Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: ಪುತ್ತಿಗೆಯ ನವೀಕೃತ ನೂರಾನಿ...

ಮೂಡುಬಿದಿರೆ: ಪುತ್ತಿಗೆಯ ನವೀಕೃತ ನೂರಾನಿ ಮಸೀದಿ ಉದ್ಘಾಟನೆ

ಫೆ. 26: ಸರ್ವಧರ್ಮೀಯರಿಗೆ 'ನಮ್ಮೂರ ಮಸೀದಿ ನೋಡ ಬನ್ನಿ' ವಿಶಿಷ್ಟ ಕಾರ್ಯಕ್ರಮ

24 Feb 2023 6:43 PM IST
share
ಮೂಡುಬಿದಿರೆ: ಪುತ್ತಿಗೆಯ ನವೀಕೃತ ನೂರಾನಿ ಮಸೀದಿ ಉದ್ಘಾಟನೆ
ಫೆ. 26: ಸರ್ವಧರ್ಮೀಯರಿಗೆ 'ನಮ್ಮೂರ ಮಸೀದಿ ನೋಡ ಬನ್ನಿ' ವಿಶಿಷ್ಟ ಕಾರ್ಯಕ್ರಮ

ಮೂಡುಬಿದಿರೆ: ಪುತ್ತಿಗೆ ನೂರಾನಿ ಮಸೀದಿಯ ನವೀಕೃತ ಕಟ್ಟಡವನ್ನು ಮಂಗಳೂರಿನ ಕುದ್ರೋಳಿಯ ಜೋಡುಪಳ್ಳಿ ಜಾಮಿಯಾ ಮಸೀದಿಯ ಮೌಲಾನಾ ಝುಬೇರ್ ಖಾನ್ ನದ್ವಿ ಶುಕ್ರವಾರ ಉದ್ಘಾಟಿಸಿದರು.

ಉದ್ಯಮಿ ಮೊಹಮ್ಮದ್ ಸಲೀಂ ತೊಕ್ಕೊಟ್ಟು, ಭಾರತ್ ಕನ್ಸ್ಟ್ರಕ್ಷನ್ ನ ಮುಸ್ತಫಾ ಮೂಡುಬಿದಿರೆ  ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಮಸೀದಿ ಸಮಿತಿಯ ಗೌರವಾಧ್ಯಕ್ಷ ಹುಸೇನ್ ಶೇಕ್, ಉಪಾಧ್ಯಕ್ಷ ಬಶೀರ್ ಶೇಕ್, ಕಾರ್ಯದರ್ಶಿ ಮುಹಮ್ಮದ್ ಖಯ್ಯೂಮ್, ಕೋಶಾಧಿಕಾರಿ ಮುಸ್ತಾಕ್ ಸಾಹೇಬ್ ಉಪಸ್ಥಿತರಿದ್ದರು.

ಉದ್ಘಾಟಕರಾಗಿ ಆಗಮಿಸಿದ ಮೌಲಾನಾ ಝುಬೇರ್ ಖಾನ್ ನದ್ವಿ ಖುತ್ಬಾ ನೆರವೇರಿಸಿ, ಜುಮಾ ನಮಾಝಿನ ನೇತೃತ್ವ ವಹಿಸಿದರು. ಪುತ್ತಿಗೆ ಮಸೀದಿಯ ಇಮಾಮ್ ಝಿಯಾವುಲ್ಲಾ ಖಾನ್ ಸ್ವಾಗತಿಸಿದರು. ಅಧ್ಯಕ್ಷರಾದ ಅಬುಲ್ ಅಲಾ ಪುತ್ತಿಗೆ ಧನ್ಯವಾದ ಸಲ್ಲಿಸಿದರು.

ನವೀಕೃತಗೊಂಡು ಶುಕ್ರವಾರ ಅಧಿಕೃತವಾಗಿ ಉದ್ಘಾಟನೆಯಾದ ಪುತ್ತಿಗೆ ನೂರಾನಿ ಮಸೀದಿಯ ಆಡಳಿತ ಸಮಿತಿ ಫೆ. 26 ರಂದು ರವಿವಾರ ಇಡೀ ಊರಿನ ಸರ್ವಧರ್ಮೀಯರಿಗಾಗಿ 'ನಮ್ಮೂರ ಮಸೀದಿ ನೋಡ ಬನ್ನಿ' ಎಂಬ ವಿಶೇಷ ಮಸೀದಿ ಸಂದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಬೆಳಗ್ಗೆ 10 ಗಂಟೆಗೆ ನೂತನ ಮಸೀದಿ ಆವರಣದಲ್ಲಿ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ . ಮೋಹನ್ ಆಳ್ವ, ವಾರ್ತಾಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ್ ಭಟ್, ಪಕ್ಷಿಕೆರೆ ಸಂತ ಜೂದರ ಧರ್ಮ ಕೇಂದ್ರ ಹಾಗು ಪುಣ್ಯಕ್ಷೇತ್ರದ ಪ್ರಧಾನ ಧರ್ಮಗುರುಗಳಾದ ವಂ. ಸ್ವಾಮಿ ಮೆಲ್ವಿನ್ ನೊರೊನ್ಹಾ ಹಾಗು ನವೀಕೃತ ನೂರಾನಿ ಮಸೀದಿಯ ಖತೀಬ್ ಹಾಗು ಇಮಾಮ್ ಮೌಲಾನಾ ಝಿಯಾಉಲ್ಲಾ ಖಾನ್ ಅವರು ಸೌಹಾರ್ದ ಸಂದೇಶ ನೀಡಲಿದ್ದಾರೆ.

ಪಳಕಳ ಮಿತ್ರಮಂಡಳಿಯ ಅಧ್ಯಕ್ಷ ರವಿಶಂಕರ್ ಭಟ್, ನೂರಾನಿ ಮಸೀದಿಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಖಯ್ಯೂಮ್, ಪುತ್ತಿಗೆ ಪಂಚಾಯತ್ ಸದಸ್ಯ ಮೊಹಮ್ಮದ್ ಶರೀಫ್ ಉಪಸ್ಥಿತರಿರುತ್ತಾರೆ.

ನೂರಾನಿ ಮಸೀದಿಯ ಅಧ್ಯಕ್ಷ ಅಬುಲ್ ಅಲಾ ಪುತ್ತಿಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಊರಿನ ಸರ್ವಧರ್ಮೀಯ ಸ್ತ್ರೀ ಪುರುಷರು ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಿ ನೂತನ ಮಸೀದಿ ವೀಕ್ಷಿಸಬಹುದು ಎಂದು ಅಧ್ಯಕ್ಷ ಅಬುಲ್ ಅಲಾ ಪುತ್ತಿಗೆ ಆಮಂತ್ರಿಸಿದ್ದಾರೆ.

share
Next Story
X