Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಧುನಿಕ ಸಾಧನ ಬಳಸಿ ಇತಿಹಾಸ ನಿರ್ಮಿಸಿದ...

ಆಧುನಿಕ ಸಾಧನ ಬಳಸಿ ಇತಿಹಾಸ ನಿರ್ಮಿಸಿದ ಸುಪ್ರೀಂಕೋರ್ಟ್‌ ಗೆ ಮೂವರು ಬೆಂಗಳೂರಿಗರು ನೆರವಾಗಿದ್ದು ಹೇಗೆ?

26 Feb 2023 12:11 PM IST
share
ಆಧುನಿಕ ಸಾಧನ ಬಳಸಿ ಇತಿಹಾಸ ನಿರ್ಮಿಸಿದ ಸುಪ್ರೀಂಕೋರ್ಟ್‌ ಗೆ ಮೂವರು ಬೆಂಗಳೂರಿಗರು ನೆರವಾಗಿದ್ದು ಹೇಗೆ?

ಬೆಂಗಳೂರು: ನೇರ ಭಾಷಾಂತರ ಮಾಡುವ ಭಾಗವಾಗಿ ಕೃತಕ ಬುದ್ಧಿಮತ್ತೆ ಆಧಾರಿತ ಸಾಧನವನ್ನು ಬಳಸಿಕೊಂಡು ಈ ವಾರ ಸುಪ್ರೀಂಕೋರ್ಟ್ ಇತಿಹಾಸ ನಿರ್ಮಿಸಿತು. ಕುತೂಹಲದ ಸಂಗತಿಯೆಂದರೆ, ಈ ತಂತ್ರಜ್ಞಾನ ಬಳಕೆಯ ನಡೆಯಿಂದ ಕಾನೂನು ಪ್ರಕ್ರಿಯೆಯು ಆಧುನೀಕರಣಗೊಳ್ಳುತ್ತದೆ ಎಂದು ಹೇಳಲಾಗುತ್ತಿದ್ದು, ಇದರ ಹಿಂದೆ ಬೆಂಗಳೂರು ಸಂಪರ್ಕವಿರುವುದು ಬಹಿರಂಗಗೊಂಡಿದೆ ಎಂದು timesofindia.com ವರದಿ ಮಾಡಿದೆ.

ಫೆಬ್ರವರಿ 21ರಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠದ ಎದುರು ವಿಚಾರಣೆಗೆ ಬಂದಿದ್ದ ಮಹಾರಾಷ್ಟ್ರ ರಾಜಕೀಯ ವಿವಾದದ ಸಂದರ್ಭದಲ್ಲಿ ನಡೆದ ನ್ಯಾಯಾಲಯದ ಕಲಾಪವನ್ನು ಕೃತಕ ಬುದ್ಧಿಮತ್ತೆ ಯಂತ್ರವು ನೇರವಾಗಿ ಪಠ್ಯಕ್ಕೆ ಭಾಷಾಂತರಿಸಿತು. TERES (Technology Enabled RESolution) ಎನ್ನಲಾಗುವ ಈ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬೆಂಗಳೂರು ಮೂಲದ ವಿಕಾಸ್ ಮಹೇಂದ್ರ, ಅವರ ಸಹೋದರ ವಿನಯ್ ಮಹೇಂದ್ರ ಹಾಗೂ ಭಾಮೈದುನ ಬದರಿವಿಶಾಲ್ ಕಿನ್ಹಾಲ್ ಅಭಿವೃದ್ಧಿ ಪಡಿಸಿದ್ದಾರೆ. ನ್ಯಾಯಾಲಯ ಕಲಾಪ ಮುಕ್ತಾಯಗೊಂಡ ನಂತರ ಸುಪ್ರೀಂಕೋರ್ಟ್ ಆ ಭಾಷಾಂತರವನ್ನು ಅಧಿಕೃತವಾಗಿ ತನ್ನ ಅಂತರ್ಜಾಲ ತಾಣದಲ್ಲಿ ಪ್ರಕಟಿಸಿತು.
ಈ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಲಾಯಿತಾದರೂ, ಕಾನೂನು ಭಾಷಾಂತರದ ಈ ಪ್ರಪ್ರಥಮ ತಂತ್ರಜ್ಞಾನ ಆಧಾರಿತ ಎದುರುಗೊಳ್ಳುವಿಕೆಯಿಂದ ನ್ಯಾಯಾಲಯದಲ್ಲಿನ ಪ್ರತಿ ಪದವೂ ದಾಖಲೀಕರಣಗೊಳ್ಳುವುದರಿಂದ ಉತ್ತರದಾಯಿತ್ವ ಹಾಗೂ ಪಾರದರ್ಶಕತೆಯನ್ನು ಹಿಗ್ಗಿಸಲಿದೆ ಎಂದು ಕಾನೂನು ತಜ್ಞರು ಅನುಮೋದಿಸಿದ್ದಾರೆ.

