Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್...

​11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಸ್ಪರ್ಧೆ: ಕರ್ನಾಟಕ ತಂಡಕ್ಕೆ 2000 ಮೀ. ಸೇರಿದಂತೆ 3ರಲ್ಲಿ ಚಿನ್ನದ ಪದಕ

24 Feb 2023 9:23 PM IST
share
​11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಸ್ಪರ್ಧೆ:  ಕರ್ನಾಟಕ ತಂಡಕ್ಕೆ 2000 ಮೀ. ಸೇರಿದಂತೆ 3ರಲ್ಲಿ ಚಿನ್ನದ ಪದಕ

ಉಡುಪಿ: ಇಲ್ಲಿಗೆ ಸಮೀಪದ ಹೇರೂರು ಗ್ರಾಮದಲ್ಲಿ ಹರಿಯುವ ಸುವರ್ಣ ನದಿಯ ಉಪನದಿಯಾದ ಮಡಿಸಾಲು ಹೊಳೆಯಲ್ಲಿ ಇಂದು ಅಧಿಕೃತವಾಗಿ ಪ್ರಾರಂಭಗೊಂಡ 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್‌ಷಿಪ್‌ನ ಚೊಚ್ಚಲ ಫೈನಲ್‌ನಲ್ಲಿ ಆತಿಥೇಯ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ದಿನದಲ್ಲಿ ಕರ್ನಾಟಕ ತಂಡ ಮೂರು ಚಿನ್ನದ ಪದಕಗಳನ್ನು ಗೆದ್ದುಕೊಂಡಿವೆ.

ಶುಕ್ರವಾರ ರಾ.ಹೆದ್ದಾರಿ 66ರಲ್ಲಿರುವ ಹೇರೂರು ಸೇತುವೆ ಸಮೀಪ ನಡೆದ ಪುರುಷರ 2000ಮೀ. ಸ್ಪರ್ಧೆಯ  ಡಿ-20 (20+2) ವಿಭಾಗದ ಫೈನಲ್‌ನಲ್ಲಿ ಕರ್ನಾಟಕ ತಂಡ 10ನಿ. 29.73 ಸೆ.ಗಳಲ್ಲಿ ಮೊದಲಿಗರಾಗಿ ಗುರಿಮುಟ್ಟುವ ಮೂಲಕ ಚಾಂಪಿಯನ್ ತಂಡ ಹೊರಹೊಮ್ಮಿತು.

ಮಧ್ಯಪ್ರದೇಶ ತಂಡದ ಆಟಗಾರರು 10ನಿ.53.41ಸೆ.ಗಳಲ್ಲಿ ಬೋಟನ್ನು ಗುರಿಮುಟ್ಟಿಸುವ ಮೂಲಕ ಎರಡನೇ ಸ್ಥಾನ ಪಡೆದರೆ, ದಿಲ್ಲಿ ತಂಡ 10ನಿ.53.73ಸೆ.ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನಿಯಾಯಿತು. ನಾಲ್ಕನೇ ಸ್ಥಾನವನ್ನು ಹರ್ಯಾಣ ತಂಡ ಪಡೆಯಿತು.

2000 ಮೀ. ಸ್ಪರ್ಧೆಯ ಡಿ-10 (10+2) ಮಿಕ್ಸೆಡ್ ಫೈನಲ್‌ನಲ್ಲಿ  ದಿಲ್ಲಿ ತಂಡ ಚಿನ್ನದ ಪದಕ ಪಡೆಯಿತು. ಅದು 11ನಿ.56.15ಸೆ.ಗಳಲ್ಲಿ ಮೊದಲಿಗ ರಾಗಿ ಗುರಿ ಮುಟ್ಟಿತು. 12ನಿ.02ಸೆ.ಗಳೊಂದಿಗೆ ಪಂಜಾಬ್ ತಂಡ ಎರಡನೇ ಹಾಗೂ 12ನಿ 02.36ಸೆ.ಗಳೊಂದಿಗೆ ಕರ್ನಾಟಕ ತಂಡ ಮೂರನೇ ಸ್ಥಾನ ಗೆದ್ದುಕೊಂಡಿತು. ಉಳಿದಂತೆ ಹರ್ಯಾಣ ನಾಲ್ಕನೇ, ಮಧ್ಯಪ್ರದೇಶ ಐದನೇ ಸ್ಥಾನಗಳನ್ನು ಪಡೆದವು.

