Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯಾರ್ಥಿಗಳು ಆತ್ಮಹತ್ಯೆ...

ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸುವ ನಮ್ಮ ಸಂಸ್ಥೆಗಳು ಎಲ್ಲಿ ದಾರಿ ತಪ್ಪಿವೆ?:ಸಿಜೆಐ ಚಂದ್ರಚೂಡ್

25 Feb 2023 10:02 PM IST
share
ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸುವ ನಮ್ಮ ಸಂಸ್ಥೆಗಳು ಎಲ್ಲಿ ದಾರಿ ತಪ್ಪಿವೆ?:ಸಿಜೆಐ ಚಂದ್ರಚೂಡ್

ಹೈದರಾಬಾದ್, ಫೆ. 25: ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳ ಬಗ್ಗೆ ಶನಿವಾರ ಕಳವಳ ವ್ಯಕ್ತಪಡಿಸಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಸಾವನ್ನಪ್ಪಿದ ವಿದ್ಯಾರ್ಥಿಗಳ ಕುಟುಂಬದ ನೋವು ತನಗೆ ಅರ್ಥವಾಗುತ್ತದೆ ಎಂದಿದ್ದಾರೆ. ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಬಲವಂತಪಡಿಸುವ ನಮ್ಮ ಸಂಸ್ಥೆಗಳು ಎಲ್ಲಿ ದಾರಿ ತಪ್ಪಿವೆ ಎಂದು ತನಗೆ ಅಚ್ಚರಿಯಾಗುತ್ತದೆ ಎಂದು ಅವರು ಹೇಳಿದ್ದಾರೆ. ಐಐಟಿ ಬಾಂಬೆಯಲ್ಲಿ ಇತ್ತೀಚೆಗೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ಉಲ್ಲೇಖಿಸಿದ ಅವರು, ಅಂಚಿನಲ್ಲಿರುವ ಸಮುದಾಯಗಳ ಸಂತ್ರಸ್ತರನ್ನು ಒಳಗೊಂಡ ಇಂತಹ ಘಟನೆಳು ಸಾಮಾನ್ಯವಾಗುತ್ತಿವೆ ಎಂದರು.

ಇಲ್ಲಿನ ದಿ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಆ್ಯಂಡ್ ರಿಸರ್ಚ್ (ಎನ್ಎಎಲ್ಎಸ್ಎಆರ್)ನಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ಸಾಮಾಜಿಕ ಬದಲಾವಣೆಗೆ ಒತ್ತಾಯಿಸಲು ನ್ಯಾಯಾಲಯದ ಒಳಗೆ ಹಾಗೂ ಹೊರಗೆ ಸಮಾಜದೊಂದಿಗೆ ಸಂವಾದ ನಡೆಸುವಲ್ಲಿ ಭಾರತದ ನ್ಯಾಯಾಧೀಶರು ನಿರ್ಣಾಯಕ ಪಾತ್ರ ಹೊಂದಿದ್ದಾರೆ ಎಂದರು.

ನಾನು ಇತ್ತೀಚೆಗಷ್ಟೇ ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಕುರಿತು ಓದಿದೆ. ಕಳೆದ ವರ್ಷ ಒಡಿಶಾ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ ಆದಿವಾಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಇದು ನನಗೆ ನೆನಪಿಸಿತು ಎಂದು ಅವರು ಹೇಳಿದರು. ಈ ನಿದರ್ಶನಗಳಲ್ಲಿ ಅಂಚಿನಲ್ಲಿರುವ ಸಮುದಾಯಗಳ ವಿದ್ಯಾರ್ಥಿಗಳ ಆತ್ಮಹತ್ಯೆ ಸಾಮಾನ್ಯವಾಗಿವೆ. ಈ ಸಂಖ್ಯೆಗಳು ಕೇವಲ ಅಂಕಿ-ಅಂಶವಲ್ಲ. ಇವರ ಹಿಂದೆ ಸಾವಿರಾರು ವರ್ಷಗಳ ಹೋರಾಟದ ಕಥೆಗಳಿವೆ. ನಾವು ಈ ಸಮಸ್ಯೆಯನ್ನು ಪರಿಹರಿಸಲು ಬಯಸುವುದಾದರೆ, ಸಮಸ್ಯೆಯನ್ನು ಗುರುತಿಸುವುದು ಮೊದಲ ಹಂತ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದರು.

share
Next Story
X