ಹಾಸನ| ರಸ್ತೆ ಅಪಘಾತ: ಇಬ್ಬರು ಮಕ್ಕಳು ಸಹಿತ ನಾಲ್ವರು ಮೃತ್ಯು

ಹಾಸನ: ಟ್ರ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸಹಿತ ನಾಲ್ವರು ಮೃತಪಟ್ಟ ಘಟನೆ ತಿಪಟೂರು ಮುಖ್ಯರಸ್ತೆಯ ನವಿಲೇ ಗೇಟ್ ಬಳಿ ಶನಿವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ತಿಪಟೂರು ತಾಲೂಕಿನ ಎಡಗರಹಳ್ಳಿ ಗ್ರಾಮದ ಯೋಗೇಶ್ ಆಚಾರಿ (35) ಅವರ ಪತ್ನಿ ಲಕ್ಷ್ಮಿ(27) ಹಾಗೂ ಯೋಗೇಶ್ ಆಚಾರಿ ತಂಗಿಯ ಮಕ್ಕಳಾದ ಗಾನವಿ(12) ತೇಜು(4) ಮೃತಪಟ್ಟವರು ಎಂದು ತಿಳಿದುಬಂದಿದೆ.
ಚಾಲಕ ಟ್ರ್ಯಾಕ್ಟರ್ ಅನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಹೋಗಿದ್ದರಿಂದ ಈ ಅಪಘಾತ ಸಂಭವಿಸಿರುವುದಾಗಿ ಎಂದು ತಿಳಿದುಬಂದಿದೆ. ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story