2000ಮೀ. ನ ಡಿ-10ರ ಮಹಿಳೆಯರ ಫೈನಲ್‌ನಲ್ಲಿ 12ನಿ.33.36ಸೆ.ಗಳಲ್ಲಿ ಮೊದಲಿಗರಾಗಿ ಗುರಿ ಮುಟ್ಟಿದ ಮಧ್ಯಪ್ರದೇಶದ ಮಹಿಳೆಯರು ಚಿನ್ನದ ಪದಕ ಪಡೆದರೆ, ದಿಲ್ಲಿ ಮಹಿಳೆಯರು ಬೆಳ್ಳಿ ಪದಕ (12ನಿ.55.38ಸೆ.) ಹಾಗೂ ಪಂಜಾಬ್ ತಂಡ ಕಂಚಿನ ಪದಕ (13ನಿ.18.93ಸೆ.) ಗೆದ್ದುಕೊಂಡವು. ಆತಿಥೇಯ ಕರ್ನಾಟಕ ತಂಡ ನಾಲ್ಕನೇ ಸ್ಥಾನ ಪಡೆಯಿತು.

ಕರ್ನಾಟಕಕ್ಕೆ ಚಿನ್ನ: 2000ಮೀ.ಮಿಕ್ಸೆಡ್‌ನ ಡಿ-20ವಿಭಾಗದ ಫೈನಲ್‌ನಲ್ಲಿ ಕರ್ನಾಟಕ ತಂಡ ಚಿನ್ನದ ಪದಕ ಪಡೆಯಿತು. ತಂಡ 10ನಿ.49.48 ಸೆ.ಗಳಲ್ಲಿ ಪ್ರಥಮವಾಗಿ ಗುರಿ ಮುಟ್ಟಿದರು.ಹರ್ಯಾಣ ತಂಡ ಬೆಳ್ಳಿ ಹಾಗೂ ಪಂಜಾಬ್ ತಂಡ ಇದರಲ್ಲಿ ಕಂಚಿನ ಪದಕ ಜಯಿಸಿದವು.

2000ಮೀ.ನ ಡಿ-10 ಪುರುಷರ ಪೈನಲ್‌ನಲ್ಲೂ ಆತಿಥೇಯ ತಂಡ ಚಿನ್ನದ ನಗುಬೀರಿತು. ಕರ್ನಾಟಕದ ಪುರುಷರು 11ನಿ.27.95ಸೆ.ಗಲ್ಲಿ ಗುರಿ ಮುಟ್ಟಿ ಚಿನ್ನ ಗೆದ್ದರು.ಪಂಜಾಬ್ ತಂಡ ಎರಡನೇ ಹಾಗೂ ಗೋವಾ ತಂಡ ಮೂರನೇ ಸ್ಥಾನಗಳನ್ನು ಗೆದ್ದುಕೊಂಡವು.

ಪುರುಷರ ಜೂನಿಯರ್ 2000 ಮೀ.ನ ಡಿ-10ರ ಫೈನಲ್‌ನಲ್ಲಿ ಮಧ್ಯಪ್ರದೇಶ ಚಿನ್ನ, ಹರ್ಯಾಣ ಬೆಳ್ಳಿ ಹಾಗೂ ಕೇರಳ ಕಂಚಿನ ಪದಕ ಗೆದ್ದುಕೊಂಡವು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು, ಭಾರತೀಯ ಕಯಾಕಿಂಗ್  ಮತ್ತು ಕನೂಯಿಂಗ್ ಅಸೋಸಿಯೇಷನ್,ಕಯಾಕಿಂಗ್ ಮತ್ತು ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಈ ಡ್ರ್ಯಾಗನ್ ಬೋಟ್ ಚಾಂಪಿಯನ್‌ಶಿಪ್‌ನ್ನು ಆಯೋಜಿಸಿವೆ.

share
Next Story
X