ಸಿಂಗಪೂರ್ ಸೇರಿದಂತೆ ಹಲವಾರು ದೇಶಗಳಲ್ಲಿ ಕಾರ್ಯನಿರ್ವಹಿಸಿರುವ ಮಧ್ಯಸ್ಥಿಕೆ ತಜ್ಞ ಹಾಗೂ ಬೆಂಗಳೂರು ಮೂಲದ ನೊಮೊಲಜಿ ಟೆಕ್ನಾಲಜಿ ಪ್ರೈವೇಟ್ ಲಿಮಿಡೆಡ್ ಸಂಸ್ಥಾಪಕ, 37 ವರ್ಷದ ವಿಕಾಸ್ ಪ್ರಕಾರ, "ಈ ಪ್ರಯಾಣವು ಕುತೂಹಲಕಾರಿ ಹಾಗೂ ನಾಟಕೀಯವಾಗಿತ್ತು" ಎಂದು ಹೇಳಿದ್ದಾರೆ.

ಭಾಷಾಂತರ ತಂತ್ರಜ್ಞಾನದ ಕುರಿತು, "ವಾದಿ-ಪ್ರತಿವಾದಿಗಳಿಬ್ಬರಿಗೂ ಈ ತಂತ್ರಜ್ಞಾನದಿಂದ ಲಾಭವಾಗಲಿದೆ. ಮೊದಲನೆಯದಾಗಿ, ವಕೀಲರು ವಾದ ಮಾಡುವಾಗ ಎಚ್ಚರಿಕೆಯಿಂದ ಇರಬೇಕು ಹಾಗೂ ತಮ್ಮ ಪ್ರತಿ ಪದವನ್ನೂ ಅಳೆದು ತೂಗಿ ಬಳಸಬೇಕು. ಆಗ ಅವರ ವಾದಕ್ಕೆ ಉತ್ತರದಾಯಿತ್ವ ಒದಗಲಿದೆ. ಎರಡನೆಯದಾಗಿ, ಕಕ್ಷಿದಾರರಿಗೆ ತಮ್ಮ ವಕೀಲರು ಏನು ವಾದ ಮಾಡುತ್ತಿದ್ದಾರೆ ಎಂಬ ಬಗ್ಗೆ ಉತ್ತಮ ತಿಳಿವಳಿಕೆ ಮೂಡುತ್ತದೆ. ಮೂರನೆಯದಾಗಿ, ನ್ಯಾಯಾಧೀಶರು ಬೇಕಾಬಿಟ್ಟಿ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ನಾಲ್ಕನೆಯದಾಗಿ, ವಕೀಲರು ತಮ್ಮ ಎಲ್ಲ ವಾದಗಳೂ ದಾಖಲಾಗುವುದನ್ನು ಖಾತ್ರಿ ಪಡಿಸಿಕೊಳ್ಳಬಹುದು" ಎಂದು ವಿಕಾಸ್ ಅಭಿಪ್ರಾಯ ಪಟ್ಟಿದ್ದಾರೆ.

ಆರ್‌ವಿ ಕಾಲೇಜಿನಿಂದ ಎಂಜಿನಿಯರಿಂಗ್ ಪದವೀಧರರಾಗಿರುವ ವಿಕಾಸ್ ಸಹೋದರ ವಿನಯ್ ಸಂಸ್ಥೆಯ ತಾಂತ್ರಿಕತೆಯ ಹೊಣೆ ವಹಿಸಿಕೊಂಡಿದ್ದರೆ, ಅವರ ಭಾಮೈದುನ ಕಿನ್ಹಾಲ್ ಕಾರ್ಯನಿರ್ವಹಣೆಯ ಮುಖ್ಯಸ್ಥರಾಗಿದ್ದಾರೆ.

share
Next Story
X