‘ಬಿಜೆಪಿಯೇ ಭರವಸೆ’ಯೆಂದು ಜನ ನಂಬಿದ್ದಾರೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಫೆ. 24: ‘ಬಿಜೆಪಿಗೆ ಸಮರ್ಥ ನಾಯಕತ್ವವಿದ್ದು, ಜನರು ಬಿಜೆಪಿಯೇ ಭರವಸೆ ಎಂದು ನಂಬಿದ್ದಾರೆ. ಭರವಸೆ ವಾಹನಗಳು ರಾಜ್ಯ ಸುತ್ತಿ ಬರುವಷ್ಟರಲ್ಲಿ ರಾಜ್ಯದಲ್ಲಿ ಬಿಜೆಪಿ ಸುನಾಮಿಯೇ ಏಳಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಇಲ್ಲಿನ ಬಿಟಿಎಂ ಲೇಔಟ್ನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ‘ಪ್ರಗತಿ ರಥ ಯಾತ್ರೆ’ಗೆ ಚಾಲನೆ ನೀಡಿ ಮಾತನಾಡಿದಮ ಅವರು, ‘ರಾಜ್ಯಾದ್ಯಂತ 130 ರಥಗಳು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಾಡಿರುವ ಸಾಧನೆಗಳನ್ನು ಜನರಿಗೆ ತಲುಪಿಸಲು ಈ ಯಾತ್ರೆ ಆರಂಭವಾಗಿದೆ. ಹೆಣ್ಣು ಮಕ್ಕಳು ಬಡವರು, ಶಾಲಾ ಮಕ್ಕಳು ಎಲ್ಲರಿಗೂ ಮಾಹಿತಿ ತಲುಪಿಸಿ ಜಾಗೃತಿ ಮೂಡಿಸಲಾಗುವುದು. ನವ ಕರ್ನಾಟಕದ ಮೂಲಕ ನವ ಭಾರತ ಕಟ್ಟುವ ಕೆಲಸ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಸಂಕಲ್ಪವೇ ಸಿದ್ದಿ: ಪ್ರಧಾನಿಯವರು ಹೇಳಿರುವಂತೆ ಸಂಕಲ್ಪವೇ ಸಿದ್ದಿ. ಅದನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತವೆ. ರಾಜ್ಯದ ಹಳ್ಳಿ ಹಳ್ಳಿಗಳಿಗೆ ತಲುಪುವ ಈ ವಾಹನ ಎಲ್ಲರಿಗೂ ಸಂಕಲ್ಪ ಸಿದ್ದಿ ಮಾಡುವಂತಾಗಲಿ ಎಂದ ಅವರು, ರಾಜ್ಯ ಹಾಗೂ ಕೇಂದ್ರ ಸರಕಾರ ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ ಎಂದು ನುಡಿದರು.






.jpg)
.jpg)

