, ಕರ್ನಾಟಕ ಮರಾಠ ಪರಿಷತ್ ಅಧ್ಯಕ್ಷ ಸುರೇಶ್ ರಾವ್ ಸಾಟೆ, ನೇಕಾರ ಒಕ್ಕೂಟದ ರಾಜ್ಯಾಧ್ಯಕ್ಷ ಸೋಮಶೇಖರ್ ಬೆಳ್ತುರು, ತಿಗಳ ಕ್ಷತ್ರಿಯ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ಬಣ್ಣ, ಒಕ್ಕೂಟದ ಕಾರ್ಯದರ್ಶಿ ರೋಹಿತ್ ಮುನಿರಾಜು ಸೇರಿದಂತೆ ಪ್ರಮುಖರಿದ್ದರು.

share
Next Story
X